AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ಶೂಟಿಂಗ್ ಪೂರ್ಣ; ಚುನಾವಣೆ ಬಳಿಕ ಸಿನಿಮಾ ರಿಲೀಸ್

ಕೆಲವು ವರ್ಷಗಳಿಂದ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

Meghana Raj: ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ಶೂಟಿಂಗ್ ಪೂರ್ಣ; ಚುನಾವಣೆ ಬಳಿಕ ಸಿನಿಮಾ ರಿಲೀಸ್
ಮೇಘನಾ ರಾಜ್ ಆ್ಯಂಡ್ ಟೀಂ
ರಾಜೇಶ್ ದುಗ್ಗುಮನೆ
|

Updated on:Apr 15, 2023 | 11:40 AM

Share

ನಟಿ ಮೇಘನಾ ರಾಜ್ (Meghana Raj) ಬದುಕಲ್ಲಿ ಅನೇಕ ಏರುಪೇರುಗಳು ಉಂಟಾದವು. ಪತಿ ಚಿರಂಜೀವಿ ಸರ್ಜಾ ನಿಧನ ಹೊಂದಿದರು. ಇದರಿಂದ ಅವರು ಕಣ್ಣೀರಲ್ಲಿ ಕೈ ತೊಳೆಯುವಂತಾಯಿತು. ಇದಾದ ಬಳಿಕ ರಾಯನ್ ರಾಜ್ ಸರ್ಜಾ ಹುಟ್ಟಿದ. ಅವರ ಬಾಳಲ್ಲಿ ಆಗ ಖುಷಿಯ ದಿನಗಳು ಆರಂಭ ಆದವು. ಇಷ್ಟು ದಿನ ಅವರು ಮಗನ ಆರೈಕೆಯಲ್ಲಿ ಬ್ಯುಸಿ ಇದ್ದರು. ಈಗ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ‘ತತ್ಸಮ ತದ್ಭವ’ (Tatsama Tadbhava Movie) ಚಿತ್ರದಲ್ಲಿ ಅವರು ನಟಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಕೆಲವು ವರ್ಷಗಳಿಂದ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ. ‘ತತ್ಸಮ ತದ್ಭವ’ ಸಿನಿಮಾ ಮೂಲಕ ಅವರು ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದೆ.

‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ಅವರು ನನಗಾಗಿ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೋ, ಇಲ್ಲವೋ ಗೊತ್ತಿಲ್ಲ’ ಎಂದು ಮೇಘನರಾಜ್ ಸಂತಸ ವ್ಯಕ್ತಪಡಿಸಿದರು.

ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಕೂಡ ನಟಿಸಿದ್ದಾರೆ. ‘ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಸಿನಿಮಾದಲ್ಲಿ ಪ್ರಮುಖ ಪಾತ್ರ ಬರುತ್ತದೆ. ಈ ಪಾತ್ರವನ್ನು ನಾನು ಮಾಡುತ್ತಿದ್ದೇನೆ. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿ ಇದೆ’ ಎಂದು ಪ್ರಜ್ವಲ್ ದೇವರಾಜ್ ಹೇಳಿದ್ದಾರೆ.

ಇದನ್ನೂ ಓದಿ:  ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ

ಈ ಸಿನಿಮಾ ಕ್ರೈಮ್ ಥ್ರಿಲ್ಲರ್ ಕಥೆ ಹೊಂದಿದೆ. ‘ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ’ ಎಂಬುದು ನಿರ್ದೇಶಕ ವಿಶಾಲ್ ಆತ್ರೇಯ ಅವರ ಮಾತು. ಸದ್ಯ ಚುನಾವಣೆಯ ಕಾವು ಜೋರಾಗಿದೆ. ಚುನಾವಣೆ, ಮತ ಎಣಿಕೆ ಮುಗಿದ ಬಳಿಕ ಸಿನಿಮಾ ಬಿಡುಗಡೆ ಮಾಡುವ ಆಲೋಚನೆ ನಿರ್ಮಾಪಕ ಪನ್ನಗ ಭರಣ ಅವರದ್ದು. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಇದೆ. ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:38 am, Sat, 15 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?