AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ‘ನನ್ನ ಪತಿ ಕಾಣೆಯಾಗಿದ್ದಾರೆ’; ‘ತತ್ಸಮ ತದ್ಭವ’ ಟೀಸರ್​ನಲ್ಲಿ ಮೇಘನಾ ರಾಜ್ ಸಸ್ಪೆನ್ಸ್ ಕಹಾನಿ

ಚಿತ್ರರಂಗದ ಕೆಲಸಗಳಲ್ಲಿ ಮೇಘನಾ ರಾಜ್ ತೊಡಗಿಕೊಂಡಿದ್ದಾರೆ. ಹೀಗಿರುವಾಗಲೇ ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿದೆ.

Meghana Raj: ‘ನನ್ನ ಪತಿ ಕಾಣೆಯಾಗಿದ್ದಾರೆ’; ‘ತತ್ಸಮ ತದ್ಭವ’ ಟೀಸರ್​ನಲ್ಲಿ ಮೇಘನಾ ರಾಜ್ ಸಸ್ಪೆನ್ಸ್ ಕಹಾನಿ
ಮೇಘನಾ ರಾಜ್
ರಾಜೇಶ್ ದುಗ್ಗುಮನೆ
|

Updated on:Jul 17, 2023 | 10:52 AM

Share

ಮೇಘನಾ ರಾಜ್ (Meghana Raj) ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ (Tatsama Tadbhava Movie) ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಟೀಸರ್ ಮೂಡಿ ಬಂದಿದೆ. ಇಂದು (ಜುಲೈ 17) ಬೆಳಿಗ್ಗೆ 10:31ಕ್ಕೆ ಟೀಸರ್ ರಿಲೀಸ್ ಆಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಈ ಟೀಸರ್ ಇದೆ. ಮೇಘನಾ ರಾಜ್ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ಆಗಸ್ಟ್​ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಟೀಸರ್​​ನಲ್ಲಿ ಮಾಹಿತಿ ನೀಡಲಾಗಿದೆ.

ಇದೊಂದು ಮಿಸ್ಸಿಂಗ್ ಕೇಸ್​ನ ಕಥೆ. ‘ನನ್ನ ಹೆಸರು ಆರಿಕಾ. ನನ್ನ ಪತಿ ಕಾಣೆ ಆಗಿದ್ದಾರೆ’ ಎಂದು ಮೇಘನಾ ರಾಜ್ ಬಂದು ದೂರು ನೀಡುತ್ತಾರೆ. ಈ ಕೇಸ್​ನ ಕೈಗೆತ್ತಿಕೊಳ್ಳೋದು ಪ್ರಜ್ವಲ್ ದೇವರಾಜ್​. ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್​ನ ಉದ್ದಕ್ಕೂ ಸಸ್ಪೆನ್ಸ್ ಅಂಶ ಇದೆ. ಕಾಣೆಯಾದವರ ಹುಡುಕುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದರ ಜೊತೆಗೆ ಒಂದಷ್ಟು ಥ್ರಿಲ್ಲಿಂಗ್ ಅಂಶ ಸೇರಿಸಲಾಗಿದೆ.

ನಟಿ ಮೇಘನಾ ರಾಜ್ ಬದುಕಲ್ಲಿ ಇತ್ತೀಚೆಗೆ ಹಲವು ಏರುಪೇರುಗಳು ಉಂಟಾದವು. ಚಿರಂಜೀವಿ ಮೃತಪಟ್ಟ ಬಳಿಕ ಅವರು ಸಾಕಷ್ಟು ದುಃಖ ನುಂಗಿದರು. ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಅವರ ಬದುಕಲ್ಲಿ ಮತ್ತೆ ಖುಷಿ ಮೂಡಿದೆ. ಈಗ ಮೇಘನಾ ರಾಜ್ ಅವರು ಸಂತೋಷದಿಂದ ಇದ್ದಾರೆ. ಚಿತ್ರರಂಗದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಹೀಗಿರುವಾಗಲೇ ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿದೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ವಿಶಾಲ್ ಆತ್ರೇಯ ಅವರು ‘ತತ್ಸಮ ತದ್ಭವ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಿದ್ದಾರೆ. ಸ್ಫೂರ್ತಿ ಅನಿಲ್ ಅವರು ಪನ್ನಗ ಭರಣ ಜೊತೆ ನಿರ್ಮಾಣದಲ್ಲಿ ಸೇರಿಕೊಂಡಿದ್ದಾರೆ.. ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಇದೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:46 am, Mon, 17 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್