AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಕುಟುಂಬದ ನಡುವೆ ಬಿರುಕು ಮೂಡಿದೆ ಎಂಬ ರೀತಿಯಲ್ಲಿ ಕೆಲವು ಸುದ್ದಿಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿರುವುದು ಎರಡೂ ಕುಟುಂಬಕ್ಕೆ ಬೇಸರ ತರಿಸಿದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಲಾಯಿತು.

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು
ಪ್ರಮೀಳಾ ಜೋಷಾಯ್​, ಧ್ರುವ ಸರ್ಜಾ, ಮೇಘನಾ ರಾಜ್​, ಸುಂದರ್​ ರಾಜ್​
TV9 Web
| Edited By: |

Updated on: Sep 03, 2021 | 1:36 PM

Share

ಚಿರಂಜೀವಿ ಸರ್ಜಾ-ಮೇಘನಾ ರಾಜ್​ ಪುತ್ರನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಡಲಾಗಿದೆ. ನಾಮಕರಣದ ಬಳಿಕ ಮೊದಲ ಬಾರಿಗೆ ಕುಟುಂಬದವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮೇಘನಾ ರಾಜ್​ ತಾಯಿ ಪ್ರಮೀಳಾ ಜೋಷಾಯ್​ ಅವರು ಕೆಲವು ವಿಚಾರಗಳ ಬಗ್ಗೆ ಅಸಮಾಧಾನ ತೋಡಿಕೊಂಡರು. ‘ನನ್ನ ಮಗಳು ಹುಟ್ಟಿದಾಗಿನಿಂದ ಇಲ್ಲಿಯವರೆಗೆ ನಾವೇ ಅವಳನ್ನು ನೋಡಿಕೊಂಡಿರೋದು. ಬೇರೆ ಯಾರೋ ನೋಡಿಕೊಳ್ಳುವುದು ಬೇಕಾಗಿಯೂ ಇಲ್ಲ. ಇರುವ ವಿಷಯವನ್ನು ನಾನು ಹೇಳುತ್ತಿದ್ದೇನೆ’ ಎಂದು ಅವರು ನೇರವಾಗಿ ಮಾತು ಆರಂಭಿಸಿದರು.

‘ಮೇಘನಾಳ ಎಲ್ಲ ಬೇಕು-ಬೇಡಗಳ ಬಗ್ಗೆ ನಮಗೆ ಗೊತ್ತಿದೆ. ಅವರು ಕೊಟ್ರು, ಇವರು ಕೊಟ್ರು, ಅವರು ನೋಡಿಕೊಳ್ತಾರೆ, ಇವರು ನೋಡಿಕೊಳ್ತಾ ಇದಾರೆ ಅಂತ ಸುಮ್ಮನೆ ಏನೇನೋ ಪ್ರಚಾರ ಆಗುತ್ತಿದೆ. ಅದು ನನ್ನ ಮನಸ್ಸಿಗೆ ತುಂಬ ನೋವಾಯಿತು. ನಮಗೆ ಪ್ರಚಾರ ಬೇಕಿಲ್ಲ. ನಮಗೆ ಯಾರೂ ಏನೂ ಕೊಟ್ಟಿಲ್ಲ. ನಮ್ಮದನ್ನು ನಾವು ನೋಡಿಕೊಂಡು ಹೋಗುತ್ತಿದ್ದೇವೆ’ ಎಂದು ಪ್ರಮೀಳಾ ಜೋಷಾಯ್​ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಸುಂದರ್​ ರಾಜ್​ ವಿವರಣೆ ನೀಡಿದರು. ‘ಇದೆಲ್ಲ ಯೂಟ್ಯೂಬ್​ನ ಅವಾಂತರಗಳು. ಅದು ಇತ್ತೀಚೆಗೆ ಜಾಸ್ತಿ ಆಗಿದೆ. ಯೂಟ್ಯೂಬ್​ನಲ್ಲಿ ಬರುವುದನ್ನು ಜನರು ನಂಬುತ್ತಾರೆ. ಕೆಲವರು ನಂಬುವುದಿಲ್ಲ’ ಎಂದು ಅವರು ಹೇಳಿದರು. ಇದನ್ನೆಲ್ಲ ಹೇಳಿಕೊಳ್ಳಲು ಇದು ಸಮಯವಲ್ಲ ಎಂದು ಮೇಘನಾ ಸುಮ್ಮನಾದರು. ಬಳಿಕ ಮಾತನಾಡಿದ ಧ್ರುವ ಸರ್ಜಾ ಅವರು ಕೆಲವು ಸ್ಪಷ್ಟನೆ ನೀಡಿದರು.

‘ಅಣ್ಣನ ಮಗನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಟ್ಟಿದ್ದೇವೆ.  ರಾಜ್​ ಮತ್ತು ಸರ್ಜಾ ಎಂಬ ಈ ಹೆಸರಿನಲ್ಲಿಯೇ ಗೊತ್ತಾಗುತ್ತದೆ. ರಾಜ್​-ಸರ್ಜಾ ಫ್ಯಾಮಿಲಿ ಜೊತೆಯಾಗಿಯೇ ಇದೆ. ಯೂಟ್ಯೂಬ್​ ಚಾನೆಲ್​ಗಳ ಮೂಲಕ ತಪ್ಪು ಮಾಹಿತಿ ಹರಡಬೇಡಿ. ಅದರ ಪ್ರಭಾವಕ್ಕೆ ನಾವು ಒಳಗಾಗುವುದಿಲ್ಲ. ಸುಂದರ್​ ರಾಜ್​ ಅಂಕಲ್​, ಪ್ರಮೀಳಾ ಜೋಷಾಯ್​ ಆಂಟಿ ಮತ್ತು ಮೇಘನಾ ಅತ್ತಿಗೆ ಸೇರಿದಂತೆ ಎಲ್ಲರೂ ನಮ್ಮೊಂದಿಗೆ ಸಹಕಾರದಿಂದ ಇದ್ದಾರೆ. ನಾವು ಖುಷಿಯಾಗಿದ್ದೇವೆ.

‘ಈ ಸಂದರ್ಭದಲ್ಲಿ ನಾನು ಅಣ್ಣನನ್ನು ನೆನಪಿಸಿಕೊಳ್ಳುತ್ತೇನೆ. ರಾಯನ್​ ಎಂಬ ಹೆಸರಿಗೆ ಸಂಸ್ಕೃತದಲ್ಲಿ ಯುವರಾಜ ಎಂಬ ಅರ್ಥ ಇದೆ. ಅವನು ಯುವರಾಜನ ರೀತಿಯೇ ಇರುತ್ತಾನೆ’ ಎಂದು ಧ್ರುವ ಸರ್ಜಾ ಹೇಳಿದರು. ‘ಮೇಘನಾಳನ್ನು ನೋಡಿದರೆ ಖುಷಿ ಆಗುತ್ತದೆ. ಎಲ್ಲವನ್ನೂ ಅವಳು ಸಮರ್ಥವಾಗಿ ನಿಭಾಯಿಸುತ್ತಾಳೆ. ಅಪ್ಪನ ಫೋಟೋ ನೋಡಿದರೆ ರಾಯನ್​ ಚೆನ್ನಾಗಿ ಪ್ರತಿಕ್ರಿಯಿಸುತ್ತಾನೆ. ಅವನ ನಗುವಲ್ಲಿ ನಾವು ಸಂತೋಷವಾಗಿದ್ದೇವೆ’ ಎಂದು ಧ್ರುವ ಪತ್ನಿ ಪ್ರೇರಣ ಹೇಳಿದರು.

ಇದನ್ನೂ ಓದಿ:

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ

Meghana Raj: ಮೇಘನಾ ರಾಜ್​ ಬದುಕಲ್ಲಿ ಹೊಸ ಬೆಳಕು; ಜ್ಯೂ. ಚಿರು ಜನಿಸಿ 9 ತಿಂಗಳಾದ ಬಳಿಕ ಗುಡ್​ ನ್ಯೂಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್