AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​-ಚಿರು ಸರ್ಜಾ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ರಾಯನ್​ ರಾಜ್​ ಸರ್ಜಾ

ರಾಯನ್​ ರಾಜ್​ ಸರ್ಜಾಗೆ​ ಇತ್ತೀಚೆಗಷ್ಟೇ ಒಂದು ವರ್ಷ ತುಂಬಿತ್ತು. ಮೇಘನಾ ರಾಜ್​ ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು. ಕಾಡಿನ ರೀತಿಯಲ್ಲಿ ಅಲಂಕರಿಸಿ, ರಾಯನ್​ ಬರ್ತ್​ಡೇ ಸೆಲಬ್ರೇಷನ್​ ಮಾಡಲಾಗಿತ್ತು

ಮೇಘನಾ ರಾಜ್​-ಚಿರು ಸರ್ಜಾ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ರಾಯನ್​ ರಾಜ್​ ಸರ್ಜಾ
ಮೇಘನಾ ರಾಜ್​ ಮತ್ತು ರಾಯನ್
TV9 Web
| Edited By: |

Updated on:Nov 04, 2021 | 3:43 PM

Share

ಬೆಳಕಿನ ಹಬ್ಬ ದೀಪಾವಳಿ ಬಂದಿದೆ. 2020ರಂತೆ 2021ರಲ್ಲೂ ಸಾಕಷ್ಟು ಕಹಿಘಟನೆಗಳು ನಡೆದವು. ಮುಂದಿನ ದಿನಗಳಲ್ಲಿ ಇದು ಮರುಕಳಿಸದಿರಲಿ ಎಂದು ಈ ಹಬ್ಬದಂದು ಎಲ್ಲರೂ ಬೇಡಿಕೊಳ್ಳುತ್ತಿದ್ದಾರೆ. ಮನೆಯಲ್ಲಿ ದೀಪ ಹಚ್ಚುವ ಮೂಲಕ ಹಬ್ಬವನ್ನು ಜೋರಾಗಿ ಆಚರಿಸಲಾಗುತ್ತಿದೆ. ನಟ-ನಟಿಯರು ಕೂಡ ಹಬ್ಬದ ಆಚರಣೆಯ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ. ಈಗ ನಟಿ ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾ ಕೂಡ ಚಿರು-ಮೇಘನಾ ಅಭಿಮಾನಿಗಳಿಗೆ ವಿಶ್​ ಮಾಡಿದ್ದಾನೆ.

ರಾಯನ್​ ರಾಜ್​ ಸರ್ಜಾಗೆ​ ಇತ್ತೀಚೆಗಷ್ಟೇ ಒಂದು ವರ್ಷ ತುಂಬಿತ್ತು. ಮೇಘನಾ ರಾಜ್​ ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು. ಮನೆಯನ್ನು ಕಾಡಿನ ರೀತಿಯಲ್ಲಿ ಅಲಂಕರಿಸಿ, ರಾಯನ್​ ಬರ್ತ್​ಡೇ ಸೆಲಬ್ರೇಷನ್​ ಮಾಡಲಾಗಿತ್ತು. ಮಗ ಜನಿಸಿದ ನಂತರ ಮೇಘನಾ ಬಾಳಿನಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅವರು ಮತ್ತೆ ಮೊದಲಿನ ಖುಷಿಗೆ ಮರಳಿದ್ದಾರೆ. ಈ ಎಲ್ಲಾ ಕಾರಣಕ್ಕೆ ಮಗನ ಮೇಲೆ ಮೇಘನಾಗೆ ಅಪಾರ ಪ್ರೀತಿ. ಹೀಗಾಗಿ, ಮಗನ ಫೋಟೋಗಳನ್ನು ಅವರು ಪೋಸ್ಟ್​ ಮಾಡುತ್ತಲೇ ಇರುತ್ತಾರೆ.

ಈಗ ರಾಯನ್ ಅವರ ವಿವಿಧ ಫೋಟೋವನ್ನು ಮೇಘನಾ ಪೋಸ್ಟ್ ಮಾಡಿದ್ದಾರೆ. ‘ರಾಯನ್​ನ ವಿವಿಧ ಫೋಟೋಗಳು ನಿಮಗೆ ದೀಪಾವಳಿಯ ಶುಭಾಶಯ ಹೇಳುತ್ತಿವೆ. ಈ ಚಿಕ್ಕ ಹುಡುಗ ನನ್ನ ಜೀವನದ ಅದ್ಭುತ. ಈ ಹಬ್ಬವು ಎಲ್ಲರ ಬಾಳಲ್ಲಿ ಬೆಳಕು ಹಾಗೂ ಸಂತೋಷ ತರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Meghana Raj Sarja (@megsraj)

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಅ.22ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಮೊದಲನೇ ವರ್ಷದ ಹುಟ್ಟುಹಬ್ಬವನ್ನು ಮೇಘನಾ ರಾಜ್​ ಮನೆಯಲ್ಲಿ ಆಚರಿಸಲಾಗಿತ್ತು. ಕಾಡಿನ ಥೀಮ್​ನಲ್ಲಿ ಅದ್ದೂರಿಯಾಗಿ ಡೆಕೊರೇಷನ್​ ಮಾಡಲಾಗಿತ್ತು. ‘ರಾಯನ್​ ಕಿಂಗ್​ಡಮ್​ಗೆ ಸ್ವಾಗತ’ ಎಂಬ ಫಲಕ ಗಮನ ಸೆಳೆದಿತ್ತು.  ಚಿತ್ರರಂಗದ ಸ್ನೇಹಿತರು ಮತ್ತು ಕುಟುಂಬದವರಿಗೆ ಆಹ್ವಾನ ನೀಡಲಾಗಿತ್ತು. ಜ್ಯೂ. ಚಿರುಗೆ ಎಲ್ಲರೂ ಶುಭ ಕೋರಿದ್ದರು.

ಇದನ್ನೂ ಓದಿ: Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

Published On - 3:17 pm, Thu, 4 November 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ