AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ನಟಿ ಮೇಘನಾ ರಾಜ್​ ಮಗುವಿನ ಆರೋಗ್ಯದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದೇಕೆ?

ಕೊರೊನಾ ವೈರಸ್​ ಮೊದಲನೇ ಅಲೆ ಕಾಣಿಸಿಕೊಂಡಾಗ ನಟಿ ಮೇಘನಾ ರಾಜ್​ಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಈಗ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಸಾಕಷ್ಟು ನಟ-ನಟಿಯರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಳ್ಳುತ್ತಿದೆ. ಈ ವೇಳೆ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್​ ಕಾಣಿಸಿಕೊಳ್ಳುವ ಭಯ ಕಾಡಿತ್ತು. ಹೀಗಾಗಿ, ಅವರು ಮಗುವಿನ ಆರೋಗ್ಯದ ಬಗ್ಗೆಯೂ ಹೆಚ್ಚು ಆತಂಕಗೊಂಡಿದ್ದರಂತೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಗೆಳೆಯರ ಜತೆ ನಾನು ಸಂಪರ್ಕದಲ್ಲಿದ್ದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ನಾನು […]

Meghana Raj: ನಟಿ ಮೇಘನಾ ರಾಜ್​ ಮಗುವಿನ ಆರೋಗ್ಯದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದೇಕೆ?
ಮಗು ಸಿಂಬಾ ಜತೆ ಮೇಘನಾ ರಾಜ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 8:02 PM

Share

ಕೊರೊನಾ ವೈರಸ್​ ಮೊದಲನೇ ಅಲೆ ಕಾಣಿಸಿಕೊಂಡಾಗ ನಟಿ ಮೇಘನಾ ರಾಜ್​ಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಈಗ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಸಾಕಷ್ಟು ನಟ-ನಟಿಯರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಳ್ಳುತ್ತಿದೆ. ಈ ವೇಳೆ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್​ ಕಾಣಿಸಿಕೊಳ್ಳುವ ಭಯ ಕಾಡಿತ್ತು. ಹೀಗಾಗಿ, ಅವರು ಮಗುವಿನ ಆರೋಗ್ಯದ ಬಗ್ಗೆಯೂ ಹೆಚ್ಚು ಆತಂಕಗೊಂಡಿದ್ದರಂತೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಗೆಳೆಯರ ಜತೆ ನಾನು ಸಂಪರ್ಕದಲ್ಲಿದ್ದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ನಾನು ಸೆಲ್ಫ್​ ಕ್ವಾರಂಟೈನ್​ ಆದೆ. ನನ್ನ ಮಗು ಹಾಗೂ ಪಾಲಕರ ಆರೋಗ್ಯದ ಬಗ್ಗೆ ನೆನೆದು ತುಂಬಾನೇ ಭಯಗೊಂಡಿದ್ದೆ. ನನ್ನಲ್ಲಿ ಯಾವುದೇ ಕೊರೊನಾ ಲಕ್ಷಣ ಕಾಣಿಸಿಲ್ಲ. ಆದಾಗ್ಯೂ, ನಾನು ಕೊರೊನಾ ಪರೀಕ್ಷೆಗೆ ಒಳಪಟ್ಟೆ. ಈ ವೇಳೆ ನೆಗೆಟಿವ್​ ಬಂದಿದೆ. ನಾನು ಈಗ ಆರೋಗ್ಯಯುತವಾಗಿದ್ದೇನೆ. ಮಗು ಹಾಗೂ ಪಾಲಕರ ಆರೋಗ್ಯದ ಬಗ್ಗೆ ಇದ್ದ ಆತಂಕ ದೂರವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನು, ಈ ಮೊದಲಿನ ಕೊರೊನಾ ಕರಾಳ ಅನುಭವದ ಬಗ್ಗೆಯೂ ಮೇಘನಾ ರಾಜ್​ ಬರೆದುಕೊಂಡಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ನನಗೆ, ನನ್ನ ತಂದೆ-ತಾಯಿಗೆ ಕೊರೊನಾ ಕಾಣಿಸಿಕೊಂಡಿತ್ತು. ಈ ವೇಳೆ ನಾವು ತೀವ್ರ ತೊಂದರೆ ಅನುಭವಿಸಿದ್ದೆವು ಎಂದಿದ್ದಾರೆ.

ಇನ್ನು, ಕೊರೊನಾ ಹರಡಲು ತಡೆಯಲೂ ಮೇಘನಾ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಇದನ್ನು ಹರಡದಂತೆ ತಡೆಯಿರಿ. ನಮ್ಮಿಂದ ಬೇರೆಯವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Meghana Raj: ಮೇಘನಾ ರಾಜ್ ಪೋಸ್ಟ್ ಮೂಡಿಸಿದ ಕುತೂಹಲ; ಫೆಬ್ರವರಿ 12ಕ್ಕೆ ಚಿರಂಜೀವಿ ಸರ್ಜಾ ಮಗುವಿನ ನಾಮಕರಣ?

Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್