AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಟಿ ಮೇಘನಾ ರಾಜ್

ಪತಿ ಚಿರಂಜೀವಿ ಮೃತಪಟ್ಟ ಬಳಿಕ ಅವರು ಕಣ್ಣೀರಲ್ಲಿ ಕೈ ತೊಳೆದರು. ರಾಯನ್ ಜನಿಸಿದ ಬಳಿಕ ಅವರ ಬಾಳಲ್ಲಿ ಮತ್ತೆ ಸಂತೋಷ ಮೂಡಿತು. ಈಗ ಮೇಘನಾ ರಾಜ್ ಅವರು ಖುಷಿಯಾಗಿದ್ದಾರೆ.

Meghana Raj: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಟಿ ಮೇಘನಾ ರಾಜ್
ಮೇಘನಾ ರಾಜ್
ರಾಜೇಶ್ ದುಗ್ಗುಮನೆ
|

Updated on: Jul 17, 2023 | 8:27 AM

Share

ಮೇಘನಾ ರಾಜ್ (Meghana Raj) ಅವರು ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಪೋಸ್ಟರ್​ಗಳು ಗಮನ ಸೆಳೆದಿವೆ. ಇದು ಮಹಿಳಾ ಪ್ರಧಾನ ಸಿನಿಮಾ ಎಂಬ ಕಾರಣಕ್ಕೂ ನಿರೀಕ್ಷೆ ಹೆಚ್ಚಿದೆ. ಈಗ ಮೇಘನಾ ರಾಜ್ ಅವರು ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಇಂದು (ಜುಲೈ 17) ‘ತತ್ಸಮ ತದ್ಭವ’ (Tatsama Tadbhava) ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಈ ವಿಚಾರ ತಿಳಿದು ಅಭಿಮಾನಿಗಳು ಖುಷಿ ಆಗಿದ್ದಾರೆ. ಟೀಸರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಕೆಲ ವರ್ಷಗಳಿಂದ ಈಚೆ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರುಪೇರುಗಳು ಉಂಟಾದವು. ಪತಿ ಚಿರಂಜೀವಿ ಮೃತಪಟ್ಟ ಬಳಿಕ ಅವರು ಕಣ್ಣೀರಲ್ಲಿ ಕೈ ತೊಳೆದರು. ರಾಯನ್ ಜನಿಸಿದ ಬಳಿಕ ಅವರ ಬಾಳಲ್ಲಿ ಮತ್ತೆ ಸಂತೋಷ ಮೂಡಿತು. ಈಗ ಮೇಘನಾ ರಾಜ್ ಅವರು ಖುಷಿಯಾಗಿದ್ದಾರೆ. ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ ಚಿತ್ರದ ಟೀಸರ್ ಈಗ ರಿಲೀಸ್ ಆಗುತ್ತಿದೆ.

‘ಎಲ್ಲರಿಗೂ ನಮಸ್ಕಾರ ನಾನು ನಿಮ್ಮ ಮೇಘನಾ ರಾಜ್. ಜುಲೈ 17ರಂದು ‘ತತ್ಸಮ ತದ್ಭವ’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿದೆ. ಬೀಟಲ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಟೀಸರ್ ಬಿಡುಗಡೆ ಆಗಲಿದೆ’ ಎಂದು ಮೇಘನಾ ರಾಜ್ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಫ್ಯಾನ್ಸ್ ಈ ಪೋಸ್ಟ್​ ನೋಡಿ ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕಾಗಿ ಕಾದಿದ್ದೇವೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಕೆಲ ತಿಂಗಳ ಹಿಂದೆ ಚಿತ್ರತಂಡ ಶೂಟಿಂಗ್ ಪೂರ್ಣಗೊಳಿಸಿತ್ತು. ಈಗ ‘ತತ್ಸಮ ತದ್ಭವ’ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಆಗಿದೆ. ಮೇಘನಾ ರಾಜ್ ಅವರು ಮೇ 3ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ‘ತತ್ಸಮ ತದ್ಭವ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಆಗಿತ್ತು. ಈ ಪೋಸ್ಟರ್​ ನೋಡಿ ಫ್ಯಾನ್ಸ್ ಖಷಿಪಟ್ಟಿದ್ದರು. ಈ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿತ್ತು. ಈಗ ಟೀಸರ್ ಬಗ್ಗೆ ಕುತೂಹಲ ಮೂಡಿದೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ಶಿವರಾಜ್​ಕುಮಾರ್​ಗೆ ವಿಶೇಷ ರೀತಿಯಲ್ಲಿ ವಿಶ್ ಮಾಡಿದ ನಟಿ ಮೇಘನಾ ರಾಜ್

ಮೇಘನಾ ಗೆಳೆಯ ಪನ್ನಗ ಭರಣ ‘ತತ್ಸಮ ತದ್ಭವ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸ್ಫೂರ್ತಿ ಅನಿಲ್ ಪನ್ನಗ ಭರಣ ಜೊತೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ವಿಶಾಲ್ ಆತ್ರೇಯ ನಿರ್ದೇಶನ ಇದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್