AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ

Chiranjeevi Sarja Birthday: ಅಕ್ಟೋಬರ್​ 17ರಂದು ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ
ಮೇಘನಾ ರಾಜ್​, ಪನ್ನಗ ಭರಣ, ವಿಶಾಲ್​
TV9 Web
| Edited By: |

Updated on: Oct 16, 2021 | 10:30 AM

Share

ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ನಟಿ ಮೇಘನಾ ರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾ ಮತ್ತು ಪಾತ್ರಗಳ ಆಯ್ಕೆಯಲ್ಲಿ ಅವರು ಬಹಳ ಎಚ್ಚರಿಕೆ ವಹಿಸುತ್ತಾರೆ. ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಪುತ್ರ ರಾಯನ್​ ರಾಜ್​ ಸರ್ಜಾ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದಷ್ಟು ಬೇಗ ಮೇಘನಾ ರಾಜ್​ ಕಮ್​ಬ್ಯಾಕ್​ ಮಾಡಲಿ ಎಂಬುದು ಅವರ ಅಭಿಮಾನಿಗಳ ಬಯಕೆ. ಆ ಬಯಕೆ ಈಡೇರುವ ಕಾಲ ಈಗ ಬಂದಿದೆ. ಮೇಘನಾ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ.

ಚಿರು ನಿಧನದ ಬಳಿಕ ನಟನೆಯಿಂದ ದೂರ ಉಳಿದುಕೊಂಡಿದ್ದ ಮೇಘನಾ ರಾಜ್​ ಅವರು ದೀರ್ಘ ಗ್ಯಾಪ್​ ಬಳಿಕ ಮತ್ತೆ ನಟಿಸಲು ಸಜ್ಜಾಗಿದ್ದಾರೆ. ಹೊಸ ಚಿತ್ರ ಕೂಡ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಚಿರಂಜೀವಿ ಸರ್ಜಾ ಅವರ ಸ್ನೇಹಿತ ಪನ್ನಗ ಭರಣ ನಿರ್ಮಾಣ ಮಾಡಲಿದ್ದಾರೆ. ಅವರ ಜೊತೆ ಸಂಗೀತ ನಿರ್ದೇಶಕ ವಾಸುಕಿ ವೈಭವ್​, ಹೊಸ ನಿರ್ದೇಶಕ ವಿಶಾಲ್​ ಕೈ ಜೋಡಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮೇಘನಾ ರಾಜ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.

ನಾಳೆ (ಅ.17) ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಈ ಸಿನಿಮಾವನ್ನು ಚಿರು ಜೊತೆ ಸೇರಿ ನಿರ್ಮಾಣ ಮಾಡಬೇಕು ಎಂದು ಪ್ಲ್ಯಾನ್​ ಮಾಡಲಾಗಿತ್ತು. ಆದರೆ ಅದಕ್ಕೆ ವಿಧಿ ಅವಕಾಶ ನೀಡಲಿಲ್ಲ. ಈಗ ಚಿರು ಹುಟ್ಟುಹಬ್ಬದ ದಿನ ಈ ಚಿತ್ರ ಸೆಟ್ಟೇರಲಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ನಾಗಾಭರಣ, ನಟ ಸುಂದರ್​ ರಾಜ್​, ಕಲಾ ನಿರ್ದೇಶಕ ಶಿವಕುಮಾರ್​ ಮುಂತಾದವರು ಆಗಮಿಸಲಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಶೀರ್ಷಿಕೆ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮೇಘನಾ ರಾಜ್​ ಅವರಿಗೆ ಈ ಸಿನಿಮಾದಲ್ಲಿ ಯಾವ ಪಾತ್ರ ಇರಲಿದೆ ಎಂಬುದನ್ನು ತಿಳಿದುಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಅವರು ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲು ನಿರ್ಧರಿಸಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ.

ಇದನ್ನೂ ಓದಿ:

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ಮಗನಿಗೆ ಹೆಸರಿಟ್ಟಿದ್ದಕ್ಕೆ ಕಾರಣ ತಿಳಿಸಿದ ಮೇಘನಾ ರಾಜ್​

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ