AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಪ್ರೇಮಿಗಳ ದಿನಕ್ಕೆ ಚಿರು ಪುತ್ರನ ಪೋಟೋ ರಿವೀಲ್

Meghana Raj Instagram Post: ಪ್ರೇಮಿಗಳ ದಿನವಾದ ಫೆಬ್ರವರಿ 14ಕ್ಕೆ ಜೂನಿಯರ್ ಚಿರಂಜೀವಿಯ ಪೋಟೋವನ್ನು ರಿವೀಲ್ ಮಾಡುತ್ತೇವೆ ಎಂದು ನಟಿ ಮೇಘನಾ ರಾಜ್ ಸಾಮಾಜಿಕ ಕಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೆ ಮೇಘನಾ ತಮ್ಮ ಮುದ್ದು ಮಗುವಿನ ಪೋಟೋ ಹಂಚಿಕೊಂಡಿಲ್ಲ.

Meghana Raj: ಪ್ರೇಮಿಗಳ ದಿನಕ್ಕೆ ಚಿರು ಪುತ್ರನ ಪೋಟೋ ರಿವೀಲ್
ಮೇಘನಾ ರಾಜ್ ಸರ್ಜಾ
sandhya thejappa
|

Updated on:Feb 12, 2021 | 10:58 AM

Share

ಬೆಂಗಳೂರು: ಇತ್ತಿಚೆಗೆ ಮೇಘನಾ ರಾಜ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ವಿಶೇಷವಾದ ಪೋಸ್ಟ್ ಹಾಕಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಸದ್ಯ ಆ ಸಂದೇಶಕ್ಕೆ ಇಂದು ಬ್ರೇಕ್ ಬಿದ್ದಿದೆ. ಇದೇ ಫೆಬ್ರವರಿ 14 ಪ್ರೇಮಿಗಳ ದಿನದಂದೇ ಜೂನಿಯರ್ ಚಿರು ಪೋಟೋ ರಿವೀಲ್ ಮಾಡೋದಾಗಿ ಮೇಘನಾ ರಾಜ್ ಇನ್​ಸ್ಟಾಗ್ರಾಮ್​ನಲ್ಲಿ ಮಾಹಿತಿ ನೀಡಿದ್ದಾರೆ.

ಪ್ರೇಮಿಗಳ ದಿನವಾದ ಫೆಬ್ರವರಿ 14ಕ್ಕೆ ಜೂನಿಯರ್ ಚಿರಂಜೀವಿಯ ಫೋಟೋವನ್ನು ರಿವೀಲ್ ಮಾಡುತ್ತೇವೆ ಎಂದು ನಟಿ ಮೇಘನಾ ರಾಜ್ ಸಾಮಾಜಿಕ ಕಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೆ ಮೇಘನಾ ತಮ್ಮ ಮುದ್ದು ಮಗುವಿನ ಪೋಟೋ ಹಂಚಿಕೊಂಡಿಲ್ಲ. ಸದ್ಯ ಚಿರು ಹಾಗು ಮೇಘನಾ ಬಾಂಧವ್ಯದ ವಿಡಿಯೋ ಹರಿ ಬಿಟ್ಟು ತನ್ನ ಪುತ್ರನ ಫೋಟೋವನ್ನು ರಿವೀಲ್ ಮಾಡುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ನಟ ಚಿರಂಜೀವಿ ಮತ್ತು ನಟಿ ಮೇಘನಾ ರಾಜ್ ಪ್ರೀತಿಸಿ ವಿವಾಹವಾಗಿದ್ದರು. 2018 ಮೇ 2ರಂದು ಸಪ್ತಪತಿ ತುಳಿದಿದ್ದರು. ಚಿರು ಮತ್ತು ಮೇಘನಾ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದರು. ಮೇಘನಾ ತಾಯಿ ಪ್ರಮಿಳಾ ಜೋಷಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾದ್ದರಿಂದ ಏಪ್ರಿಲ್ 29ರಂದು ರೋಮನ್ ಕ್ಯಾಥೋಲಿಕ್ ಪದ್ಧತಿಯಲ್ಲಿ ಮದುವೆಯಾಗಿದ್ದರು. ಆ ಬಳಿಕ  ಮೇ 2ರಂದು ಹಿಂದೂ ಧರ್ಮದ ಸಂಪ್ರದಾಯದಂತೆ ಅರಮನೆ ಮೈದಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

View this post on Instagram

A post shared by Meghana Raj Sarja (@megsraj)

2020 ರ ಜೂನ್ 7 ರಂದು ಚಿರಂಜೀವಿ ಉಸಿರಾಟದ ಸಮಸ್ಯೆಯಿಂದ ನಿಧನ ಹೊಂದಿದ್ದರು. ಈ ಹೊತ್ತಿಗೆ ಮೇಘನಾ ರಾಜ್​ ಗರ್ಭಿಣಿಯಾಗಿದ್ದರು. ತನ್ನ ಗಂಡನ ಸಾವಿನ ನೋವಲ್ಲಿದ್ದ ಮೇಘನಾರನ್ನು ಮೈದುನ ದ್ರುವ ಸರ್ಜಾ ತಮ್ಮನಂತೆ ಹೆಗಲಾಗಿ ನಿಂತರು. 2020 ಅಕ್ಟೋಬರ್ 22 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಮೇಘನಾ ರಾಜ್ ಪುತ್ರನಿಗೆ ದ್ರುವ ಸರ್ಜಾ ಸುಮಾರು ಅಂದಾಜು 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಖರೀದಿಸಿದ್ದರು.

ಇದನ್ನೂ ಓದಿ: 1100ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ ಆಗಲು ಸಿದ್ಧವಾಗ್ತಿದೆ ಪೊಗರು.. ರಾಬರ್ಟ್ ಸಿನಿಮಾದ ತೆಲುಗು ಸಾಂಗ್ ಇಂದು ರಿಲೀಸ್

Published On - 9:59 am, Fri, 12 February 21

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ