AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​-ಚಿರು ಸರ್ಜಾ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ರಾಯನ್​ ರಾಜ್​ ಸರ್ಜಾ

ರಾಯನ್​ ರಾಜ್​ ಸರ್ಜಾಗೆ​ ಇತ್ತೀಚೆಗಷ್ಟೇ ಒಂದು ವರ್ಷ ತುಂಬಿತ್ತು. ಮೇಘನಾ ರಾಜ್​ ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು. ಕಾಡಿನ ರೀತಿಯಲ್ಲಿ ಅಲಂಕರಿಸಿ, ರಾಯನ್​ ಬರ್ತ್​ಡೇ ಸೆಲಬ್ರೇಷನ್​ ಮಾಡಲಾಗಿತ್ತು

ಮೇಘನಾ ರಾಜ್​-ಚಿರು ಸರ್ಜಾ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ರಾಯನ್​ ರಾಜ್​ ಸರ್ಜಾ
ಮೇಘನಾ ರಾಜ್​ ಮತ್ತು ರಾಯನ್
TV9 Web
| Edited By: |

Updated on:Nov 04, 2021 | 3:43 PM

Share

ಬೆಳಕಿನ ಹಬ್ಬ ದೀಪಾವಳಿ ಬಂದಿದೆ. 2020ರಂತೆ 2021ರಲ್ಲೂ ಸಾಕಷ್ಟು ಕಹಿಘಟನೆಗಳು ನಡೆದವು. ಮುಂದಿನ ದಿನಗಳಲ್ಲಿ ಇದು ಮರುಕಳಿಸದಿರಲಿ ಎಂದು ಈ ಹಬ್ಬದಂದು ಎಲ್ಲರೂ ಬೇಡಿಕೊಳ್ಳುತ್ತಿದ್ದಾರೆ. ಮನೆಯಲ್ಲಿ ದೀಪ ಹಚ್ಚುವ ಮೂಲಕ ಹಬ್ಬವನ್ನು ಜೋರಾಗಿ ಆಚರಿಸಲಾಗುತ್ತಿದೆ. ನಟ-ನಟಿಯರು ಕೂಡ ಹಬ್ಬದ ಆಚರಣೆಯ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ. ಈಗ ನಟಿ ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾ ಕೂಡ ಚಿರು-ಮೇಘನಾ ಅಭಿಮಾನಿಗಳಿಗೆ ವಿಶ್​ ಮಾಡಿದ್ದಾನೆ.

ರಾಯನ್​ ರಾಜ್​ ಸರ್ಜಾಗೆ​ ಇತ್ತೀಚೆಗಷ್ಟೇ ಒಂದು ವರ್ಷ ತುಂಬಿತ್ತು. ಮೇಘನಾ ರಾಜ್​ ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು. ಮನೆಯನ್ನು ಕಾಡಿನ ರೀತಿಯಲ್ಲಿ ಅಲಂಕರಿಸಿ, ರಾಯನ್​ ಬರ್ತ್​ಡೇ ಸೆಲಬ್ರೇಷನ್​ ಮಾಡಲಾಗಿತ್ತು. ಮಗ ಜನಿಸಿದ ನಂತರ ಮೇಘನಾ ಬಾಳಿನಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅವರು ಮತ್ತೆ ಮೊದಲಿನ ಖುಷಿಗೆ ಮರಳಿದ್ದಾರೆ. ಈ ಎಲ್ಲಾ ಕಾರಣಕ್ಕೆ ಮಗನ ಮೇಲೆ ಮೇಘನಾಗೆ ಅಪಾರ ಪ್ರೀತಿ. ಹೀಗಾಗಿ, ಮಗನ ಫೋಟೋಗಳನ್ನು ಅವರು ಪೋಸ್ಟ್​ ಮಾಡುತ್ತಲೇ ಇರುತ್ತಾರೆ.

ಈಗ ರಾಯನ್ ಅವರ ವಿವಿಧ ಫೋಟೋವನ್ನು ಮೇಘನಾ ಪೋಸ್ಟ್ ಮಾಡಿದ್ದಾರೆ. ‘ರಾಯನ್​ನ ವಿವಿಧ ಫೋಟೋಗಳು ನಿಮಗೆ ದೀಪಾವಳಿಯ ಶುಭಾಶಯ ಹೇಳುತ್ತಿವೆ. ಈ ಚಿಕ್ಕ ಹುಡುಗ ನನ್ನ ಜೀವನದ ಅದ್ಭುತ. ಈ ಹಬ್ಬವು ಎಲ್ಲರ ಬಾಳಲ್ಲಿ ಬೆಳಕು ಹಾಗೂ ಸಂತೋಷ ತರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Meghana Raj Sarja (@megsraj)

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಅ.22ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಮೊದಲನೇ ವರ್ಷದ ಹುಟ್ಟುಹಬ್ಬವನ್ನು ಮೇಘನಾ ರಾಜ್​ ಮನೆಯಲ್ಲಿ ಆಚರಿಸಲಾಗಿತ್ತು. ಕಾಡಿನ ಥೀಮ್​ನಲ್ಲಿ ಅದ್ದೂರಿಯಾಗಿ ಡೆಕೊರೇಷನ್​ ಮಾಡಲಾಗಿತ್ತು. ‘ರಾಯನ್​ ಕಿಂಗ್​ಡಮ್​ಗೆ ಸ್ವಾಗತ’ ಎಂಬ ಫಲಕ ಗಮನ ಸೆಳೆದಿತ್ತು.  ಚಿತ್ರರಂಗದ ಸ್ನೇಹಿತರು ಮತ್ತು ಕುಟುಂಬದವರಿಗೆ ಆಹ್ವಾನ ನೀಡಲಾಗಿತ್ತು. ಜ್ಯೂ. ಚಿರುಗೆ ಎಲ್ಲರೂ ಶುಭ ಕೋರಿದ್ದರು.

ಇದನ್ನೂ ಓದಿ: Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

Published On - 3:17 pm, Thu, 4 November 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್