AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಡಿ. ಕೌಶಿಕ್ ನಿರ್ದೇಶನದಲ್ಲಿ ‘ಅಮ್ಮನ ಲಾಲಿ’; ಕಾದಂಬರಿ ಆಧಾರಿತ ಚಿತ್ರದಲ್ಲಿವೆ ವಿಶೇಷ ಹಾಡುಗಳು

‘ಅಮ್ಮನ ಲಾಲಿ’ ಚಿತ್ರಕ್ಕೆ ಕನ್ನಡಿಗರಾದ ಅಮೆರಿಕ ನಿವಾಸಿ ರವಿ ದತ್ತಾತ್ರೇಯ ಅವರು ಸಂಗೀತ ಸಂಯೋಜಿಸಿದ್ದಾರೆ. ನಿರ್ದೇಶನದ ಜೊತೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಎಂ.ಡಿ. ಕೌಶಿಕ್ ಅವರು ನಿಭಾಯಿಸುತ್ತಿದ್ದಾರೆ. ಹಿರಿಯ ನಟಿ ಭವ್ಯ ಅವರಿಗೆ ಈ ಸಿನಿಮಾದಲ್ಲಿ ಅಮ್ಮನ ಪಾತ್ರವಿದೆ. ಚಿತ್ರದ ಹಾಡುಗಳಲ್ಲಿ ಡಿವಿಜಿ, ಲಕ್ಷಿನಾರಾಯಣ ಭಟ್ಟ, ದೊಡ್ಡರಂಗೇಗೌಡ ಅವರ ಸಾಹಿತ್ಯ ಬಳಸಲಾಗಿದೆ.

ಎಂ.ಡಿ. ಕೌಶಿಕ್ ನಿರ್ದೇಶನದಲ್ಲಿ ‘ಅಮ್ಮನ ಲಾಲಿ’; ಕಾದಂಬರಿ ಆಧಾರಿತ ಚಿತ್ರದಲ್ಲಿವೆ ವಿಶೇಷ ಹಾಡುಗಳು
‘ಅಮ್ಮನ ಲಾಲಿ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Mar 21, 2024 | 9:49 PM

Share

ನಿರ್ದೇಶಕ ಎಂ.ಡಿ. ಕೌಶಿಕ್​ ಅವರು ‘ಅಮ್ಮನ ಲಾಲಿ’ (Ammana Lali) ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ (Sandalwood) ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿರುವ ಅವರು ಈ ಬಾರಿ ಸಾಹಿತ್ಯ ಕೃತಿಯನ್ನು ಆಧರಿಸಿ ಈ ಸಿನಿಮಾ ಮಾಡುತ್ತಿದ್ದಾರೆ. ಅಂದುಕೊಂಡ ಸಮಯದಲ್ಲಿ, ನಿಗದಿತ ಬಜೆಟ್​ನಲ್ಲಿ ಉತ್ತಮವಾದ ಸಿನಿಮಾಗಳನ್ನು ನೀಡುವ ಮೂಲಕ ಎಂ.ಡಿ. ಕೌಶಿಕ್​ (MD Kaushik) ಅವರು ಸ್ಯಾಂಡಲ್​ವುಡ್​ನಲ್ಲಿ ಹೆಸರು ಮಾಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಅಮ್ಮನ ಲಾಲಿ’ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ..

ಮೊದಲೇ ಹೇಳಿದಂತೆ ‘ಅಮ್ಮನ ಲಾಲಿ’ ಒಂದು ಕಾದಂಬರಿ ಆಧಾರಿತ ಸಿನಿಮಾ. ಗೀತಾ ಡಿ.ಎನ್. ಅವರು ಬರೆದ ಈ ಕಥೆಯಲ್ಲಿ ಇವತ್ತಿನ ಕಾಲಘಟ್ಟದ ವಿಷಯಗಳು ಇವೆ. ನಟನೂ ಆಗಿರುವ ಎಂ.ಡಿ. ಕೌಶಿಕ್​ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ. ಕೇವಲ ತೆರೆಹಿಂದಿನ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣವೂ ಅವರದ್ದೇ. ‘ಎಮರಾಲ್ಡ್ ಕ್ರಿಯೇಶನ್ಸ್’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಅಮೆರಿಕ ನಿವಾಸಿ, ಆರ್ಥಿಕ ತಜ್ಞರೂ ಆಗಿರುವ ಕನ್ನಡಿಗ ರವಿ ದತ್ತಾತ್ರೇಯ ಅವರು ‘ಅಮ್ಮನ ಲಾಲಿ’ ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ಲೇಖಕರ ಕವನಗಳ ಜೊತೆ ಕೆಲವು ಆಲ್ಬಂಗೆ ಸಂಗೀತ ಸಂಯೋಜಿಸಿದ ಅನುಭವ ಅವರಿಗೆ ಇದೆ. ಈಗ ಅವರು ‘ಅಮ್ಮನ ಲಾಲಿ’ ಸಿನಿಮಾದಲ್ಲಿ ಡಿವಿಜಿರವರ ‘ಮಂಕುತಿಮ್ಮನ ಕಗ್ಗ’ ಜೊತೆ ಲಕ್ಷಿನಾರಾಯಣ ಭಟ್ಟ ಮತ್ತು ದೊಡ್ಡರಂಗೇಗೌಡರ ಸಾಹಿತ್ಯವನ್ನು ಬಳಸಿದ್ದಾರೆ. ಈ ಗೀತೆಗಳಿಗೆ ಎಂ.ಡಿ. ಪಲ್ಲವಿ, ರಾಮ್​ ಪ್ರಸಾದ್ ಅವರು ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ನನ್ನೊಬ್ಬನಿಂದ ಕನ್ನಡ ಚಿತ್ರರಂಗ ಅಲ್ಲ, ಹೊಸಬರಿಗೂ ಪ್ರೋತ್ಸಾಹ ಸಿಗಲಿ: ಯಶ್

‘ಇಂದಿನ ದಿನಗಳಲ್ಲಿ ಕೆಲವು ಮನೆಗಳಲ್ಲಿ ನಡೆಯುವ ಘಟನಾವಳಿಗಳು ಈ ಸಿನಿಮಾದಲ್ಲಿ ಇವೆ. ತಾಯಿ-ಮಗಳ ನಡುವೆ ನಡೆಯುವಂತಹ ಆರೋಗ್ಯಕರವಾದ ವಾಗ್ವಾದಗಳು ಮತ್ತು ಸಮಸ್ಯೆಗಳು ತಮ್ಮದೇ ರೀತಿಯಲ್ಲಿ ಅಂತ್ಯವನ್ನು ಕಾಣುತ್ತವೆ’ ಎಂದು ಚಿತ್ರತಂಡದವರು ಹೇಳಿದ್ದಾರೆ. ಆದರೆ ಸಿನಿಮಾದ ನಿರ್ದಿಷ್ಟ ಅಂಶ ಏನು ಎಂಬುದರ ಬಗ್ಗೆ ಏನನ್ನೂ ಬಾಯಿ ಬಿಡದೇ ಗೌಪ್ಯತೆ ಕಾಪಾಡಿಕೊಳ್ಳಲಾಗಿದೆ.

‘ಅಮ್ಮನ ಲಾಲಿ’ ಸಿನಿಮಾ ಪೋಸ್ಟರ್​, ಸಂಗೀತ ನಿರ್ದೇಶಕ ರವಿ ದತ್ತಾತ್ರೇಯ

ಸ್ಯಾಂಡಲ್​ವುಡ್​ನ ಹಿರಿಯ ಕಲಾವಿದೆ ಭವ್ಯ ಅವರು ಈ ಸಿನಿಮಾದಲ್ಲಿ ಅಮ್ಮನ ಪಾತ್ರ ಮಾಡಿದ್ದಾರೆ. ಯತಿರಾಜ್, ಶರತ್, ಪದ್ಮಾ, ರೂಪಾ, ನಂದಿನಿ, ಸೌಮ್ಯ, ಗೀತಾ ಮುಂತಾದವರು ಕೂಡ ‘ಅಮ್ಮನ ಲಾಲಿ’ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ಒಂದು ದೃಶ್ಯವು ಅಮೆರಿಕದಲ್ಲಿ ನಡೆಯುವುದರಿಂದ ಅಲ್ಲಿನ ಕಲಾವಿದರಾದ ರಮ್ಯಾ, ಗೌರವ್‌ ಅವರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ