AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ ಬದುಕಿಗೆ ಹತ್ತಿರವಾಗಿದೆ ‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರ; ಟ್ರೇಲರ್​ ನೋಡಿ ಅವರು ಹೇಳಿದ್ದೇನು?

Gajanana And Gang Kannada Movie Trailer: ‘ಗಜಾನನ ಆ್ಯಂಡ್​ ಗ್ಯಾಂಗ್​’ ಸಿನಿಮಾದ ಟ್ರೇಲರ್​ಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಮೇಘನಾ ರಾಜ್​ ಅವರಿಗೂ ಟ್ರೇಲರ್​ ತುಂಬ ಇಷ್ಟ ಆಗಿದೆ.

ಮೇಘನಾ ರಾಜ್​ ಬದುಕಿಗೆ ಹತ್ತಿರವಾಗಿದೆ ‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರ; ಟ್ರೇಲರ್​ ನೋಡಿ ಅವರು ಹೇಳಿದ್ದೇನು?
ಗಜಾನನ ಆ್ಯಂಡ್ ಗ್ಯಾಂಗ್, ಮೇಘನಾ ರಾಜ್ ಸರ್ಜಾ
TV9 Web
| Edited By: |

Updated on: Dec 22, 2021 | 5:42 PM

Share

ನಟಿ ಮೇಘನಾ ರಾಜ್​ (Meghana Raj) ಅವರು ಸಿನಿಮಾ ಚಟುವಟಿಕೆಗಳಲ್ಲಿ ಭಾಗಿ ಆಗುತ್ತಿದ್ದಾರೆ. ಕೆಲವು ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇಂದು (ಡಿ.22) ಕನ್ನಡದ ‘ಗಜಾನನ ಆ್ಯಂಡ್​ ಗ್ಯಾಂಗ್​’ (Gajanana And Gang) ಚಿತ್ರದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅವರು ಆಗಮಿಸಿದ್ದರು. ಟ್ರೇಲರ್​ ಲಾಂಚ್​ ಮಾಡಿದ ಬಳಿಕ ಚಿತ್ರತಂಡದ ಬಗ್ಗೆ ಮಾತನಾಡಿದರು. ಈ ಚಿತ್ರಕ್ಕೆ ಅಭಿಷೇಕ್​ ಶೆಟ್ಟಿ (Abhishek Shetty) ನಿರ್ದೇಶನ ಮಾಡಿದ್ದು, ನಾಗೇಶ್​ ಕುಮಾರ್​ ನಿರ್ಮಾಣ ಮಾಡಿದ್ದಾರೆ. ಕಿರುತೆರೆ ನಟ ಶ್ರೀಮಹದೇವ್​ ಅವರು ‘ಗಜಾನನ ಆ್ಯಂಡ್​ ಗ್ಯಾಂಗ್’ ಚಿತ್ರಕ್ಕೆ ಹೀರೋ. ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ (Aditi Prabhudeva) ಅಭಿನಯಿಸಿದ್ದಾರೆ. ಸಿನಿಮಾದ ಟ್ರೇಲರ್​ ನೋಡಿದ ಮೇಘನಾ ರಾಜ್​ಗೆ ಚಿರಂಜೀವಿ ಸರ್ಜಾ (Chiranjeevi Sarja) ಅವರ ನೆನಪಾಗಿದೆ!

ಈ ಸಿನಿಮಾದ ಟ್ರೇಲರ್​ಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಮೇಘನಾ ರಾಜ್​ ಅವರಿಗೂ ಟ್ರೇಲರ್​ ತುಂಬ ಇಷ್ಟ ಆಗಿದೆ. ಎಲ್ಲಕ್ಕಿಂತ ವಿಶೇಷ ಏನೆಂದರೆ ಈ ಟ್ರೇಲರ್​ ನೋಡಿದ ಬಳಿಕ ಅವರು ಚಿರಂಜೀವಿ ಸರ್ಜಾರನ್ನು ನೆನಪು ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಡೈಲಾಗ್​. ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ ಇದರಲ್ಲೊಂದು ಫ್ರೆಂಡ್​ಶಿಪ್​ ಕಥೆ ಇದೆ. ‘ನೀನು ಯಾವತ್ತು ಇವರ (ಫ್ರೆಂಡ್ಸ್​) ಸಹವಾಸ ಬಿಡುತ್ತೀಯೋ ಆವತ್ತು ಉದ್ಧಾರ ಆಗುತ್ತೀಯ’ ಎಂದು ಒಂದು ದೃಶ್ಯದಲ್ಲಿ ಹೀರೋಗೆ ಹೀರೋಯಿನ್​ ಬಯ್ಯುತ್ತಾಳೆ. ಬಳಿಕ ಇನ್ನೊಂದು ದೃಶ್ಯದಲ್ಲಿ ‘ಎಂತಹ ಪರಿಸ್ಥಿತಿಯಲ್ಲೂ ಏನೇ ಆದರೂ ನಿನ್ನ ಫ್ರೆಂಡ್ಸ್​ ಬಿಟ್ಟುಕೊಡಬೇಡ’ ಎಂದು ಆಕೆಯೇ ಹೇಳುತ್ತಾಳೆ.

ಈ ಡೈಲಾಗ್​ ಕೇಳಿದ ಮೇಘನಾಗೆ ಚಿರು ನೆನಪಾಗಿದೆ. ರಿಯಲ್​ ಲೈಫ್​ನಲ್ಲಿ ಚಿರುಗೆ ಮೇಘನಾ ಕೂಡ ಈ ಎರಡೂ ಡೈಲಾಗ್​ಗಳನ್ನು ಹೇಳಿದ್ದರು! ಆ ಘಟನೆಯನ್ನು ವೇದಿಕೆ ಮೇಲೆ ಅವರು ನೆನಪು ಮಾಡಿಕೊಂಡರು. ಚಿರು ಕೂಡ ಸ್ನೇಹ ಜೀವಿ ಆಗಿದ್ದರು. ಸದಾ ಕಾಲ ಸ್ನೇಹಿತರ ಜೊತೆ ಅವರು ಇರುತ್ತಿದ್ದರು. ಆದರೆ ಇಂದು ಅವರು ನಮ್ಮೊಂದಿಗೆ ಇಲ್ಲ ಎಂಬುದು ನೋವಿನ ಸಂಗತಿ.

ಈ ಚಿತ್ರಕ್ಕೆ ಪ್ರದ್ಯೋತ್ತನ್​ ಸಂಗೀತ ನಿರ್ದೇಶನ ಮಾಡಿದ್ದು, ಉದಯ್​ಲೀಲಾ ಛಾಯಾಗ್ರಹಣ ಮಾಡಿದ್ದಾರೆ. ವಿಜೇತ್​ ಚಂದ್ರ ಸಂಕಲನ ಮಾಡಿದ್ದಾರೆ. ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್​ ಅವರು ಆಗಮಿಸಿ ಶುಭ ಕೋರಿದರು. ಈ ಸಿನಿಮಾದಲ್ಲಿ ಬಿಗ್​ ಬಾಸ್​ ಖ್ಯಾತಿಯ ರಘು ಗೌಡ ಮತ್ತು ಶಮಂತ್​ ಬ್ರೋ ಗೌಡ ಕೂಡ ನಟಿಸಿದ್ದಾರೆ.

ಇದನ್ನೂ ಓದಿ:

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!