AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ

ಚಿರಂಜೀವಿ ಸರ್ಜಾ-ಮೇಘನಾ ರಾಜ್​ ಪುತ್ರನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಡಲಾಗಿದೆ. ನಾಮಕರಣದ ಬಳಿಕ ಮೊದಲ ಬಾರಿಗೆ ಕುಟುಂಬದವರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ
ಧ್ರುವ ಸರ್ಜಾ, ಮೇಘನಾ ರಾಜ್​, ಸುಂದರ್​ ರಾಜ್​
TV9 Web
| Edited By: |

Updated on: Sep 03, 2021 | 12:47 PM

Share

ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಪುತ್ರನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಡಲಾಗಿದೆ. ‘ಸ್ವರ್ಗದ ಬಾಗಿಲನ್ನು ತೆರೆದುಕೊಟ್ಟ ಯುವರಾಜ’ ಎಂಬ ಅರ್ಥ ಈ ಹೆಸರಿಗೆ ಇದೆ. ಅದನ್ನು ಮೇಘನಾ ರಾಜ್​ ವಿವರಿಸಿದ್ದಾರೆ. ‘ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ವಿ. ರಾಯನ್​ ಎಂಬ ಹೆಸರು ನನ್ನ ಮನಸಿನಲ್ಲಿ ಮೊದಲಿನಿಂದಲೂ ಇತ್ತು. ಚಿರು ನಮ್ಮ ಪಾಲಿಗೆ ರಾಜ. ಅವರಿಗೆ ಹುಟ್ಟಿದ ಈ ಮಗು ಯುವರಾಜ. ನಮ್ಮ ಎಲ್ಲರ ಜೀವನದಲ್ಲಿ ಕತ್ತಲೆ ತುಂಬಿತ್ತು. ಆದರೆ ನಮಗೆ ಬೆಳಕು ತಂದವನೇ ನನ್ನ ಮಗ’ ಎಂದು ಮೇಘನಾ ರಾಜ್​ ಹೇಳಿದರು.

ಸುಂದರ್​ ರಾಜ್ ಅವರು ಇಷ್ಟು ದಿನ ಮೊಮ್ಮಗನನ್ನು ಚಿಂಟು ಎಂದು ಕರೆಯುತ್ತಿದ್ದರು. ಸುದ್ದಿಗೋಷ್ಠಿಯಲ್ಲಿ ಅವರೂ ಭಾಗಿ ಆಗಿದ್ದರು. ‘ತುಂಬ ಜನಕ್ಕೆ ಆಹ್ವಾನ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ ಮೊಮ್ಮಗನ ನಾಮಕರಣಕ್ಕೆ ಹೆಚ್ಚು ಜನರನ್ನು ಕರೆದಿಲ್ಲ. ತಾತನಾಗಿ ಈ ಮಗುವನ್ನು ನಾನು ಫ್ರೆಂಡ್​ ಅಂತ ಕರೆಯುತ್ತೇನೆ. ನನ್ನನ್ನು ಬಿಟ್ಟು ಅವನು ಒಂದು ಕ್ಷಣವೂ ಇರುವುದಿಲ್ಲ. ಇಷ್ಟು ದಿನ ಅವನನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ವಿ. ಈಗ ರಾಯನ್​ ರಾಜ್​ ಸರ್ಜಾ ಅಂತ ಹೆಸರಿಟ್ಟಿದ್ದೇವೆ’ ಎಂದು ಸುಂದರ್​ ರಾಜ್ ಹೇಳಿದರು.

ಅಣ್ಣನ ಮಗನ ಬಗ್ಗೆ ಧ್ರುವ ಸರ್ಜಾ ಖುಷಿಯಿಂದ ಮಾತನಾಡಿದರು. ‘ಈ ಸಂದರ್ಭದಲ್ಲಿ ನಾನು ಅಣ್ಣನನ್ನು ನೆನಪಿಸಿಕೊಳ್ಳುತ್ತೇನೆ. ರಾಯನ್​ ಎಂಬ ಹೆಸರಿಗೆ ಸಂಸ್ಕೃತದಲ್ಲಿ ಯುವರಾಜ ಎಂಬ ಅರ್ಥ ಇದೆ. ಅವನು ಯುವರಾಜನ ರೀತಿಯೇ ಇರುತ್ತಾನೆ’ ಎಂದು ಧ್ರುವ ಸರ್ಜಾ ಹೇಳಿದರು. ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಕುಟುಂಬದ ನಡುವೆ ಬಿರುಕು ಮೂಡಿದೆ ಎಂಬ ರೀತಿಯಲ್ಲಿ ಕೆಲವು ಸುದ್ದಿಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿರುವುದು ಎರಡೂ ಕುಟುಂಬಕ್ಕೆ ಬೇಸರ ತರಿಸಿದೆ. ಆ ಬಗ್ಗೆಯೂ ಧ್ರುವ ಸರ್ಜಾ ಮಾತನಾಡಿದರು. ‘ನಮ್ಮ ಎರಡು ಕುಟುಂಬಗಳು ಯಾವಾಗಲೂ ಒಂದಾಗಿ ಇರುತ್ತವೆ’ ಎಂದು ಅವರು ಹೇಳಿದರು.

‘ಮೇಘನಾಳನ್ನು ನೋಡಿದರೆ ಖುಷಿ ಆಗುತ್ತದೆ. ಎಲ್ಲವನ್ನೂ ಅವಳು ಸಮರ್ಥವಾಗಿ ನಿಭಾಯಿಸುತ್ತಾಳೆ. ಅಪ್ಪನ ಫೋಟೋ ನೋಡಿದರೆ ರಾಯನ್​ ಚೆನ್ನಾಗಿ ಪ್ರತಿಕ್ರಿಯಿಸುತ್ತಾನೆ. ಅವನ ನಗುವಲ್ಲಿ ನಾವು ಸಂತೋಷವಾಗಿದ್ದೇವೆ’ ಎಂದು ಧ್ರುವ ಪತ್ನಿ ಪ್ರೇರಣ ಹೇಳಿದ್ದಾರೆ.

ಇದನ್ನೂ ಓದಿ:

ಮೇಘನಾ ರಾಜ್​ ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರು ಜೊತೆ ಅರ್ಜುನ್​ ಸರ್ಜಾ ಫೋಟೋ ವೈರಲ್

Meghana Raj: ಮೇಘನಾ ರಾಜ್​ ಬದುಕಲ್ಲಿ ಹೊಸ ಬೆಳಕು; ಜ್ಯೂ. ಚಿರು ಜನಿಸಿ 9 ತಿಂಗಳಾದ ಬಳಿಕ ಗುಡ್​ ನ್ಯೂಸ್​

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ