AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಾಲೆಂಜ್​ ಗೆದ್ದರೆ ನಿಮಗೆ ಸಿಗಲಿದೆ ಮೇಘನಾ ರಾಜ್ ಭೇಟಿ ಮಾಡುವ ಅವಕಾಶ; ನೀವು ಮಾಡಬೇಕಾಗಿದ್ದಿಷ್ಟೇ..

Meghana Raj: ಸಿನಿಮಾ ಪ್ರಚಾರಕ್ಕೆ ಸೆಲೆಬ್ರಿಟಿಗಳು ನಾನಾ ಮಾರ್ಗ ಅನುಸರಿಸುತ್ತಾರೆ. ನಟಿ ಮೇಘನಾ ರಾಜ್ ಅವರು ಕೂಡ ಈಗ ಇದೇ ತಂತ್ರ ಮಾಡಿದ್ದಾರೆ. ಅವರು ಕಂಬ್ಯಾಕ್ ಮಾಡುತ್ತಿರುವ ‘ತತ್ಸಮ ತದ್ಭವ’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಪ್ರಚಾರದ ಭಾಗವಾಗಿ ಅವರು ಒಂದು ಟಾಸ್ಕ್ ನೀಡಿದ್ದಾರೆ.

ಈ ಚಾಲೆಂಜ್​ ಗೆದ್ದರೆ ನಿಮಗೆ ಸಿಗಲಿದೆ ಮೇಘನಾ ರಾಜ್ ಭೇಟಿ ಮಾಡುವ ಅವಕಾಶ; ನೀವು ಮಾಡಬೇಕಾಗಿದ್ದಿಷ್ಟೇ..
ಮೇಘನಾ ರಾಜ್
ರಾಜೇಶ್ ದುಗ್ಗುಮನೆ
|

Updated on:Aug 16, 2023 | 1:03 PM

Share

ಸೆಲೆಬ್ರಿಟಿಗಳನ್ನು ಭೇಟಿ ಆಗಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಭೇಟಿ ಆದಮೇಲೆ ನಾಲ್ಕು ಮಾತನಾಡಿದರಂತೂ ಅಭಿಮಾನಿಗಳ ಖುಷಿಗೆ ಪಾರವೇ ಇರುವುದಿಲ್ಲ. ಆದರೆ, ಎಲ್ಲಾ ಸೆಲೆಬ್ರಿಟಿಗಳು ಅಷ್ಟು ಸುಲಭಕ್ಕೆ ಸಿಗುವುದಿಲ್ಲ. ಸಿಕ್ಕರೂ ಮಾತನಾಡೋಕೆ ಅವರಿಗೆ ಸಮಯ ಇರುವುದಿಲ್ಲ. ಈಗ ನಟಿ ಮೇಘನಾ ರಾಜ್ (Meghana Raj) ಅವರು ತಮ್ಮನ್ನು ಭೇಟಿ ಆಗೋಕೆ ಅವಕಾಶ ನೀಡಿದ್ದಾರೆ. ಅದಕ್ಕೆ ಅವರು ಕೊಟ್ಟ ಒಂದು ಚಾಲೆಂಜ್​ನ ಗೆಲ್ಲಬೇಕು. ಹಾಗೆ ಚಾಲೆಂಜ್ ಗೆದ್ದ ಮೂವರಿಗೆ ಮೇಘನಾ ರಾಜ್​ನ ಭೇಟಿ ಮಾಡುವ ಮತ್ತು ಸ್ವಲ್ಪ ಹೊತ್ತು ಮಾತನಾಡುವ ಅವಕಾಶ ಸಿಗಲಿದೆ.

ಸಿನಿಮಾ ಪ್ರಚಾರಕ್ಕೆ ಸೆಲೆಬ್ರಿಟಿಗಳು ನಾನಾ ಮಾರ್ಗ ಅನುಸರಿಸುತ್ತಾರೆ. ನಟಿ ಮೇಘನಾ ರಾಜ್ ಅವರು ಕೂಡ ಈಗ ಇದೇ ತಂತ್ರ ಮಾಡಿದ್ದಾರೆ. ಅವರು ಕಂಬ್ಯಾಕ್ ಮಾಡುತ್ತಿರುವ ‘ತತ್ಸಮ ತದ್ಭವ’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಪ್ರಚಾರದ ಭಾಗವಾಗಿ ಅವರು ಒಂದು ಟಾಸ್ಕ್ ನೀಡಿದ್ದಾರೆ.

‘ತತ್ಸಮ ತದ್ಭವ ಚಿತ್ರದ ‘ದೂರಿ ಲಾಲಿ..’ ಹಾಡು ರಿಲೀಸ್ ಆಗಿದೆ. ತಾಯಿ ಮಗುವನ್ನು ಮಲಗಿಸಲು ಹಾಡುವ ಹಾಡು ಇದು. ಈ ಹಾಡಿಗೆ ಮೇಘನಾ ರಾಜ್ ರೀಲ್ಸ್​ ಮಾಡಿದ್ದಾರೆ. ಮಗ ರಾಯನ್ ರಾಜ್ ಸರ್ಜಾನ ಮಲಗಿಸಲು ಮೇಘನಾ ಈ ಹಾಡನ್ನು ಹಾಡಿದ್ದಾರೆ. ಜೊತೆಗೆ ಅವರು ಒಂದು ಚಾಲೆಂಜ್ ನೀಡಿದ್ದಾರೆ.

‘ನಮ್ಮ ಸಿನಿಮಾ ತತ್ಸಮ ತದ್ಭವ ಸಿನಿಮಾದ ದೂರಿ ಲಾಲಿ ಹಾಡು ರಿಲೀಸ್ ಆಗಿದೆ. ಅದನ್ನು ಕೇಳಿ ಖುಷಿಪಟ್ಟಿದ್ದೀರಿ ಎಂದು ನಾನು ಭಾವಿಸುತ್ತೇನೆ. ದೂರಿ ಲಾಲಿ ಚಾಲೆಂಜ್ ಕೊಡುತ್ತಿದ್ದೇನೆ. ಈ ಹಾಡನ್ನು ಹಾಡುತ್ತಾ ನಿಮ್ಮ ಮಗುವನ್ನು ಹೇಗೆ ಮಲಗಿಸುತ್ತೀರಿ ಎಂಬ ವಿಡಿಯೋನ ರೀಲ್ಸ್​ನಲ್ಲಿ ಅಪ್​ಲೋಡ್ ಮಾಡಿ. ಗೆದ್ದ ಮೂವರು ತಾಯಂದಿರಿಗೆ ನನ್ನ ಭೇಟಿ ಮಾಡುವ ಅವಕಾಶ ಸಿಗುತ್ತದೆ. ಆಗ ನಿಮ್ಮ ಮಕ್ಕಳ ಬಗ್ಗೆ ನನ್ನ ಬಳಿ, ನನ್ನ ಮಕ್ಕಳ ಬಗ್ಗೆ ನಿಮ್ಮ ಬಳಿ ಮಾತನಾಡುತ್ತಾ ಸ್ವಲ್ಪ ಸಮಯ ಕಳೆಯಬಹುದು’ ಎಂದು ಮೇಘನಾ ರಾಜ್ ಹೇಳಿದ್ದಾರೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ‘ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ?’; ಸ್ಪಂದನಾ ಸಾವಿಗೆ ಮೇಘನಾ ರಾಜ್ ಬೇಸರ

ಈ ವಿಡಿಯೋಗೆ DooriLaaliChallenge ಹ್ಯಾಶ್​ಟ್ಯಾಗ್ ಹಾಕಬೇಕು. ಜೊತೆಗೆ ಮೇಘನಾ ರಾಜ್ ಸೇರಿ ಕೆಲವರಿಗೆ ಈ ವಿಡಿಯೋನ ಟ್ಯಾಗ್​ ಮಾಡಬೇಕು. ಬಳಿಕ ತಂಡದವರು ಮೂವರು ವಿನ್ನರ್​​ಗಳ ಹೆಸರನ್ನು ಘೋಷಣೆ ಮಾಡುತ್ತಾರೆ. ‘ತತ್ಸಮ ತದ್ಭವ’ ಸಿನಿಮಾನ ವಿಶಾಲ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಇದೆ. ಪ್ರಜ್ವಲ್ ದೇವರಾಜ್ ಹಾಗೂ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Wed, 16 August 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್