AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್​ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಶೀರ್ಷಿಕೆ; ಫಸ್ಟ್​ ಲುಕ್​ ಹಂಚಿಕೊಂಡ ನಟಿ

Tatsama Tadbhava | Meghana Raj Sarja: ನಟಿ ಮೇಘನಾ ರಾಜ್​ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಇದೆ.

Meghana Raj: ಮೇಘನಾ ರಾಜ್​ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಶೀರ್ಷಿಕೆ; ಫಸ್ಟ್​ ಲುಕ್​ ಹಂಚಿಕೊಂಡ ನಟಿ
ತತ್ಸಮ ತದ್ಭವ ಫಸ್ಟ್​ಲುಕ್​, ಮೇಘನಾ ರಾಜ್​ ಸರ್ಜಾ
ಮದನ್​ ಕುಮಾರ್​
|

Updated on: Feb 19, 2023 | 11:36 AM

Share

ನಟಿ ಮೇಘನಾ ರಾಜ್​ ಸರ್ಜಾ (Meghana Raj Sarja) ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್​ಬ್ಯಾಕ್​ ಚಿತ್ರಕ್ಕೆ ಪನ್ನಗ ಭರಣ (Pannaga Bharana) ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್​ ಆಗಿದೆ. ‘ತತ್ಸಮ ತದ್ಭವ’ (Tatsama Tadbhava) ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.

ಮೇಘನಾ ರಾಜ್​ ಸರ್ಜಾ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್​ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್​ ಪೋಸ್ಟರ್​ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

ಇದನ್ನೂ ಓದಿ: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ

ಮೇಘನಾ ರಾಜ್​ ಅವರು ಮೊದಲಿನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ‘ತತ್ಸಮ ತದ್ಭವ’ ಚಿತ್ರದ ಪೋಸ್ಟರ್​ಗೆ ಪಾಸಿಟಿವ್​ ಪ್ರತಿಕ್ರಿಯೆಗಳು ಬರುತ್ತಿವೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀನಿವಾಸ್​ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ ಈ ಚಿತ್ರಕ್ಕೆ ಇರಲಿದೆ. ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ; ಇಲ್ಲಿವೆ ಫೋಟೋಗಳು

ಅನೇಕ ಸೆಲೆಬ್ರಿಟಿಗಳು ಮೇಘನಾ ರಾಜ್​ ಅವರಿಗೆ ಶುಭ ಕೋರಿದ್ದಾರೆ. ನಟಿ ರಮ್ಯಾ ಅವರು ‘ತತ್ಸಮ ತದ್ಭವ’ ಚಿತ್ರದ ಪೋಸ್ಟರ್​ ಅನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ‘ಆಲ್​ ದಿ ಬೆಸ್ಟ್​’ ಹೇಳಿದ್ದಾರೆ. ಎಲ್ಲರಿಂದ ಸಿಗುತ್ತಿರುವ ಬೆಂಬಲ ಕಂಡು ಮೇಘನಾ ರಾಜ್​ ಖುಷಿ ಆಗಿದ್ದಾರೆ.

View this post on Instagram

A post shared by Meghana Raj Sarja (@megsraj)

ಮೇಘನಾ ರಾಜ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​:

ಹಲವು ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ನಟ ಪ್ರಜ್ವಲ್​ ದೇವರಾಜ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರಿಬ್ಬರನ್ನು ಒಂದೇ ಸಿನಿಮಾದಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?