AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು

ಬಹಳಷ್ಟು ಕಳೆದುಕೊಂಡೆ. ಇವನನ್ನು ಪರಿಚಯ ಮಾಡಿಕೊಡುವ ಅಗತ್ಯವಿಲ್ಲ. ನನ್ನ ಬೆಸ್ಟ್​ ಫ್ರೆಂಡ್​ ಬ್ರುನೋ ಇಂದು ಸಾವನ್ನಪ್ಪಿದ್ದಾನೆ. ಇವನ ಜೊತೆ ಜ್ಯೂನಿಯರ್​ ಚಿರು ಆಡವಾಡಬೇಕು ಎಂದುಕೊಂಡಿದ್ದೆ ಎಂದು ಮೇಘನಾ ರಾಜ್​ ಭಾವುಕವಾಗಿ ಪೋಸ್ಟ್​ ಮಾಡಿದ್ದಾರೆ.

Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು
ಬ್ರುನೋ ಜೊತೆ ಮೇಘನಾ ರಾಜ್​
ಮದನ್​ ಕುಮಾರ್​
| Edited By: |

Updated on:May 21, 2021 | 10:45 AM

Share

ಸ್ಯಾಂಡಲ್​ವುಡ್​ ನಟಿ ಮೇಘನಾ ರಾಜ್​ ಮನೆಯಲ್ಲಿ ಮತ್ತೆ ದುಃಖ ಆವರಿಸಿದೆ. ಒಂದು ವರ್ಷದಿಂದೀಚೆಗೆ ಪತಿಯ ನಿಧನ ಮತ್ತು ಕೊರನಾ ವೈರಸ್​ ಕಾಟದಿಂದ ನೋವು ಅನುಭವಿಸಿದ್ದ ಅವರು ಈಗ ಪ್ರೀತಿಯ ಶ್ವಾನವನ್ನು ಕಳೆದುಕೊಂಡಿದ್ದಾರೆ. ಇದು ಅವರಿಗೆ ತೀವ್ರ ನೋವುಂಟು ಮಾಡಿದೆ. ಬ್ರುನೋ ಹೆಸರಿನ ಶ್ವಾನವನ್ನು ಅವರು ಬಹಳ ಪ್ರೀತಿಯಿಂದ ಸಾಕಿದ್ದರು. ಆದರೆ ಅದೀಗ ಕೊನೆಯುಸಿರೆಳೆದಿದೆ. ಆ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿರುವ ಮೇಘನಾ ರಾಜ್​ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಬಹಳಷ್ಟು ಕಳೆದುಕೊಂಡೆ. ಇವನನ್ನು ಪರಿಚಯ ಮಾಡಿಕೊಡುವ ಅಗತ್ಯವಿಲ್ಲ. ನನ್ನ ಬೆಸ್ಟ್​ ಫ್ರೆಂಡ್​ ಬ್ರುನೋ ಇಂದು ಸಾವನ್ನಪ್ಪಿದ್ದಾನೆ. ಇವನ ಜೊತೆ ಜ್ಯೂನಿಯರ್​ ಚಿರು ಆಡವಾಡಬೇಕು ಎಂದುಕೊಂಡಿದ್ದೆ. ಇವನ ಬೆನ್ನ ಮೇಲೆ ಕುಳಿತು ಜ್ಯೂನಿಯರ್​ ಚಿರು ಸವಾರಿ ಮಾಡಬೇಕು ಎಂದುಕೊಂಡಿದ್ದೆ. ಬ್ರುನೋಗೆ ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ. ಆದರೆ ಹೇಗೋ ಜ್ಯೂನಿಯರ್​ ಚಿರು ಜೊತೆ ಮೃದುವಾಗಿ ನಡೆದುಕೊಳ್ಳುತ್ತಿದ್ದ. ಬ್ರುನೋಗೆ ತನ್ನ ಯಜಮಾನನ ಬಗ್ಗೆ ಗೊತ್ತಿತ್ತು ಅನಿಸುತ್ತದೆ.’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಮೇಘನಾ ರಾಜ್​ ಬರೆದುಕೊಂಡಿದ್ದಾರೆ.

‘ನೀನಿಲ್ಲದ ಈ ಮನೆ ಮೊದಲಿನಂತೆ ಇರುವುದಿಲ್ಲ. ಮನೆಗೆ ಬರುತ್ತಿದ್ದ ಪ್ರತಿಯೊಬ್ಬರೂ ಬ್ರುನೋ ಎಲ್ಲಿ ಎಂದು ಕೇಳುತ್ತಿದ್ದರು. ತೀವ್ರವಾಗಿ ಅವನನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ನೀನೀಗ ಚಿರು ಜೊತೆ ಇದ್ದೀಯಾ ಮತ್ತು ಅವರ ಜೊತೆ ನೀನು ಯಾವಾಗಲೂ ಕೀಟಲೆ ಮಾಡುತ್ತಿರುತ್ತೀಯ ಎಂದು ನಂಬಿದ್ದೇನೆ’ ಎಂದು ಮೇಘನಾ ರಾಜ್​ ಭಾವುಕವಾಗಿ ಬರೆದುಕೊಂಡಿದ್ದಾರೆ. ಬ್ರುನೋ ಜೊತೆಗಿನ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅಕುಲ್​ ಬಾಲಾಜಿ ನಡೆಸಿಕೊಡುತ್ತಿದ್ದ ಸೂಪರ್​ ಟಾಕ್​ಟೈಮ್​ ಶೋನಲ್ಲಿ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಜೊತೆ ಬ್ರುನೋ ಕಾಣಿಸಿಕೊಂಡಿತ್ತು.

View this post on Instagram

A post shared by Meghana Raj Sarja (@megsraj)

View this post on Instagram

A post shared by Meghana Raj Sarja (@megsraj)

ಮಗಳ ಆರೈಕೆಯಲ್ಲಿ ಸದ್ಯ ಮೇಘನಾ ಬ್ಯುಸಿ ಆಗಿದ್ದಾರೆ. ಎಲ್ಲೆಲ್ಲೂ ಕೊರೊನಾ ವೈರಸ್​ ಹರಡುತ್ತಿರುವ ಈ ಸಂದರ್ಭದಲ್ಲಿ ಅವರು ಬಹಳ ಎಚ್ಚರಿಕೆಯಿಂದ ಇದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರ ಇಡೀ ಕುಟುಂಬಕ್ಕೆ ಕೊರೊನಾ ಪಾಸಿಟಿವ್​ ಆಗಿತ್ತು. ಆಗ ಅವರು ತುಂಬ ಭಯಭೀತರಾಗಿದ್ದರು. ಆ ದಿನಗಳ ಅನುಭವದ ಬಗ್ಗೆ ಅವರು ಇತ್ತೀಚೆಗೆ ಹೇಳಿಕೊಂಡಿದ್ದರು. ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಸಿನಿಮಾಗಳಲ್ಲಿ ಅವರು ಮತ್ತೆ ನಟಿಸಲಿ ಎಂಬುದು ಫ್ಯಾನ್ಸ್​ ಬಯಕೆ.

ಇದನ್ನೂ ಓದಿ:

Meghana Raj: 2 ತಿಂಗಳ ಹಸುಗೂಸಿಗೆ ಕೊವಿಡ್​ ಬಂದಾಗ ಎದುರಾಗಿದ್ದ ಭಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಮೇಘನಾ ರಾಜ್​

Meghana Raj Birthday: ಮೇಘನಾ ರಾಜ್ ಬದುಕಲ್ಲಿ ನಗು ಅರಳಿಸಿದ ಜ್ಯೂ. ಚಿರು ಕಲರ್​ಫುಲ್​ ಫೋಟೋಗಳು

Published On - 10:43 am, Fri, 21 May 21

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು