AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಐ ಲವ್​ ಯೂ, ಹಿಂದಿರುಗಿ ಬಾ; ಭಾವುಕರಾದ ನಟಿ ಮೇಘನಾ ರಾಜ್​

Meghana Raj Instagram Post: ಅದು ಜೂನ್​ 7. ನಟ ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ತುತ್ತಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಿರು ಮೃತಪಟ್ಟಿದ್ದರು.

Meghana Raj: ಚಿರು ಐ ಲವ್​ ಯೂ, ಹಿಂದಿರುಗಿ ಬಾ; ಭಾವುಕರಾದ ನಟಿ ಮೇಘನಾ ರಾಜ್​
ಮೇಘನಾ ರಾಜ್- ಚಿರಂಜೀವಿ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on:Apr 29, 2021 | 10:04 PM

Share

ನಟಿ ಮೇಘನಾ ರಾಜ್​ ಹಾಗೂ ಚಿರಂಜೀವಿ ಸರ್ಜಾ ಪ್ರೀತಿಸಿ ಮದುವೆ ಆದವರು. ಆದರೆ, ಚಿರು ಹೃದಯಾಘಾತದಿಂದ ಮೃತಪಟ್ಟ ವಿಚಾರ ಅವರ ಕುಟುಂಬದವರಿಂದಾಗಲೀ ಅಭಿಮಾನಿಗಳಿಂದಾಗಲೀ ಸಹಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಚಿರು ಅಗಲಿಕೆಯಿಂದ ತುಂಬಾನೇ ಕೊರಗಿದವರು ಮೇಘನಾ ರಾಜ್​. ಈಗ ಅವರು ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಭಾವನಾತ್ಮಕ ಪೋಸ್ಟ್​ ನೋಡಿ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ.

ಅದು ಜೂನ್​ 7. ನಟ ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ತುತ್ತಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಿರು ಮೃತಪಟ್ಟಿದ್ದರು. ಈ ವಿಚಾರ ಸರ್ಜಾ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿತ್ತು. ಈ ಸಂದರ್ಭದಲ್ಲಿ ಮೇಘನಾ ಗರ್ಭಿಣಿ ಆಗಿದ್ದರು. ದುಃಖದಲ್ಲಿಯೇ ದಿನದೂಡಿದ ಮೇಘನಾ ಅಕ್ಟೋಬರ್ 22ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವನ್ನು ಜೂನಿಯರ್​ ಚಿರು ಎಂದೇ ಕರೆಯಲಾಗಿತ್ತು.

ಈಗ ನಟಿ ಮೇಘನಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಮೇಘನಾ ಚಿರು ಜತೆ ನಿಂತಿದ್ದಾರೆ. ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ಅವರು, ಐ ಲವ್​ ಯೂ, ಹಿಂದಿರುಗಿ ಬಾ ಎಂದು ಮೇಘನಾ ಮನವಿ ಮಾಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳ ಕಣ್ಣು ಒದ್ದೆ ಆಗಿದೆ.

View this post on Instagram

A post shared by Meghana Raj Sarja (@megsraj)

ಚಿರು-ಮೇಘನಾ ಮಗುವಿಗೆ ಇತ್ತೀಚೆಗೆ ಆರು ತಿಂಗಳು ತುಂಬಿತ್ತು. ಮಗುವಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮೇಘನಾ ಸಂಭ್ರಮಿಸಿದ್ದರು. ಇತ್ತೀಚೆಗೆ ಮಗುವಿಗೆ ಕೊರೊನಾ ಅಂಟುವ ಭಯ ಕಾಡಿದ ಬಗ್ಗೆ ಮೇಘನಾ ಹೇಳಿಕೊಂಡಿದ್ದರು.  ನನ್ನ ಗೆಳೆಯರ ಜತೆ ನಾನು ಸಂಪರ್ಕದಲ್ಲಿದ್ದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ನಾನು ಸೆಲ್ಫ್​ ಕ್ವಾರಂಟೈನ್​ ಆದೆ. ನನ್ನ ಮಗು ಹಾಗೂ ಪಾಲಕರ ಆರೋಗ್ಯದ ಬಗ್ಗೆ ನೆನೆದು ತುಂಬಾನೇ ಭಯಗೊಂಡಿದ್ದೆ. ನನ್ನಲ್ಲಿ ಯಾವುದೇ ಕೊರೊನಾ ಲಕ್ಷಣ ಕಾಣಿಸಿಲ್ಲ. ಆದಾಗ್ಯೂ, ನಾನು ಕೊರೊನಾ ಪರೀಕ್ಷೆಗೆ ಒಳಪಟ್ಟೆ. ಈ ವೇಳೆ ನೆಗೆಟಿವ್​ ಬಂದಿದೆ ಎಂದು ಮೇಘನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Meghana Raj: ಜೂನಿಯರ್ ಚಿರುಗೆ ಆರು ತಿಂಗಳು; ಸಂಭ್ರಮಿಸಿದ ಮೇಘನಾ ರಾಜ್​

Published On - 7:32 pm, Thu, 29 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ