AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಅಕ್ಟೋಬರ್​ ತಿಂಗಳು ಸ್ಪೆಷಲ್​; ವಿಶೇಷ ಪೋಸ್ಟ್​ ಹಂಚಿಕೊಂಡ ನಟಿ

ಮೇಘನಾ ರಾಜ್​ ಹಾಗೂ ಚಿರಂಜೀವಿ ಅವರದ್ದು ಪ್ರೇಮ ವಿವಾಹ. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದರು. ಆಗ ಮೇಘನಾ ರಾಜ್​ ಗರ್ಭಿಣಿ.

ಮೇಘನಾ ರಾಜ್​ಗೆ ಅಕ್ಟೋಬರ್​ ತಿಂಗಳು ಸ್ಪೆಷಲ್​; ವಿಶೇಷ ಪೋಸ್ಟ್​ ಹಂಚಿಕೊಂಡ ನಟಿ
ಮೇಘನಾ ರಾಜ್​
TV9 Web
| Edited By: |

Updated on: Oct 01, 2021 | 8:36 PM

Share

ಚಿರಂಜೀವಿ ಸರ್ಜಾ ಸಾವಿನ ನಂತರ ತೀವ್ರ ನೋವು ಅನುಭವಿಸಿದ್ದ ನಟಿ ಮೇಘನಾ ರಾಜ್​ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಮಗ ರಿಯಾನ್​ ರಾಜ್​ ಸರ್ಜಾ ಹುಟ್ಟಿದ ನಂತರದಲ್ಲಿ ಅವರ ಮುಖದಲ್ಲಿ ಮಂದಹಾಸ ಮೂಡಿದೆ. ಈಗ ಅಕ್ಟೋಬರ್​ ಬಂದಿದ್ದು, ಅವರಿಗೆ ಇದು ವಿಶೇಷ ತಿಂಗಳು. ಇದಕ್ಕೆ ಕಾರಣ ಕೂಡ ಇದೆ.

ಮೇಘನಾ ರಾಜ್​ ಹಾಗೂ ಚಿರಂಜೀವಿ ಅವರದ್ದು ಪ್ರೇಮ ವಿವಾಹ. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದರು. ಆಗ ಮೇಘನಾ ರಾಜ್​ ಗರ್ಭಿಣಿ. ಈ ಎಲ್ಲಾ ನೋವುಗಳನ್ನು ದಾಟಿ ಮೇಘನಾ ರಾಜ್​ ಮುಂದೆ ಬಂದಿದ್ದಾರೆ. ಚಿರುವನ್ನು ಕಳೆದುಕೊಂಡು ಒಂದು ವರ್ಷದ ಮೇಲಾಗಿದ್ದು, ಅವರು ಈಗ ಮೊದಲಿನ ಮನಸ್ಥಿತಿಗೆ ಮರಳುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು ತಮ್ಮ ಮಗ ಎಂದು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ.

ಹಾಗಾದರೆ ಮೇಘನಾಗೆ ಅಕ್ಟೋಬರ್​ ತಿಂಗಳು ವಿಶೇಷ ಏಕೆ? ಅದಕ್ಕೆ ಕಾರಣ ಇದೆ. ಮೇಘನಾ ರಾಜ್​ ಪತಿ ಚಿರಂಜೀವಿ ಸರ್ಜಾ ಹಾಗೂ ಮಗ ರಾಯನ್​ ರಾಜ್​ ಸರ್ಜಾ ಇಬ್ಬರೂ ಹುಟ್ಟಿದ್ದು ಅಕ್ಟೋಬರ್​ ತಿಂಗಳಲ್ಲೇ. ಕೇವಲ ಐದು ದಿನಗಳ ಅಂತರದಲ್ಲಿ ಇಬ್ಬರ ಜನ್ಮದಿನ ಬರಲಿದೆ. ಅಕ್ಟೋಬರ್​ 17 ಚಿರಂಜೀವಿ ಜನ್ಮದಿನ. ರಾಯನ್​ ಹುಟ್ಟಿದ್ದು ಅಕ್ಟೋಬರ್​ 22ರಂದು. ಇದು ಮೇಘನಾಗೆ ಖುಷಿಯ ವಿಚಾರ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್​ ಹಾಕಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ನಂತರ ಅಭಿಮಾನಿಗಳು ಅವರನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಇದು ಅವರು ಇಲ್ಲದೆ ಆಚರಿಸುತ್ತಿರುವ ಎರಡನೇ ವರ್ಷದ ಜನ್ಮದಿನ. ಈ ವಿಶೇಷ ದಿನದಂದು ಕುಟುಂಬದವರು ಚಿರು ಸಮಾಧಿಗೆ ತೆರಳಿ ವಿಶೇಷ ಪೂಜೆ ಅರ್ಪಿಸುವ ಸಾಧ್ಯತೆ ಇದೆ. ಇನ್ನು, ರಾಯನ್​ಗೆ ಇದು ಮೊದಲ ವರ್ಷದ ಹುಟ್ಟುಹಬ್ಬ. ಹೀಗಾಗಿ, ಕುಟುಂಬದವರು ಬರ್ತ್​ಡೇಯನ್ನು ಅದ್ದೂರಿಯಾಗಿ ಆಚರಿಸುವ ಸಾಧ್ಯತೆ ಇದೆ. ​ ಒಟ್ಟಿನಲ್ಲಿ ಮೇಘನಾ ರಾಜ್​ ಅವರ ಅಭಿಮಾನಿಗಳ ಪಾಲಿಗೆ ಈ ತಿಂಗಳು ತುಂಬಾನೇ ವಿಶೇಷವಾಗಿರಲಿದೆ.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್​ ಆಕ್ರೋಶ

ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾಗೆ 11ನೇ ತಿಂಗಳ ಸಂಭ್ರಮ; ಇಲ್ಲಿದೆ ವಿಡಿಯೋ 

 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ