AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು

ಬಹಳಷ್ಟು ಕಳೆದುಕೊಂಡೆ. ಇವನನ್ನು ಪರಿಚಯ ಮಾಡಿಕೊಡುವ ಅಗತ್ಯವಿಲ್ಲ. ನನ್ನ ಬೆಸ್ಟ್​ ಫ್ರೆಂಡ್​ ಬ್ರುನೋ ಇಂದು ಸಾವನ್ನಪ್ಪಿದ್ದಾನೆ. ಇವನ ಜೊತೆ ಜ್ಯೂನಿಯರ್​ ಚಿರು ಆಡವಾಡಬೇಕು ಎಂದುಕೊಂಡಿದ್ದೆ ಎಂದು ಮೇಘನಾ ರಾಜ್​ ಭಾವುಕವಾಗಿ ಪೋಸ್ಟ್​ ಮಾಡಿದ್ದಾರೆ.

Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು
ಬ್ರುನೋ ಜೊತೆ ಮೇಘನಾ ರಾಜ್​
ಮದನ್​ ಕುಮಾರ್​
| Edited By: |

Updated on:May 21, 2021 | 10:45 AM

Share

ಸ್ಯಾಂಡಲ್​ವುಡ್​ ನಟಿ ಮೇಘನಾ ರಾಜ್​ ಮನೆಯಲ್ಲಿ ಮತ್ತೆ ದುಃಖ ಆವರಿಸಿದೆ. ಒಂದು ವರ್ಷದಿಂದೀಚೆಗೆ ಪತಿಯ ನಿಧನ ಮತ್ತು ಕೊರನಾ ವೈರಸ್​ ಕಾಟದಿಂದ ನೋವು ಅನುಭವಿಸಿದ್ದ ಅವರು ಈಗ ಪ್ರೀತಿಯ ಶ್ವಾನವನ್ನು ಕಳೆದುಕೊಂಡಿದ್ದಾರೆ. ಇದು ಅವರಿಗೆ ತೀವ್ರ ನೋವುಂಟು ಮಾಡಿದೆ. ಬ್ರುನೋ ಹೆಸರಿನ ಶ್ವಾನವನ್ನು ಅವರು ಬಹಳ ಪ್ರೀತಿಯಿಂದ ಸಾಕಿದ್ದರು. ಆದರೆ ಅದೀಗ ಕೊನೆಯುಸಿರೆಳೆದಿದೆ. ಆ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿರುವ ಮೇಘನಾ ರಾಜ್​ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಬಹಳಷ್ಟು ಕಳೆದುಕೊಂಡೆ. ಇವನನ್ನು ಪರಿಚಯ ಮಾಡಿಕೊಡುವ ಅಗತ್ಯವಿಲ್ಲ. ನನ್ನ ಬೆಸ್ಟ್​ ಫ್ರೆಂಡ್​ ಬ್ರುನೋ ಇಂದು ಸಾವನ್ನಪ್ಪಿದ್ದಾನೆ. ಇವನ ಜೊತೆ ಜ್ಯೂನಿಯರ್​ ಚಿರು ಆಡವಾಡಬೇಕು ಎಂದುಕೊಂಡಿದ್ದೆ. ಇವನ ಬೆನ್ನ ಮೇಲೆ ಕುಳಿತು ಜ್ಯೂನಿಯರ್​ ಚಿರು ಸವಾರಿ ಮಾಡಬೇಕು ಎಂದುಕೊಂಡಿದ್ದೆ. ಬ್ರುನೋಗೆ ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ. ಆದರೆ ಹೇಗೋ ಜ್ಯೂನಿಯರ್​ ಚಿರು ಜೊತೆ ಮೃದುವಾಗಿ ನಡೆದುಕೊಳ್ಳುತ್ತಿದ್ದ. ಬ್ರುನೋಗೆ ತನ್ನ ಯಜಮಾನನ ಬಗ್ಗೆ ಗೊತ್ತಿತ್ತು ಅನಿಸುತ್ತದೆ.’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಮೇಘನಾ ರಾಜ್​ ಬರೆದುಕೊಂಡಿದ್ದಾರೆ.

‘ನೀನಿಲ್ಲದ ಈ ಮನೆ ಮೊದಲಿನಂತೆ ಇರುವುದಿಲ್ಲ. ಮನೆಗೆ ಬರುತ್ತಿದ್ದ ಪ್ರತಿಯೊಬ್ಬರೂ ಬ್ರುನೋ ಎಲ್ಲಿ ಎಂದು ಕೇಳುತ್ತಿದ್ದರು. ತೀವ್ರವಾಗಿ ಅವನನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ನೀನೀಗ ಚಿರು ಜೊತೆ ಇದ್ದೀಯಾ ಮತ್ತು ಅವರ ಜೊತೆ ನೀನು ಯಾವಾಗಲೂ ಕೀಟಲೆ ಮಾಡುತ್ತಿರುತ್ತೀಯ ಎಂದು ನಂಬಿದ್ದೇನೆ’ ಎಂದು ಮೇಘನಾ ರಾಜ್​ ಭಾವುಕವಾಗಿ ಬರೆದುಕೊಂಡಿದ್ದಾರೆ. ಬ್ರುನೋ ಜೊತೆಗಿನ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅಕುಲ್​ ಬಾಲಾಜಿ ನಡೆಸಿಕೊಡುತ್ತಿದ್ದ ಸೂಪರ್​ ಟಾಕ್​ಟೈಮ್​ ಶೋನಲ್ಲಿ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಜೊತೆ ಬ್ರುನೋ ಕಾಣಿಸಿಕೊಂಡಿತ್ತು.

View this post on Instagram

A post shared by Meghana Raj Sarja (@megsraj)

View this post on Instagram

A post shared by Meghana Raj Sarja (@megsraj)

ಮಗಳ ಆರೈಕೆಯಲ್ಲಿ ಸದ್ಯ ಮೇಘನಾ ಬ್ಯುಸಿ ಆಗಿದ್ದಾರೆ. ಎಲ್ಲೆಲ್ಲೂ ಕೊರೊನಾ ವೈರಸ್​ ಹರಡುತ್ತಿರುವ ಈ ಸಂದರ್ಭದಲ್ಲಿ ಅವರು ಬಹಳ ಎಚ್ಚರಿಕೆಯಿಂದ ಇದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್​ ಆಗಿತ್ತು. ಆಗ ಅವರು ತುಂಬ ಭಯಭೀತರಾಗಿದ್ದರು. ಆ ದಿನಗಳ ಅನುಭವದ ಬಗ್ಗೆ ಅವರು ಇತ್ತೀಚೆಗೆ ಹೇಳಿಕೊಂಡಿದ್ದರು. ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಸಿನಿಮಾಗಳಲ್ಲಿ ಅವರು ಮತ್ತೆ ನಟಿಸಲಿ ಎಂಬುದು ಫ್ಯಾನ್ಸ್​ ಬಯಕೆ.

ಇದನ್ನೂ ಓದಿ:

Meghana Raj: 2 ತಿಂಗಳ ಹಸುಗೂಸಿಗೆ ಕೊವಿಡ್​ ಬಂದಾಗ ಎದುರಾಗಿದ್ದ ಭಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಮೇಘನಾ ರಾಜ್​

Meghana Raj Birthday: ಮೇಘನಾ ರಾಜ್ ಬದುಕಲ್ಲಿ ನಗು ಅರಳಿಸಿದ ಜ್ಯೂ. ಚಿರು ಕಲರ್​ಫುಲ್​ ಫೋಟೋಗಳು

Published On - 10:43 am, Fri, 21 May 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು