AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್ ಪೋಸ್ಟ್ ಮೂಡಿಸಿದ ಕುತೂಹಲ; ಫೆಬ್ರವರಿ 12ಕ್ಕೆ ಚಿರಂಜೀವಿ ಸರ್ಜಾ ಮಗುವಿನ ನಾಮಕರಣ?

Meghana Raj Son: ಅಕ್ಟೋಬರ್ 22ರಂದು ಮೇಘನಾ ತಾಯಿ ಆಗಿದ್ದರು. ಅವರಿಗೆ ಗಂಡು ಮಗು ಹುಟ್ಟಿದ್ದರಿಂದ ಎಲ್ಲರೂ ಜೂ. ಸರ್ಜಾ ಅವರ ಆಗಮನವಾಗಿದೆ ಎಂದೇ ಹೇಳಿದ್ದರು.

Meghana Raj: ಮೇಘನಾ ರಾಜ್ ಪೋಸ್ಟ್ ಮೂಡಿಸಿದ ಕುತೂಹಲ; ಫೆಬ್ರವರಿ 12ಕ್ಕೆ ಚಿರಂಜೀವಿ ಸರ್ಜಾ ಮಗುವಿನ ನಾಮಕರಣ?
ಮೇಘನಾ-ಚಿರು ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 9:24 PM

Share

ಬೆಂಗಳೂರು: ನಟಿ ಮೇಘನಾ ರಾಜ್​ ಎಕ್ಸೈಟ್​ ಆಗಿದ್ದಾರಂತೆ. ಶುಕ್ರವಾರ ವಿಶೇಷ ದಿನ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಮೇಘನಾ ಮಗುವಿಗೆ ನಾಮಕರಣ ನಡೆಯಬಹುದು ಎಂದು ಅಂದಾಜಿಸಲಾಗಿದೆ. ಸ್ಯಾಂಡಲ್​ವುಡ್​ ಸ್ಟಾರ್​ ಚಿರಂಜೀವಿ ಸರ್ಜಾ ಜೂನ್​ 7ರಂದು ಮೃತಪಟ್ಟಿದ್ದರು. ಆ ವೇಳೆಗೆ ಮೇಘನಾ ತುಂಬು ಗರ್ಭಿಣಿ. ಗಂಡನನ್ನು ಕಳೆದುಕೊಂಡ ನೋವಲ್ಲೇ ಮೇಘನಾಗೆ ಸೀಮಂತ ಶಾಸ್ತ್ರ ಕೂಡ ಮಾಡಲಾಗಿತ್ತು. ಚಿರಂಜೀವಿ ಕಟೌಟ್​ ಪಕ್ಕದಲ್ಲಿ ಇರಿಸಿಕೊಂಡು ಮೇಘನಾ ಸೀಮಂತ ಮಾಡಿಕೊಂಡಿದ್ದು, ಅಭಿಮಾನಿಗಳು ಸಾಕಷ್ಟು ನೊಂದುಕೊಂಡಿದ್ದರು.

ಅಕ್ಟೋಬರ್ 22ರಂದು ಮೇಘನಾ ತಾಯಿ ಆಗಿದ್ದರು. ಅವರಿಗೆ ಗಂಡು ಮಗು ಹುಟ್ಟಿದ್ದರಿಂದ ಎಲ್ಲರೂ ಜೂ. ಸರ್ಜಾ ಅವರ ಆಗಮನವಾಗಿದೆ ಎಂದೇ ಹೇಳಿದ್ದರು. ಚಿರು ತಮ್ಮ ಧ್ರುವ ಮಗುವನ್ನು ಎತ್ತಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಇದಾದ ನಂತರ ಚಿರು ಕುಟುಂಬದಿಂದ ಮಗುವಿನ ವಿಚಾರವಾಗಿ ಯಾವುದೇ ಅಪ್​​ಡೇಟ್​ ಬಂದಿರಲಿಲ್ಲ. ಅನೇಕರು ಮಗುವಿನ ನಾಮಕರಣ ಯಾವಾಗ? ಅವರಿಗೆ ಏನು ಹೆಸರಿಡುತ್ತೀರಿ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದರು. ಅದಕ್ಕೆ ಕೊನೆಗೂ ಉತ್ತರ ಸಿಗುವ ಲಕ್ಷಣ ಗೋಚರವಾಗಿದೆ.

View this post on Instagram

A post shared by Meghana Raj Sarja (@megsraj)

ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಾಕಿರುವ ಮೇಘನಾ, ಫೆಬ್ರವರಿ 12ರಂದು ಎಕ್ಸೈಟಿಂಗ್ ನ್ಯೂಸ್​ ಬರುತ್ತಿದೆ ಎಂದು ಬರೆದುಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ.

ಇದನ್ನೂ ಓದಿ: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ..ಎಲ್ಲ ಪಾಲಕರಿಗೆ ನಟಿ ಮೇಘನಾ ರಾಜ್​ ಸಂದೇಶ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು