AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ

ಚಿರಂಜೀವಿ ಸರ್ಜಾ-ಮೇಘನಾ ರಾಜ್​ ಪುತ್ರನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಡಲಾಗಿದೆ. ನಾಮಕರಣದ ಬಳಿಕ ಮೊದಲ ಬಾರಿಗೆ ಕುಟುಂಬದವರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ
ಧ್ರುವ ಸರ್ಜಾ, ಮೇಘನಾ ರಾಜ್​, ಸುಂದರ್​ ರಾಜ್​
TV9 Web
| Edited By: |

Updated on: Sep 03, 2021 | 12:47 PM

Share

ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಪುತ್ರನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಡಲಾಗಿದೆ. ‘ಸ್ವರ್ಗದ ಬಾಗಿಲನ್ನು ತೆರೆದುಕೊಟ್ಟ ಯುವರಾಜ’ ಎಂಬ ಅರ್ಥ ಈ ಹೆಸರಿಗೆ ಇದೆ. ಅದನ್ನು ಮೇಘನಾ ರಾಜ್​ ವಿವರಿಸಿದ್ದಾರೆ. ‘ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ವಿ. ರಾಯನ್​ ಎಂಬ ಹೆಸರು ನನ್ನ ಮನಸಿನಲ್ಲಿ ಮೊದಲಿನಿಂದಲೂ ಇತ್ತು. ಚಿರು ನಮ್ಮ ಪಾಲಿಗೆ ರಾಜ. ಅವರಿಗೆ ಹುಟ್ಟಿದ ಈ ಮಗು ಯುವರಾಜ. ನಮ್ಮ ಎಲ್ಲರ ಜೀವನದಲ್ಲಿ ಕತ್ತಲೆ ತುಂಬಿತ್ತು. ಆದರೆ ನಮಗೆ ಬೆಳಕು ತಂದವನೇ ನನ್ನ ಮಗ’ ಎಂದು ಮೇಘನಾ ರಾಜ್​ ಹೇಳಿದರು.

ಸುಂದರ್​ ರಾಜ್ ಅವರು ಇಷ್ಟು ದಿನ ಮೊಮ್ಮಗನನ್ನು ಚಿಂಟು ಎಂದು ಕರೆಯುತ್ತಿದ್ದರು. ಸುದ್ದಿಗೋಷ್ಠಿಯಲ್ಲಿ ಅವರೂ ಭಾಗಿ ಆಗಿದ್ದರು. ‘ತುಂಬ ಜನಕ್ಕೆ ಆಹ್ವಾನ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ ಮೊಮ್ಮಗನ ನಾಮಕರಣಕ್ಕೆ ಹೆಚ್ಚು ಜನರನ್ನು ಕರೆದಿಲ್ಲ. ತಾತನಾಗಿ ಈ ಮಗುವನ್ನು ನಾನು ಫ್ರೆಂಡ್​ ಅಂತ ಕರೆಯುತ್ತೇನೆ. ನನ್ನನ್ನು ಬಿಟ್ಟು ಅವನು ಒಂದು ಕ್ಷಣವೂ ಇರುವುದಿಲ್ಲ. ಇಷ್ಟು ದಿನ ಅವನನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ವಿ. ಈಗ ರಾಯನ್​ ರಾಜ್​ ಸರ್ಜಾ ಅಂತ ಹೆಸರಿಟ್ಟಿದ್ದೇವೆ’ ಎಂದು ಸುಂದರ್​ ರಾಜ್ ಹೇಳಿದರು.

ಅಣ್ಣನ ಮಗನ ಬಗ್ಗೆ ಧ್ರುವ ಸರ್ಜಾ ಖುಷಿಯಿಂದ ಮಾತನಾಡಿದರು. ‘ಈ ಸಂದರ್ಭದಲ್ಲಿ ನಾನು ಅಣ್ಣನನ್ನು ನೆನಪಿಸಿಕೊಳ್ಳುತ್ತೇನೆ. ರಾಯನ್​ ಎಂಬ ಹೆಸರಿಗೆ ಸಂಸ್ಕೃತದಲ್ಲಿ ಯುವರಾಜ ಎಂಬ ಅರ್ಥ ಇದೆ. ಅವನು ಯುವರಾಜನ ರೀತಿಯೇ ಇರುತ್ತಾನೆ’ ಎಂದು ಧ್ರುವ ಸರ್ಜಾ ಹೇಳಿದರು. ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಕುಟುಂಬದ ನಡುವೆ ಬಿರುಕು ಮೂಡಿದೆ ಎಂಬ ರೀತಿಯಲ್ಲಿ ಕೆಲವು ಸುದ್ದಿಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿರುವುದು ಎರಡೂ ಕುಟುಂಬಕ್ಕೆ ಬೇಸರ ತರಿಸಿದೆ. ಆ ಬಗ್ಗೆಯೂ ಧ್ರುವ ಸರ್ಜಾ ಮಾತನಾಡಿದರು. ‘ನಮ್ಮ ಎರಡು ಕುಟುಂಬಗಳು ಯಾವಾಗಲೂ ಒಂದಾಗಿ ಇರುತ್ತವೆ’ ಎಂದು ಅವರು ಹೇಳಿದರು.

‘ಮೇಘನಾಳನ್ನು ನೋಡಿದರೆ ಖುಷಿ ಆಗುತ್ತದೆ. ಎಲ್ಲವನ್ನೂ ಅವಳು ಸಮರ್ಥವಾಗಿ ನಿಭಾಯಿಸುತ್ತಾಳೆ. ಅಪ್ಪನ ಫೋಟೋ ನೋಡಿದರೆ ರಾಯನ್​ ಚೆನ್ನಾಗಿ ಪ್ರತಿಕ್ರಿಯಿಸುತ್ತಾನೆ. ಅವನ ನಗುವಲ್ಲಿ ನಾವು ಸಂತೋಷವಾಗಿದ್ದೇವೆ’ ಎಂದು ಧ್ರುವ ಪತ್ನಿ ಪ್ರೇರಣ ಹೇಳಿದ್ದಾರೆ.

ಇದನ್ನೂ ಓದಿ:

ಮೇಘನಾ ರಾಜ್​ ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರು ಜೊತೆ ಅರ್ಜುನ್​ ಸರ್ಜಾ ಫೋಟೋ ವೈರಲ್

Meghana Raj: ಮೇಘನಾ ರಾಜ್​ ಬದುಕಲ್ಲಿ ಹೊಸ ಬೆಳಕು; ಜ್ಯೂ. ಚಿರು ಜನಿಸಿ 9 ತಿಂಗಳಾದ ಬಳಿಕ ಗುಡ್​ ನ್ಯೂಸ್​

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ