ಮೇಘನಾ ರಾಜ್​ಗೆ ಅಕ್ಟೋಬರ್​ ತಿಂಗಳು ಸ್ಪೆಷಲ್​; ವಿಶೇಷ ಪೋಸ್ಟ್​ ಹಂಚಿಕೊಂಡ ನಟಿ

ಮೇಘನಾ ರಾಜ್​ ಹಾಗೂ ಚಿರಂಜೀವಿ ಅವರದ್ದು ಪ್ರೇಮ ವಿವಾಹ. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದರು. ಆಗ ಮೇಘನಾ ರಾಜ್​ ಗರ್ಭಿಣಿ.

ಮೇಘನಾ ರಾಜ್​ಗೆ ಅಕ್ಟೋಬರ್​ ತಿಂಗಳು ಸ್ಪೆಷಲ್​; ವಿಶೇಷ ಪೋಸ್ಟ್​ ಹಂಚಿಕೊಂಡ ನಟಿ
ಮೇಘನಾ ರಾಜ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 01, 2021 | 8:36 PM

ಚಿರಂಜೀವಿ ಸರ್ಜಾ ಸಾವಿನ ನಂತರ ತೀವ್ರ ನೋವು ಅನುಭವಿಸಿದ್ದ ನಟಿ ಮೇಘನಾ ರಾಜ್​ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಮಗ ರಿಯಾನ್​ ರಾಜ್​ ಸರ್ಜಾ ಹುಟ್ಟಿದ ನಂತರದಲ್ಲಿ ಅವರ ಮುಖದಲ್ಲಿ ಮಂದಹಾಸ ಮೂಡಿದೆ. ಈಗ ಅಕ್ಟೋಬರ್​ ಬಂದಿದ್ದು, ಅವರಿಗೆ ಇದು ವಿಶೇಷ ತಿಂಗಳು. ಇದಕ್ಕೆ ಕಾರಣ ಕೂಡ ಇದೆ.

ಮೇಘನಾ ರಾಜ್​ ಹಾಗೂ ಚಿರಂಜೀವಿ ಅವರದ್ದು ಪ್ರೇಮ ವಿವಾಹ. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದರು. ಆಗ ಮೇಘನಾ ರಾಜ್​ ಗರ್ಭಿಣಿ. ಈ ಎಲ್ಲಾ ನೋವುಗಳನ್ನು ದಾಟಿ ಮೇಘನಾ ರಾಜ್​ ಮುಂದೆ ಬಂದಿದ್ದಾರೆ. ಚಿರುವನ್ನು ಕಳೆದುಕೊಂಡು ಒಂದು ವರ್ಷದ ಮೇಲಾಗಿದ್ದು, ಅವರು ಈಗ ಮೊದಲಿನ ಮನಸ್ಥಿತಿಗೆ ಮರಳುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು ತಮ್ಮ ಮಗ ಎಂದು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ.

ಹಾಗಾದರೆ ಮೇಘನಾಗೆ ಅಕ್ಟೋಬರ್​ ತಿಂಗಳು ವಿಶೇಷ ಏಕೆ? ಅದಕ್ಕೆ ಕಾರಣ ಇದೆ. ಮೇಘನಾ ರಾಜ್​ ಪತಿ ಚಿರಂಜೀವಿ ಸರ್ಜಾ ಹಾಗೂ ಮಗ ರಾಯನ್​ ರಾಜ್​ ಸರ್ಜಾ ಇಬ್ಬರೂ ಹುಟ್ಟಿದ್ದು ಅಕ್ಟೋಬರ್​ ತಿಂಗಳಲ್ಲೇ. ಕೇವಲ ಐದು ದಿನಗಳ ಅಂತರದಲ್ಲಿ ಇಬ್ಬರ ಜನ್ಮದಿನ ಬರಲಿದೆ. ಅಕ್ಟೋಬರ್​ 17 ಚಿರಂಜೀವಿ ಜನ್ಮದಿನ. ರಾಯನ್​ ಹುಟ್ಟಿದ್ದು ಅಕ್ಟೋಬರ್​ 22ರಂದು. ಇದು ಮೇಘನಾಗೆ ಖುಷಿಯ ವಿಚಾರ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್​ ಹಾಕಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ನಂತರ ಅಭಿಮಾನಿಗಳು ಅವರನ್ನು ತುಂಬಾನೇ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಇದು ಅವರು ಇಲ್ಲದೆ ಆಚರಿಸುತ್ತಿರುವ ಎರಡನೇ ವರ್ಷದ ಜನ್ಮದಿನ. ಈ ವಿಶೇಷ ದಿನದಂದು ಕುಟುಂಬದವರು ಚಿರು ಸಮಾಧಿಗೆ ತೆರಳಿ ವಿಶೇಷ ಪೂಜೆ ಅರ್ಪಿಸುವ ಸಾಧ್ಯತೆ ಇದೆ. ಇನ್ನು, ರಾಯನ್​ಗೆ ಇದು ಮೊದಲ ವರ್ಷದ ಹುಟ್ಟುಹಬ್ಬ. ಹೀಗಾಗಿ, ಕುಟುಂಬದವರು ಬರ್ತ್​ಡೇಯನ್ನು ಅದ್ದೂರಿಯಾಗಿ ಆಚರಿಸುವ ಸಾಧ್ಯತೆ ಇದೆ. ​ ಒಟ್ಟಿನಲ್ಲಿ ಮೇಘನಾ ರಾಜ್​ ಅವರ ಅಭಿಮಾನಿಗಳ ಪಾಲಿಗೆ ಈ ತಿಂಗಳು ತುಂಬಾನೇ ವಿಶೇಷವಾಗಿರಲಿದೆ.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್​ ಆಕ್ರೋಶ

ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾಗೆ 11ನೇ ತಿಂಗಳ ಸಂಭ್ರಮ; ಇಲ್ಲಿದೆ ವಿಡಿಯೋ 

 

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ