AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ
ಮಯೂರಿ
ರಾಜೇಶ್ ದುಗ್ಗುಮನೆ
|

Updated on:Jun 09, 2021 | 5:16 PM

Share

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈಗ ಅವರು ಇದೇ ಮೊದಲ ಬಾರಿಗೆ ಮಗುವನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಖುಷಿಪಟ್ಟಿದ್ದಾರೆ.

15/03/2021 ನನ್ನ ಮಗ ಜನಿಸಿದ. ಅಂದು ನನ್ನ ಬದುಕೇ ಬದಲಾಗಿ ಹೋಯಿತು. ನನ್ನ ಮಗನೇ ಈಗ ನನಗೆ ಹೊಸ ಪ್ರಪಂಚ. ನನ್ನ ಮುದ್ದುಕಂದ ಆರವ್​. ಆತ ಹುಟ್ಟಿ 15 ದಿನಗಳ ನಂತರ ತೆಗೆದ ಫೋಟೊಗಳು ಇವು ಎಂದು ಮಯೂರಿ ಬರೆದುಕೊಂಡಿದ್ದಾರೆ.

View this post on Instagram

A post shared by mayuri (@mayurikyatari)

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

Published On - 5:12 pm, Wed, 9 June 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ