AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ನನ್ನ ನಿನ್ನೆ, ನಾಳೆಗಳು ನೀನೇ’; ಚಿರು ನೆನೆದು ಮೇಘನಾ ರಾಜ್ ಭಾವುಕ

Chiranjeevi Sarja: ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ.

Meghana Raj: ನನ್ನ ನಿನ್ನೆ, ನಾಳೆಗಳು ನೀನೇ’; ಚಿರು ನೆನೆದು ಮೇಘನಾ ರಾಜ್ ಭಾವುಕ
ಚಿರು-ಮೇಘನಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 08, 2023 | 9:22 AM

Share

ಮೇಘನಾ ರಾಜ್ (Meghana Raj) ಹಾಗೂ ಚಿರಂಜೀವಿ ಸರ್ಜಾ ಪ್ರಿತಿಸಿ ಮದುವೆ ಆದವರು. ಆದರೆ ವಿಧಿಯ ಕೈವಾಡ. ಚಿರು ಸರ್ಜಾ ಮೃತಪಟ್ಟರು. ಅಲ್ಲಿಂದ ಮೇಘನಾ ರಾಜ್ ಕಣ್ಣೀರಲ್ಲಿ ಕೈ ತೊಳೆಯುವಂತೆ ಆಯಿತು. ಇಂದಿಗೆ (ಜೂನ್ 7) ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್​​ಹೌಸ್​ನಲ್ಲಿರುವ ಚಿರು (Chiranjeevi Sarja) ಸಮಾಧಿಗೆ ಇಡೀ ಕುಟುಂಬ ಭೇಟಿ ನೀಡಿ ಪುಷ್ಪಾರ್ಚನೆ ಮಾಡಿದೆ. ಇದಕ್ಕೂ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಮೇಘನಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

2020ರ ಜೂನ್7 ರಂದು ಚಿರಂಜೀವಿಗೆ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಾಲಯಿತು. ಆದರೆ, ಅವರು ಬದುಕುಳಿಯಲೇ ಇಲ್ಲ. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತು. ಅಕ್ಷರಶಃ ಎಲ್ಲರೂ ಶಾಕ್​ಗೆ ಒಳಗಾದರು. ಅನೇಕ ತಿಂಗಳ ಕಾಲ ಮೇಘನಾ ರಾಜ್ ಅವರು ಕಣ್ಣೀರಲ್ಲಿ ಕೈ ತೊಳೆದರು. ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ.

ಇದನ್ನೂ ಓದಿ: ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ಚಿರಂಜೀವಿ ಜನ್ಮದಿನ ಇರಲಿ ಪುಣ್ಯತಿಥಿ ಇರಲಿ ಮೇಘನಾ ರಾಜ್ ಅವರು ಪತಿಯ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಾರೆ. ಅದೇ ರೀತಿ ಮೇಘನಾ ಅವರು ಇಂದು ಒಂದು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಚಿರು ನಿಂತಿದ್ದಾರೆ. ಅವರ ಹಿಂದೆ ಮೇಘನಾ ನಿಂತಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಈ ಫೋಟೋಗೆ ಮೇಘನಾ, ‘ನನ್ನ ನಿನ್ನೆ, ಇಂದು ಹಾಗೂ ನಾಳೆಗಳು ನೀನೆ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಶೇರ್ ಮಾಡಿಕೊಂಡ ಒಂದು ಗಂಟೆಯಲ್ಲಿ ಸಾವಿರಾರು ಲೈಕ್ಸ್ ಸಿಕ್ಕಿದೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​​ನಲ್ಲಿ ‘ಮಿಸ್​ ಯೂ ಚಿರು ಸರ್ಜಾ’ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Meghana Raj Sarja (@megsraj)

ಇಂದು ಮಧ್ಯಾಹ್ನ ಮೇಘನಾ ರಾಜ್, ಧ್ರುವ ಸರ್ಜಾ, ರಾಯನ್ ರಾಜ್ ಸರ್ಜಾ ಚಿರು ಸಮಾಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಚಿರು ಸಮಾಧಿಗೆ ಪೂಜೆ ಮಾಡಲಾಗಿದೆ. ಚಿರು ಅಭಿಮಾನಿಗಳು ಕೂಡ ಇಲ್ಲಿ ನೆರೆದಿದ್ದರು. ಇಡೀ ಕುಟುಂಬ ಚಿರುನ ನೆನೆದು ಭಾವುಕ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Wed, 7 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ