AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 28ಕ್ಕೆ ರಿಲೀಸ್ ಆಗಲಿದೆ ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಜೋಡಿಯ ಓಎಲ್​ಸಿ ಸಿನಿಮಾ

ಕಿರುತೆರೆ ಮೂಲಕ ಜನಪ್ರಿಯತೆ ಪಡೆದ ನಟಿ ಮೇಘಾ ಶೆಟ್ಟಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕವೀಶ್ ಶೆಟ್ಟಿ ಜೊತೆ ಮೇಘಾ ಶೆಟ್ಟಿ ಅಭಿನಯಿಸಿದ ‘ಓಎಲ್​ಸಿ’ ಸಿನಿಮಾ ಈಗ ಬಿಡುಗಡೆ ಆಗುತ್ತಿದೆ. ‘ಆಪರೇಷನ್ ಲಂಡನ್ ಕೆಫೆ’ ಎಂಬುದು ಈ ಶೀರ್ಷಿಕೆಯ ವಿಸ್ತೃತ ರೂಪ. ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

ನವೆಂಬರ್ 28ಕ್ಕೆ ರಿಲೀಸ್ ಆಗಲಿದೆ ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಜೋಡಿಯ ಓಎಲ್​ಸಿ ಸಿನಿಮಾ
Operation London Cafe Movie Team
ಮದನ್​ ಕುಮಾರ್​
|

Updated on: Nov 26, 2025 | 9:13 PM

Share

ಕನ್ನಡ ಮಾತ್ರವಲ್ಲದೇ ಮರಾಠಿ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಓ.ಎಲ್.ಸಿ (ಆಪರೇಷನ್ ಲಂಡನ್ ಕೆಫೆ) ಸಿನಿಮಾ ನಿರ್ಮಾಣ ಆಗಿದೆ. ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ (Megha Shetty) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಓ.ಎಲ್.ಸಿ (Operation London Cafe) ಸಿನಿಮಾ ನವೆಂಬರ್ 28ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಆ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರೀ ರಿಲೀಸ್ ಇವೆಂಟ್​​ನಲ್ಲಿ ಶಶಾಂಕ್ ಅವರು ಸಾಂಗ್ ರಿಲೀಸ್ ಮಾಡಿದರು. ವಿ. ನಾಗೇಂದ್ರಪ್ರಸಾದ್ ಅವರು ಈ ಹಾಡನ್ನು ಬರೆದಿದ್ದಾರೆ. ಹಾಡು ಬಿಡುಗಡೆ ಮಾಡಿದ ಶಶಾಂಕ್ ಅವರು ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ಸಡಗರ ರಾಘವೇಂದ್ರ ಅವರು ಈ ವೇಳೆ ಮಾತನಾಡಿದರು. ‘ಶಶಾಂಕ್ ಅವರ ಜೊತೆಗೆ ನಾನು ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಓ.ಎಲ್.ಸಿ ನನ್ನ ಮೊದಲ ನಿರ್ದೇಶನದ ಸಿನಿಮಾ. ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಜೊತೆ ಮರಾಠಿ ಭಾಷೆಯ ಶಿವಾನಿ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ಮಾಡಿದ್ದಾರೆ’ ಎಂದು ಅವರು ಹೇಳಿದರು.

‘ಇದು ನಕ್ಸಲಿಸಂ ಕುರಿತಾದ ಕಥೆ‌. ಹಾಗಂತ ನಕ್ಸಲಿಸಂ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಸಿನಿಮಾ ಕೂಡ ಅಲ್ಲ. ಇದು ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’. ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ನಟಿಸಿರುವುದು ಈ ಸಿನಿಮಾದ ವಿಶೇಷ. ಮೊದಲು ಕನ್ನಡದಲ್ಲಿ ನವೆಂಬರ್ 28ರಂದು ಕನ್ನಡದಲ್ಲಿ ಮಾತ್ರ ಸಿನಿಮಾ ಬಿಡುಗಡೆ ಆಗಲಿದೆ’ ಎಂದಿದ್ದಾರೆ ನಿರ್ದೇಶಕರು.

ಕವೀಶ್ ಶೆಟ್ಟಿ ಮಾತನಾಡಿ, ‘ಶಶಾಂಕ್ ಅವರ ಜೊತೆಗೆ ನಾನು ಸಹಾಯಕ ನಿರ್ದೇಶಕನಾಗಿ, ಸಡಗರ ರಾಘವೇಂದ್ರ ಅವರು ಸಹ-ನಿರ್ದೇಶಕನಾಗಿ ಮುಂಗಾರು ಮಳೆ 2 ಸಿನಿಮಾದಲ್ಲಿ ಕೆಲಸ ಮಾಡಿದ್ದೆವು. ಈಗ ಈ ಸಿನಿಮಾಗೆ ನಾನೇ ಕಥೆ ಬರೆದು, ನಾಯಕನಾಗಿ ನಟಿಸಿದ್ದೇನೆ’ ಎಂದರು. ಮೇಘಾ ಶೆಟ್ಟಿ ಮಾತನಾಡಿ, ‘ನಾನು ಈ ಸಿನಿಮಾದಲ್ಲಿ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ’ ಎಂದರು.

ಇದನ್ನೂ ಓದಿ: ದಂತದ ಗೊಂಬೆ ರೀತಿ ಕಾಣಿಸುತ್ತಿದ್ದಾರೆ ಮೇಘಾ ಶೆಟ್ಟಿ

ಸುದ್ದಿಗೋಷ್ಠಿಯಲ್ಲಿ ಮರಾಠಿ ನಟಿ ಶಿವಾನಿ ಕೂಡ ಭಾಗಿಯಾಗಿದ್ದರು. ಛಾಯಾಗ್ರಾಹಕ ನಾಗಾರ್ಜುನ್, ಕಲಾ ನಿರ್ದೇಶಕ ವರದರಾಜ್ ಸಹ ಉಪಸ್ಥಿತರಿದ್ದರು. ಪ್ರಾಂಶು ಝಾ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ವಿವೇಕ್ ಶೆಟ್ಟಿ ಬಾರ್ಕೂರ್ ಹಾಗೂ ವಿಜಯ್ ಪ್ರಕಾಶ್‌ ಅವರು ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?