AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್​ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಶೀರ್ಷಿಕೆ; ಫಸ್ಟ್​ ಲುಕ್​ ಹಂಚಿಕೊಂಡ ನಟಿ

Tatsama Tadbhava | Meghana Raj Sarja: ನಟಿ ಮೇಘನಾ ರಾಜ್​ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಇದೆ.

Meghana Raj: ಮೇಘನಾ ರಾಜ್​ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಶೀರ್ಷಿಕೆ; ಫಸ್ಟ್​ ಲುಕ್​ ಹಂಚಿಕೊಂಡ ನಟಿ
ತತ್ಸಮ ತದ್ಭವ ಫಸ್ಟ್​ಲುಕ್​, ಮೇಘನಾ ರಾಜ್​ ಸರ್ಜಾ
ಮದನ್​ ಕುಮಾರ್​
|

Updated on: Feb 19, 2023 | 11:36 AM

Share

ನಟಿ ಮೇಘನಾ ರಾಜ್​ ಸರ್ಜಾ (Meghana Raj Sarja) ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್​ಬ್ಯಾಕ್​ ಚಿತ್ರಕ್ಕೆ ಪನ್ನಗ ಭರಣ (Pannaga Bharana) ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್​ ಆಗಿದೆ. ‘ತತ್ಸಮ ತದ್ಭವ’ (Tatsama Tadbhava) ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.

ಮೇಘನಾ ರಾಜ್​ ಸರ್ಜಾ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್​ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್​ ಪೋಸ್ಟರ್​ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

ಇದನ್ನೂ ಓದಿ: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ

ಮೇಘನಾ ರಾಜ್​ ಅವರು ಮೊದಲಿನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ‘ತತ್ಸಮ ತದ್ಭವ’ ಚಿತ್ರದ ಪೋಸ್ಟರ್​ಗೆ ಪಾಸಿಟಿವ್​ ಪ್ರತಿಕ್ರಿಯೆಗಳು ಬರುತ್ತಿವೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀನಿವಾಸ್​ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ ಈ ಚಿತ್ರಕ್ಕೆ ಇರಲಿದೆ. ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ; ಇಲ್ಲಿವೆ ಫೋಟೋಗಳು

ಅನೇಕ ಸೆಲೆಬ್ರಿಟಿಗಳು ಮೇಘನಾ ರಾಜ್​ ಅವರಿಗೆ ಶುಭ ಕೋರಿದ್ದಾರೆ. ನಟಿ ರಮ್ಯಾ ಅವರು ‘ತತ್ಸಮ ತದ್ಭವ’ ಚಿತ್ರದ ಪೋಸ್ಟರ್​ ಅನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ‘ಆಲ್​ ದಿ ಬೆಸ್ಟ್​’ ಹೇಳಿದ್ದಾರೆ. ಎಲ್ಲರಿಂದ ಸಿಗುತ್ತಿರುವ ಬೆಂಬಲ ಕಂಡು ಮೇಘನಾ ರಾಜ್​ ಖುಷಿ ಆಗಿದ್ದಾರೆ.

View this post on Instagram

A post shared by Meghana Raj Sarja (@megsraj)

ಮೇಘನಾ ರಾಜ್​ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​:

ಹಲವು ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ನಟ ಪ್ರಜ್ವಲ್​ ದೇವರಾಜ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರಿಬ್ಬರನ್ನು ಒಂದೇ ಸಿನಿಮಾದಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು