AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತತ್ಸಮ ತದ್ಭವ’ ಶೋ ನೋಡಲು ಮೆಟ್ರೋದಲ್ಲಿ ತೆರಳಿದ ನಟಿ ಮೇಘನಾ ರಾಜ್

ಈ ಬಗ್ಗೆ ಪನ್ನಗ ಭರಣ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಪ್ರೀಮಿಯರ್ ಶೋನಲ್ಲಿ ನಮ್ಮ ಅಭಿಮಾನಿಗಳನ್ನು ಭೇಟಿ ಮಾಡಲು ಮೆಟ್ರೋದಲ್ಲಿ ಸಾಗಿದೆವು’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ವಿವಿಧ ಬಗೆಯಲ್ಲಿ ಇದಕ್ಕೆ ಕಮೆಂಟ್​ಗಳು ಬಂದಿವೆ.

‘ತತ್ಸಮ ತದ್ಭವ’ ಶೋ ನೋಡಲು ಮೆಟ್ರೋದಲ್ಲಿ ತೆರಳಿದ ನಟಿ ಮೇಘನಾ ರಾಜ್
ಮೇಘನಾ, ಪನ್ನಗ ಭರಣ, ವಾಸುಕಿ
ರಾಜೇಶ್ ದುಗ್ಗುಮನೆ
|

Updated on: Sep 15, 2023 | 9:04 AM

Share

‘ತತ್ಸಮ ತದ್ಭವ’ ಸಿನಿಮಾ ಇಂದು (ಸೆಪ್ಟೆಂಬರ್ 15) ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ಮೇಘನಾ ರಾಜ್ (Meghana Raj) ಅವರು ದೊಡ್ಡ ಪರದೆಗೆ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರೀಮಿಯರ್ ಶೋ ಸೆಪ್ಟೆಂಬರ್ 15ರಂದು ಆಯೋಜನೆ ಮಾಡಲಾಗಿತ್ತು. ಇದನ್ನು ವೀಕ್ಷಿಸಲು ಮೇಘನಾ ರಾಜ್, ನಿರ್ಮಾಪಕ ಪನ್ನಗ ಭರಣ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಮೇಘನಾ ರಾಜ್ ಅವರು ಹಲವು ಕಾರಣಗಳಿಂದ ನಟನೆಯಿಂದ ದೂರವಿದ್ದರು. ಈಗ ಅವರು ಕಂಬ್ಯಾಕ್ ಮಾಡಿದ್ದಾರೆ. ಇದಕ್ಕಾಗಿ ಅವರು ವಿಶೇಷ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದುಕೊಂಡ ಪತಿಯನ್ನು ಹುಡುಕುವ ಕಥೆ ಸಿನಿಮಾದಲ್ಲಿದೆ.

ಈ ಬಗ್ಗೆ ಪನ್ನಗ ಭರಣ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಪ್ರೀಮಿಯರ್ ಶೋನಲ್ಲಿ ನಮ್ಮ ಅಭಿಮಾನಿಗಳನ್ನು ಭೇಟಿ ಮಾಡಲು ಮೆಟ್ರೋದಲ್ಲಿ ಸಾಗಿದೆವು’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ವಿವಿಧ ಬಗೆಯಲ್ಲಿ ಇದಕ್ಕೆ ಕಮೆಂಟ್​ಗಳು ಬಂದಿವೆ. ಮೇಘನಾ ಅವರ ಸರಳತೆಯನ್ನು ಅನೇಕರು ಕೊಂಡಾಡಿದ್ದಾರೆ.

ಕಂಬ್ಯಾಕ್ ಸಿನಿಮಾ ಎಂದಾಗ ಅದಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲೇಬೇಕು. ಹೀಗಾಗಿ, ಮೇಘನಾ ರಾಜ್ ಅವರು ‘ತತ್ಸಮ ತದ್ಭವ’ ಚಿತ್ರಕ್ಕೆ ಭರ್ಜರಿ ಪ್ರಮೋಷನ್ ನೀಡುತ್ತಿದ್ದಾರೆ. ನಿರ್ಮಾಪಕ ಪನ್ನಗ ಭರಣ ಕೂಡ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ವಿವಿಧ ಕಾಲೇಜುಗಳಿಗೆ ತೆರಳಿ ತಂಡ ಪ್ರಚಾರ ಮಾಡಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರು ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಈ ಚಾಲೆಂಜ್​ ಗೆದ್ದರೆ ನಿಮಗೆ ಸಿಗಲಿದೆ ಮೇಘನಾ ರಾಜ್ ಭೇಟಿ ಮಾಡುವ ಅವಕಾಶ; ನೀವು ಮಾಡಬೇಕಾಗಿದ್ದಿಷ್ಟೇ..

ಯುವ ನಿರ್ದೇಶಕ ವಿಶಾಲ್ ಆತ್ರೇಯ ಅವರು ‘ತತ್ಸಮ ತದ್ಭವ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಚಿತ್ರದ ಲಾಲಿ ಹಾಡು ಗಮನ ಸೆಳೆದಿದೆ. ಸಿನಿಮಾ ನೋಡಿದವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ