AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ, ಮರಾಠಿ, ಹಿಂದಿ ಭಾಷೆಯಲ್ಲಿ ಮೇಘಾ ಶೆಟ್ಟಿ ಸಿನಿಮಾ ‘ಆಪರೇಷನ್ ಲಂಡನ್ ಕೆಫೆ’

ಭಿನ್ನ ಶೀರ್ಷಿಕೆಯ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದ ಬಿಡುಗಡೆ ದಿನಾಂಕವನ್ನು ತಿಳಿಸಲಾಗಿದೆ. ನಟಿ ಮೇಘಾ ಶೆಟ್ಟಿ ಹಾಗೂ ನಟ ಕವೀಶ್ ಶೆಟ್ಟಿ ಅಭಿನಯಿಸಿರುವ ಮೂರು ಭಾಷೆಯ ಸಿನಿಮಾ ಇದು. ಕನ್ನಡ ಚಿತ್ರರಂಗ ಮತ್ತು ಮರಾಠಿ ಚಿತ್ರತಂಗದ ಹೆಸರಾಂತ ಕಲಾವಿದರ ಸಂಗಮ ಈ ಸಿನಿಮಾದಲ್ಲಿ ಆಗಿದೆ.

ಕನ್ನಡ, ಮರಾಠಿ, ಹಿಂದಿ ಭಾಷೆಯಲ್ಲಿ ಮೇಘಾ ಶೆಟ್ಟಿ ಸಿನಿಮಾ ‘ಆಪರೇಷನ್ ಲಂಡನ್ ಕೆಫೆ’
Megha Shetty
ಮದನ್​ ಕುಮಾರ್​
|

Updated on: Oct 29, 2025 | 4:27 PM

Share

ನವೆಂಬರ್ 28ರಂದು ಓ.ಎಲ್.ಸಿ (ಆಪರೇಷನ್ ಲಂಡನ್ ಕೆಫೆ) ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​​ಗೆ ಕೌಂಟ್ಡೌನ್ ಶುರು ಆಗಿದ್ದು, ಸಿನಿಪ್ರಿಯರಲ್ಲಿ ಕೂತುಕ ಮೂಡಿಸಿದೆ. ಮೇಘಾ ಶೆಟ್ಟಿ (Megha Shetty), ಕವೀಶ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಿನಿಪ್ರಿಯರು ಈ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಚಿತ್ರತಂಡ ಪೋಸ್ಟರ್ ಬಿಡುಗಡೆ ಮೂಲಕ ರಿಲೀಸ್ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಸಿನಿಮಾ ಕನ್ನಡ, ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿರುವುದು ವಿಶೇಷ.

‘ಆಪರೇಷನ್ ಲಂಡನ್ ಕೆಫೆ’ ಸಿನಿಮಾವನ್ನು ಉಡುಪಿ ಮೂಲದ ‘ಇಂಡಿಯನ್ ಫಿಲ್ಮ್ ಫ್ಯಾಕ್ಟರಿ’, ಮರಾಠಿಯ ‘ದೀಪಕ್ ರಾಣೆ ಫಿಲ್ಮ್ಸ್’ ಮೂಲಕ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಹಾಗೂ ವಿಜಯ್ ಪ್ರಕಾಶ್ ಅವರು ನಿರ್ಮಾಣ ಮಾಡಿದ್ದಾರೆ. ಶೀಘ್ರದಲ್ಲೇ ಮಾಸ್ ಮತ್ತು ಮೆಲೋಡಿ ಹಾಡುಗಳು ಜೊತೆಗೆ ಟ್ರೇಲರ್ ಬಿಡುಗಡೆ ಮಾಡಲಿರುವುದಾಗಿ ಚಿತ್ರತಂಡ ತಿಳಿಸಿದೆ.

ನಟ ಕವೀಶ್ ಶೆಟ್ಟಿ ಅವರು ಈ ಮೊದಲು ‘ಜಿಲ್ಕಾ’ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾದಲ್ಲಿ ಅವರು ಲವರ್ ಕಮ್ ಚಾಕಲೇಟ್ ಬಾಯ್ ಆಗಿ ಗಮನ ಸೆಳೆದಿದ್ದರು. ಈಗ ಅವರು ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದ ಮೂಲಕ ಮಾಸ್ ಕಮ್ ಆ್ಯಕ್ಷನ್ ಹೀರೋ ಆಗುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಮೇಘಾ ಶೆಟ್ಟಿ ಅಭಿನಯಿಸಿದ್ದಾರೆ.

‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ಅವರ ಗೆಟಪ್ ಗಮನ ಸೆಳೆಯುತ್ತಿದೆ. ಅಪ್ಪಟ ಹಳ್ಳಿ ಸೊಗಡಿನ ಹೈಸ್ಕೂಲು ಹುಡುಗಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಖಡಕ್ ಲುಕ್ ಮೂಲಕ ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡ್ಕೆ ಅವರು ಅಭಿನಯಿಸಿದ್ದಾರೆ. ಅರ್ಜುನ್ ಕಾಪಿಕಾಡ್ ಅವರು ಆರ್ಮಿ ಆಫೀಸರ್ ಪಾತ್ರವನ್ನು ಮಾಡಿದ್ದಾರೆ.

ಇದನ್ನೂ ಓದಿ: ಮೇಘಾ ಶೆಟ್ಟಿ ಮನೆಯಲ್ಲಿ ದೀಪಾವಳಿ ಸಂಭ್ರಮ ಹೇಗಿತ್ತು ನೋಡಿ

ಈ ಸಿನಿಮಾಗೆ ಸಡಗರ ರಾಘವೇಂದ್ರ ಅವರು ನಿರ್ದೇಶನ ಮಾಡಿದ್ದಾರೆ. ಬಿ. ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ಥ್, ಅಶ್ವಿನಿ ಚವೇರಾ ಮುಂತಾದ ಕಲಾವಿದರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಆರ್. ಡಿ. ನಾಗಾರ್ಜುನ್ ಛಾಯಾಗ್ರಹಣ ಮಾಡಿದ್ದಾರೆ. ಪ್ರಾಂಶು ಝಾ ಸಂಗೀತ ನೀಡಿದ್ದಾರೆ. ವರದರಾಜ್ ಕಾಮತ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ವಿಕ್ರಂ ಮೋರ್, ಮಾಸ್ ಮಾದ, ಅರ್ಜುನ್ ರಾಜ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ