AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ

Chiranjeevi Sarja Birthday: ಅಕ್ಟೋಬರ್​ 17ರಂದು ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ
ಮೇಘನಾ ರಾಜ್​, ಪನ್ನಗ ಭರಣ, ವಿಶಾಲ್​
TV9 Web
| Edited By: |

Updated on: Oct 16, 2021 | 10:30 AM

Share

ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ನಟಿ ಮೇಘನಾ ರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾ ಮತ್ತು ಪಾತ್ರಗಳ ಆಯ್ಕೆಯಲ್ಲಿ ಅವರು ಬಹಳ ಎಚ್ಚರಿಕೆ ವಹಿಸುತ್ತಾರೆ. ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಪುತ್ರ ರಾಯನ್​ ರಾಜ್​ ಸರ್ಜಾ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದಷ್ಟು ಬೇಗ ಮೇಘನಾ ರಾಜ್​ ಕಮ್​ಬ್ಯಾಕ್​ ಮಾಡಲಿ ಎಂಬುದು ಅವರ ಅಭಿಮಾನಿಗಳ ಬಯಕೆ. ಆ ಬಯಕೆ ಈಡೇರುವ ಕಾಲ ಈಗ ಬಂದಿದೆ. ಮೇಘನಾ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ.

ಚಿರು ನಿಧನದ ಬಳಿಕ ನಟನೆಯಿಂದ ದೂರ ಉಳಿದುಕೊಂಡಿದ್ದ ಮೇಘನಾ ರಾಜ್​ ಅವರು ದೀರ್ಘ ಗ್ಯಾಪ್​ ಬಳಿಕ ಮತ್ತೆ ನಟಿಸಲು ಸಜ್ಜಾಗಿದ್ದಾರೆ. ಹೊಸ ಚಿತ್ರ ಕೂಡ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಚಿರಂಜೀವಿ ಸರ್ಜಾ ಅವರ ಸ್ನೇಹಿತ ಪನ್ನಗ ಭರಣ ನಿರ್ಮಾಣ ಮಾಡಲಿದ್ದಾರೆ. ಅವರ ಜೊತೆ ಸಂಗೀತ ನಿರ್ದೇಶಕ ವಾಸುಕಿ ವೈಭವ್​, ಹೊಸ ನಿರ್ದೇಶಕ ವಿಶಾಲ್​ ಕೈ ಜೋಡಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮೇಘನಾ ರಾಜ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.

ನಾಳೆ (ಅ.17) ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಈ ಸಿನಿಮಾವನ್ನು ಚಿರು ಜೊತೆ ಸೇರಿ ನಿರ್ಮಾಣ ಮಾಡಬೇಕು ಎಂದು ಪ್ಲ್ಯಾನ್​ ಮಾಡಲಾಗಿತ್ತು. ಆದರೆ ಅದಕ್ಕೆ ವಿಧಿ ಅವಕಾಶ ನೀಡಲಿಲ್ಲ. ಈಗ ಚಿರು ಹುಟ್ಟುಹಬ್ಬದ ದಿನ ಈ ಚಿತ್ರ ಸೆಟ್ಟೇರಲಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ನಾಗಾಭರಣ, ನಟ ಸುಂದರ್​ ರಾಜ್​, ಕಲಾ ನಿರ್ದೇಶಕ ಶಿವಕುಮಾರ್​ ಮುಂತಾದವರು ಆಗಮಿಸಲಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಶೀರ್ಷಿಕೆ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮೇಘನಾ ರಾಜ್​ ಅವರಿಗೆ ಈ ಸಿನಿಮಾದಲ್ಲಿ ಯಾವ ಪಾತ್ರ ಇರಲಿದೆ ಎಂಬುದನ್ನು ತಿಳಿದುಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಅವರು ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲು ನಿರ್ಧರಿಸಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ.

ಇದನ್ನೂ ಓದಿ:

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ಮಗನಿಗೆ ಹೆಸರಿಟ್ಟಿದ್ದಕ್ಕೆ ಕಾರಣ ತಿಳಿಸಿದ ಮೇಘನಾ ರಾಜ್​

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್