ಸ್ವಾತಂತ್ರ್ಯೋತ್ಸವಕ್ಕೆ ರಾಯನ್​ ರಾಜ್​ ಸರ್ಜಾ ಮುದ್ದಾದ ಸೆಲ್ಯೂಟ್​; ಚಿರು ಪುತ್ರನ ಫೋಟೋ ವೈರಲ್​

ಮೇಘನಾ ರಾಜ್​ ಅವರ ಪುತ್ರ ರಾಯನ್​ ಸರ್ಜಾ ತ್ರಿವರ್ಣ ಧ್ವಜ ಹಿಡಿದು ಮುದ್ದಾಗಿ ಪೋಸ್​ ನೀಡಿದ್ದಾನೆ. ‘ಲವ್​ ಯೂ ಜೂನಿಯರ್ ಚಿರು’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆತನ ಕ್ಯೂಟ್ನೆಸ್​ ಕಂಡು ಫ್ಯಾನ್ಸ್​ ಮನಸೋತಿದ್ದಾರೆ. ಮೇಘನಾ ರಾಜ್​ ಅವರ ವೃತ್ತಿಜೀವನಕ್ಕೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವಕ್ಕೆ ರಾಯನ್​ ರಾಜ್​ ಸರ್ಜಾ ಮುದ್ದಾದ ಸೆಲ್ಯೂಟ್​; ಚಿರು ಪುತ್ರನ ಫೋಟೋ ವೈರಲ್​
ರಾಯನ್​ ರಾಜ್​ ಸರ್ಜಾ

Updated on: Aug 15, 2023 | 3:43 PM

ನಟಿ ಮೇಘನಾ ರಾಜ್​ (Meghana Raj) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ, ಸಿನಿಮಾಗಳ ಬಗ್ಗೆ ಅವರು ಆಗಾಗ ಏನಾದರೂ ಪೋಸ್ಟ್​ ಮಾಡುತ್ತಾ ಇರುತ್ತಾರೆ. ಮಗನ ಆರೈಕೆ ಮತ್ತು ಸಿನಿಮಾ ಕೆಲಸ ಎರಡನ್ನೂ ಅವರು ಬ್ಯಾಲೆನ್ಸ್​ ಮಾಡುತ್ತಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಪುತ್ರ ರಾಯನ್​ ರಾಜ್​ ಸರ್ಜಾ (Raayan Raj Sarja) ಬಗ್ಗೆ ಪೋಸ್ಟ್​ ಮಾಡಲು ಮೇಘನಾ ರಾಜ್​ ಮರೆಯುವುದಿಲ್ಲ. ಇಂದು (ಆಗಸ್ಟ್​ 15) ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಗನ ಫೋಟೋ ಮತ್ತು ವಿಡಿಯೋವನ್ನು ಮೇಘನಾ ರಾಜ್​ ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಯನ್​ ಮುದ್ದಾಗಿ ಸೆಲ್ಯೂಟ್​ ಮಾಡಿದ್ದಾನೆ. ಈ ಫೋಟೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇದೇ ರೀತಿ ರಿಷಬ್​ ಶೆಟ್ಟಿ, ಶಿವರಾಜ್​ಕುಮಾರ್​, ಆಶಾ ಭಟ್​, ಅರವಿಂದ್​ ಕೆ.ಪಿ. ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸ್ವಾತಂತ್ರ್ಯೋತ್ಸವದ (Independence Day 2023) ಶುಭಾಶಯ ತಿಳಿಸಿದ್ದಾರೆ.

ಚಿರಂಜೀವಿ ಸರ್ಜಾ ಅಗಲಿಕೆ ನಂತರ ಮೇಘನಾ ರಾಜ್​ ಅವರ ಬದುಕಿನಲ್ಲಿ ದುಃಖ ಆವರಿಸಿತ್ತು. ಆದರೆ ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ಜೀವನದಲ್ಲಿ ಹೊಸ ಭರವಸೆ ಮೂಡಿತು. ಮಗನ ಆರೈಕೆಯಲ್ಲಿ ಅವರು ಸಂಪೂರ್ಣ ತೊಡಗಿಕೊಂಡರು. ರಾಯನ್​ಗೆ ಚಿರು ಅಭಿಮಾನಿಗಳು ಸಖತ್​ ಪ್ರೀತಿ ತೋರಿಸುತ್ತಾರೆ. ಆತನ ಪ್ರತಿ ಫೋಟೋಗೆ ಭರಪೂರ ಲೈಕ್ಸ್​ ನೀಡುತ್ತಾರೆ. ಮಗನ ಎಲ್ಲ ಬೆಳವಣಿಗೆ ಬಗ್ಗೆ ಮೇಘನಾ ರಾಜ್​ ಅವರು ಆಗಾಗ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

ಮೇಘನಾ ರಾಜ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

ಇನ್ನೊಂದು ವಿಡಿಯೋದಲ್ಲಿ ಮೇಘನಾ ರಾಜ್​ ಅವರ ಪುತ್ರ ರಾಯನ್​ ಸರ್ಜಾ ತ್ರಿವರ್ಣ ಧ್ವಜ ಹಿಡಿದು ಮುದ್ದಾಗಿ ಪೋಸ್​ ನೀಡಿದ್ದಾನೆ. ‘ಲವ್​ ಯೂ ಜೂನಿಯರ್ ಚಿರು’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆತನ ಕ್ಯೂಟ್ನೆಸ್​ ಕಂಡು ಫ್ಯಾನ್ಸ್​ ಮನಸೋತಿದ್ದಾರೆ. ಮೇಘನಾ ರಾಜ್​ ಅವರ ವೃತ್ತಿಜೀವನಕ್ಕೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಮೇಘನಾ ರಾಜ್​ ಅವರು ‘ತತ್ಸಮ ತದ್ಭವ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್​ ದೇವರಾಜ್​ ಕೂಡ ಒಂದು ಪಾತ್ರ ಮಾಡಿದ್ದಾರೆ. ಪೊಲೀಸ್​ ಅಧಿಕಾರಿಯಾಗಿ ಪ್ರಜ್ವಲ್​ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆದಿದೆ. ಕೊಲೆ ರಹಸ್ಯದ ಸುತ್ತ ಈ ಸಿನಿಮಾದ ಕಥೆ ಸಾಗಲಿದೆ. ವಿಶಾಲ್ ಆತ್ರೇಯ ನಿರ್ದೇಶನದ ‘ತತ್ಸಮ ತದ್ಭವ’ ಚಿತ್ರಕ್ಕೆ ಪನ್ನಗ ಭರಣ ಅವರು ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us