AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ
ಮಯೂರಿ
ರಾಜೇಶ್ ದುಗ್ಗುಮನೆ
|

Updated on:Jun 09, 2021 | 5:16 PM

Share

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈಗ ಅವರು ಇದೇ ಮೊದಲ ಬಾರಿಗೆ ಮಗುವನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಖುಷಿಪಟ್ಟಿದ್ದಾರೆ.

15/03/2021 ನನ್ನ ಮಗ ಜನಿಸಿದ. ಅಂದು ನನ್ನ ಬದುಕೇ ಬದಲಾಗಿ ಹೋಯಿತು. ನನ್ನ ಮಗನೇ ಈಗ ನನಗೆ ಹೊಸ ಪ್ರಪಂಚ. ನನ್ನ ಮುದ್ದುಕಂದ ಆರವ್​. ಆತ ಹುಟ್ಟಿ 15 ದಿನಗಳ ನಂತರ ತೆಗೆದ ಫೋಟೊಗಳು ಇವು ಎಂದು ಮಯೂರಿ ಬರೆದುಕೊಂಡಿದ್ದಾರೆ.

View this post on Instagram

A post shared by mayuri (@mayurikyatari)

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

Published On - 5:12 pm, Wed, 9 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ