AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವಕ್ಕೆ ರಾಯನ್​ ರಾಜ್​ ಸರ್ಜಾ ಮುದ್ದಾದ ಸೆಲ್ಯೂಟ್​; ಚಿರು ಪುತ್ರನ ಫೋಟೋ ವೈರಲ್​

ಮೇಘನಾ ರಾಜ್​ ಅವರ ಪುತ್ರ ರಾಯನ್​ ಸರ್ಜಾ ತ್ರಿವರ್ಣ ಧ್ವಜ ಹಿಡಿದು ಮುದ್ದಾಗಿ ಪೋಸ್​ ನೀಡಿದ್ದಾನೆ. ‘ಲವ್​ ಯೂ ಜೂನಿಯರ್ ಚಿರು’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆತನ ಕ್ಯೂಟ್ನೆಸ್​ ಕಂಡು ಫ್ಯಾನ್ಸ್​ ಮನಸೋತಿದ್ದಾರೆ. ಮೇಘನಾ ರಾಜ್​ ಅವರ ವೃತ್ತಿಜೀವನಕ್ಕೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವಕ್ಕೆ ರಾಯನ್​ ರಾಜ್​ ಸರ್ಜಾ ಮುದ್ದಾದ ಸೆಲ್ಯೂಟ್​; ಚಿರು ಪುತ್ರನ ಫೋಟೋ ವೈರಲ್​
ರಾಯನ್​ ರಾಜ್​ ಸರ್ಜಾ
ಮದನ್​ ಕುಮಾರ್​
|

Updated on: Aug 15, 2023 | 3:43 PM

Share

ನಟಿ ಮೇಘನಾ ರಾಜ್​ (Meghana Raj) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ, ಸಿನಿಮಾಗಳ ಬಗ್ಗೆ ಅವರು ಆಗಾಗ ಏನಾದರೂ ಪೋಸ್ಟ್​ ಮಾಡುತ್ತಾ ಇರುತ್ತಾರೆ. ಮಗನ ಆರೈಕೆ ಮತ್ತು ಸಿನಿಮಾ ಕೆಲಸ ಎರಡನ್ನೂ ಅವರು ಬ್ಯಾಲೆನ್ಸ್​ ಮಾಡುತ್ತಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಪುತ್ರ ರಾಯನ್​ ರಾಜ್​ ಸರ್ಜಾ (Raayan Raj Sarja) ಬಗ್ಗೆ ಪೋಸ್ಟ್​ ಮಾಡಲು ಮೇಘನಾ ರಾಜ್​ ಮರೆಯುವುದಿಲ್ಲ. ಇಂದು (ಆಗಸ್ಟ್​ 15) ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಗನ ಫೋಟೋ ಮತ್ತು ವಿಡಿಯೋವನ್ನು ಮೇಘನಾ ರಾಜ್​ ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಯನ್​ ಮುದ್ದಾಗಿ ಸೆಲ್ಯೂಟ್​ ಮಾಡಿದ್ದಾನೆ. ಈ ಫೋಟೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇದೇ ರೀತಿ ರಿಷಬ್​ ಶೆಟ್ಟಿ, ಶಿವರಾಜ್​ಕುಮಾರ್​, ಆಶಾ ಭಟ್​, ಅರವಿಂದ್​ ಕೆ.ಪಿ. ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸ್ವಾತಂತ್ರ್ಯೋತ್ಸವದ (Independence Day 2023) ಶುಭಾಶಯ ತಿಳಿಸಿದ್ದಾರೆ.

ಚಿರಂಜೀವಿ ಸರ್ಜಾ ಅಗಲಿಕೆ ನಂತರ ಮೇಘನಾ ರಾಜ್​ ಅವರ ಬದುಕಿನಲ್ಲಿ ದುಃಖ ಆವರಿಸಿತ್ತು. ಆದರೆ ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ಜೀವನದಲ್ಲಿ ಹೊಸ ಭರವಸೆ ಮೂಡಿತು. ಮಗನ ಆರೈಕೆಯಲ್ಲಿ ಅವರು ಸಂಪೂರ್ಣ ತೊಡಗಿಕೊಂಡರು. ರಾಯನ್​ಗೆ ಚಿರು ಅಭಿಮಾನಿಗಳು ಸಖತ್​ ಪ್ರೀತಿ ತೋರಿಸುತ್ತಾರೆ. ಆತನ ಪ್ರತಿ ಫೋಟೋಗೆ ಭರಪೂರ ಲೈಕ್ಸ್​ ನೀಡುತ್ತಾರೆ. ಮಗನ ಎಲ್ಲ ಬೆಳವಣಿಗೆ ಬಗ್ಗೆ ಮೇಘನಾ ರಾಜ್​ ಅವರು ಆಗಾಗ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

ಮೇಘನಾ ರಾಜ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

View this post on Instagram

A post shared by Meghana Raj Sarja (@megsraj)

ಇನ್ನೊಂದು ವಿಡಿಯೋದಲ್ಲಿ ಮೇಘನಾ ರಾಜ್​ ಅವರ ಪುತ್ರ ರಾಯನ್​ ಸರ್ಜಾ ತ್ರಿವರ್ಣ ಧ್ವಜ ಹಿಡಿದು ಮುದ್ದಾಗಿ ಪೋಸ್​ ನೀಡಿದ್ದಾನೆ. ‘ಲವ್​ ಯೂ ಜೂನಿಯರ್ ಚಿರು’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆತನ ಕ್ಯೂಟ್ನೆಸ್​ ಕಂಡು ಫ್ಯಾನ್ಸ್​ ಮನಸೋತಿದ್ದಾರೆ. ಮೇಘನಾ ರಾಜ್​ ಅವರ ವೃತ್ತಿಜೀವನಕ್ಕೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಮೇಘನಾ ರಾಜ್​ ಅವರು ‘ತತ್ಸಮ ತದ್ಭವ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್​ ದೇವರಾಜ್​ ಕೂಡ ಒಂದು ಪಾತ್ರ ಮಾಡಿದ್ದಾರೆ. ಪೊಲೀಸ್​ ಅಧಿಕಾರಿಯಾಗಿ ಪ್ರಜ್ವಲ್​ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆದಿದೆ. ಕೊಲೆ ರಹಸ್ಯದ ಸುತ್ತ ಈ ಸಿನಿಮಾದ ಕಥೆ ಸಾಗಲಿದೆ. ವಿಶಾಲ್ ಆತ್ರೇಯ ನಿರ್ದೇಶನದ ‘ತತ್ಸಮ ತದ್ಭವ’ ಚಿತ್ರಕ್ಕೆ ಪನ್ನಗ ಭರಣ ಅವರು ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ