AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು.

Mayuri Kyatari: ಮೊದಲ ಬಾರಿಗೆ ಮಗುವಿನ ಕ್ಯೂಟ್ ಫೋಟೋ​ ಹಂಚಿಕೊಂಡ ನಟಿ ಮಯೂರಿ
ಮಯೂರಿ
ರಾಜೇಶ್ ದುಗ್ಗುಮನೆ
|

Updated on:Jun 09, 2021 | 5:16 PM

Share

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈಗ ಅವರು ಇದೇ ಮೊದಲ ಬಾರಿಗೆ ಮಗುವನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಖುಷಿಪಟ್ಟಿದ್ದಾರೆ.

15/03/2021 ನನ್ನ ಮಗ ಜನಿಸಿದ. ಅಂದು ನನ್ನ ಬದುಕೇ ಬದಲಾಗಿ ಹೋಯಿತು. ನನ್ನ ಮಗನೇ ಈಗ ನನಗೆ ಹೊಸ ಪ್ರಪಂಚ. ನನ್ನ ಮುದ್ದುಕಂದ ಆರವ್​. ಆತ ಹುಟ್ಟಿ 15 ದಿನಗಳ ನಂತರ ತೆಗೆದ ಫೋಟೊಗಳು ಇವು ಎಂದು ಮಯೂರಿ ಬರೆದುಕೊಂಡಿದ್ದಾರೆ.

View this post on Instagram

A post shared by mayuri (@mayurikyatari)

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

Published On - 5:12 pm, Wed, 9 June 21

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ