AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಧ್ರುವ ಸರ್ಜಾ ಬರ್ತ್​ಡೇಗೆ ವಿಶೇಷವಾಗಿ ವಿಶ್​ ಮಾಡಿದ ಮೇಘನಾ ರಾಜ್​

Happy Birthday Dhruva Sarja: ಮೇಘನಾ ರಾಜ್​ ಇನ್​ಸ್ಟಾಗ್ರಾಮ್​ನಲ್ಲಿ ‘ಹ್ಯಾಪಿ ಬರ್ತ್​ಡೇ BIL​’ ಎಂದು ವಿಶ್​ ಮಾಡಿದ್ದಾರೆ. BIL ಎನ್ನುವ ಪದ​ ಎಲ್ಲರ ಗಮನ ಸೆಳೆದಿದೆ. BIL ಎಂದರೆ ‘ಬ್ರದರ್​ ಇನ್​ ಲಾ’ ಎಂದರ್ಥ

Meghana Raj: ಧ್ರುವ ಸರ್ಜಾ ಬರ್ತ್​ಡೇಗೆ ವಿಶೇಷವಾಗಿ ವಿಶ್​ ಮಾಡಿದ ಮೇಘನಾ ರಾಜ್​
ಧ್ರುವ-ಚಿರು- ಮೇಘನಾ ರಾಜ್
TV9 Web
| Edited By: |

Updated on:Oct 06, 2021 | 6:14 PM

Share

ಇಂದು (ಅಕ್ಟೋಬರ್​ 6) ಧ್ರುವ ಸರ್ಜಾ ಬರ್ತ್​ಡೇ. ಈ ವಿಶೇಷ ದಿನದ ಅಂಗವಾಗಿ ಅನೇಕ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇನ್ನು, ಧ್ರುವ ಕುಟುಂಬದವರು ಕೂಡ ವಿಶೇಷವಾಗಿ ವಿಶ್​ ಮಾಡುತ್ತಿದ್ದಾರೆ. ಈಗ ಧ್ರುವ ಸರ್ಜಾಗೆ ಮೇಘನಾ ರಾಜ್​ ಅವರು ವಿಶೇಷವಾಗಿ ವಿಶ್​ ಮಾಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟಾಗ ಮೇಘನಾ ರಾಜ್​ ತೀವ್ರವಾಗಿ ಕುಸಿದು ಹೋಗಿದ್ದರು. ಚಿರುವನ್ನು ಕಳೆದುಕೊಂಡಿದ್ದು ಧ್ರುವ ಅವರಿಗೂ ತೀವ್ರ ನೋವನ್ನು ತಂದಿತ್ತು. ಆದರೂ, ಮೇಘನಾ ರಾಜ್​ ಅವರನ್ನು ಧ್ರುವ ಅಣ್ಣನಂತೆ ನಿಂತು ಸಮಾಧಾನ ಪಡಿಸಿದ್ದರು. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇಂದು ಮೇಘನಾ ರಾಜ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ‘ಹ್ಯಾಪಿ ಬರ್ತ್​ಡೇ BIL​’ ಎಂದು ವಿಶ್​ ಮಾಡಿದ್ದಾರೆ. BIL ಎನ್ನುವ ಪದ​ ಎಲ್ಲರ ಗಮನ ಸೆಳೆದಿದೆ. BIL ಎಂದರೆ ‘ಬ್ರದರ್​ ಇನ್​ ಲಾ’ ಎಂದರ್ಥ.

ಮೇಘನಾ ಪಾಲಿಗೆ ಅಕ್ಟೋಬರ್​ ವಿಶೇಷ ತಿಂಗಳು. ಮೇಘನಾ ರಾಜ್​ ಪತಿ ಚಿರಂಜೀವಿ ಸರ್ಜಾ, ಮಗ ರಾಯನ್​ ರಾಜ್​ ಸರ್ಜಾ, ಭಾವ ಧ್ರುವ ಹುಟ್ಟಿದ್ದು ಅಕ್ಟೋಬರ್​ ತಿಂಗಳಲ್ಲೇ. ಕೇವಲ ಐದು ದಿನಗಳ ಅಂತರದಲ್ಲಿ ಇಬ್ಬರ ಜನ್ಮದಿನ ಬರಲಿದೆ. ಅಕ್ಟೋಬರ್​ 17 ಚಿರಂಜೀವಿ ಜನ್ಮದಿನ.​ ರಾಯನ್​ ಹುಟ್ಟಿದ್ದು ಅಕ್ಟೋಬರ್​ 22ರಂದು.

ಅದ್ದೂರಿ, ಬಹದ್ದೂರ್​, ಭರ್ಜರಿ, ಪೊಗರು ಸಿನಿಮಾಗಳ ಮೂಲಕ ಧ್ರುವ ತಮ್ಮದೇ ಛಾಪು ಮೂಡಿಸಿದ್ದಾರೆ. ಇಂದು (ಅಕ್ಟೋಬರ್ 6) ಧ್ರುವ ಹುಟ್ಟುಹಬ್ಬದ ಗಿಫ್ಟ್ ಆಗಿ ‘ಮಾರ್ಟಿನ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಐದು ಭಾಷೆಯಲ್ಲಿ ಮಾರ್ಟಿನ್ ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ಆ ಮೂಲಕ ವಿಶೇಷವಾಗಿ ನಟ ಧ್ರುವ ಸರ್ಜಾ ಅವರಿಗೆ ಶುಭ ಹಾರೈಸಿದೆ. ಇನ್ನು ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರಿಂದ ಧ್ರುವ ಸರ್ಜಾ ಅವರಿಗೆ ಬರ್ತ್​ಡೇ ವಿಶ್​ ಹರಿದುಬರುತ್ತಿದೆ.

ಇದನ್ನೂ ಓದಿ: ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾಗೆ 11ನೇ ತಿಂಗಳ ಸಂಭ್ರಮ; ಇಲ್ಲಿದೆ ವಿಡಿಯೋ

ಮೇಘನಾ ರಾಜ್​ಗೆ ಅಕ್ಟೋಬರ್​ ತಿಂಗಳು ಸ್ಪೆಷಲ್​; ವಿಶೇಷ ಪೋಸ್ಟ್​ ಹಂಚಿಕೊಂಡ ನಟಿ

Published On - 5:57 pm, Wed, 6 October 21

ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ