AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ

Meghana Raj YouTube Channel: ಈ ಡಿಜಿಟಲ್​ ಯುಗದಲ್ಲಿ ಬಹುತೇಕ ಸೆಲೆಬ್ರಿಟಿಗಳು ತಮ್ಮ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಅಂಥವರ ಸಾಲಿಗೆ ಈಗ ಮೇಘನಾ ರಾಜ್​ ಕೂಡ ಸೇರ್ಪಡೆ ಆಗಿದ್ದಾರೆ.

Meghana Raj: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ
ಮೇಘನಾ ರಾಜ್ ಸರ್ಜಾ, ರಾಯನ್​
TV9 Web
| Edited By: |

Updated on:Dec 25, 2022 | 7:03 PM

Share

ನಟಿ ಮೇಘನಾ ರಾಜ್​ ಸರ್ಜಾ (Meghana Raj) ಅವರು ಹೊಸ ಯೂಟ್ಯೂಬ್​ ಚಾನೆಲ್​ ಶುರು ಮಾಡಿದ್ದಾರೆ. ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡುವುದಾಗಿ ಅವರು ಡಿ.24ರಂದು ಹೇಳಿದ್ದರು. ಅದೇನು ಎಂದು ಕಾದಿದ್ದ ಅಭಿಮಾನಿಗಳಿಗೆಲ್ಲ ಇಂದು (ಡಿ.25) ಉತ್ತರ ಸಿಕ್ಕಿದೆ. ಇದೇ ಮೊದಲ ಬಾರಿಗೆ ಮೇಘನಾ ರಾಜ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ (Meghana Raj YouTube Channel) ಆರಂಭಿಸಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ. ಮೊದಲ ವಿಡಿಯೋದಲ್ಲಿ ಅವರು ಈ ಬಗ್ಗೆ ಅನೌನ್ಸ್​ ಮಾಡಿದ್ದಾರೆ. ಹೊಸ ಕಾರ್ಯಕ್ಕೆ ಕೈ ಹಾಕಿರುವ ಅವರಿಗೆ ಫ್ಯಾನ್ಸ್​ ಅಭಿನಂದನೆ ತಿಳಿಸುತ್ತಿದ್ದಾರೆ. ಎಲ್ಲರಿಗೂ ಕ್ರಿಸ್​ಮಸ್​ (Christmas) ಹಬ್ಬದ ಶುಭ ಕೋರಿದ್ದಾರೆ ಮೇಘನಾ ರಾಜ್​.

ಸೋಶಿಯಲ್​ ಮೀಡಿಯಾದಲ್ಲಿ ಮೇಘನಾ ರಾಜ್​ ಸಕ್ರಿಯರಾಗಿದ್ದಾರೆ. ‘ನೀವು ಯಾವಾಗ ನಿಮ್ಮ ಯೂಟ್ಯೂಬ್​ ಚಾನೆಲ್​ ಆರಂಭಿಸುತ್ತೀರಿ’ ಎಂದು ಅಭಿಮಾನಿಗಳು ಆಗಾಗ ಪ್ರಶ್ನೆ ಕೇಳುತ್ತಿದ್ದರು. ಹಾಗಾಗಿ ಕ್ರಿಮ್​ಮಸ್​ ಹಬ್ಬದ ಶುಭ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಯೂಟ್ಯೂಬ್​ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಪುತ್ರ ರಾಯನ್​ ರಾಜ್​ ಸರ್ಜಾ, ತಂದೆ-ತಾಯಿಗಳಾದ ಪ್ರಮೀಳಾ ಜೋಶಾಯ್​ ಹಾಗೂ ಸುಂದರ್​ ರಾಜ್​ ಜೊತೆ ಇರುವ ವಿಡಿಯೋ ತುಣುಕನ್ನು ಮೇಘನಾ ರಾಜ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

ಇದನ್ನೂ ಓದಿ: ಮೇಘನಾ ರಾಜ್ ಗೆಳತಿ, ನಟಿ ನಜ್ರಿಯಾ ನಜಿಮ್​​ಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ಕ್ಯೂಟ್ ಫೋಟೋ

ಈ ಡಿಜಿಟಲ್​ ಯುಗದಲ್ಲಿ ಬಹುತೇಕ ಸೆಲೆಬ್ರಿಟಿಗಳು ತಮ್ಮ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ತಮ್ಮದೇ ಸಿನಿಮಾಗಳ ಬಗ್ಗೆ ಪ್ರಚಾರ ಮಾಡಲು, ಹೊಸ ವಿಚಾರಗಳನ್ನು ತಿಳಿಸಲು, ದಿನಚರಿ ಬಗ್ಗೆ ಅಪ್​ಡೇಟ್​ ನೀಡಲು ಈ ಚಾನೆಲ್​ ಬಳಕೆ ಆಗುತ್ತದೆ. ಮೇಘನಾ ರಾಜ್​ ಕೂಡ ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Meghana Raj: ಫಿಲ್ಮ್​ಫೇರ್​ ಸಮಾರಂಭಕ್ಕೆ ರಾಯನ್​ ರಾಜ್​ ಸರ್ಜಾ ಯಾಕೆ ಬಂದಿಲ್ಲ? ಕಾರಣ ತಿಳಿಸಿದ ಮೇಘನಾ ರಾಜ್​

ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಮೇಘನಾ ರಾಜ್​ ಅವರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು. ರಾಯನ್​ ಜನಿಸಿದ ನಂತರ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ನೋವನ್ನೆಲ್ಲ ಬದಿಗಿಟ್ಟು ಮತ್ತೆ ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದರು. ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದಾರೆ. ಮೊದಲಿನಂತೆಯೇ ನಟನೆಯಲ್ಲಿ ಮೇಘನಾ ರಾಜ್​ ಬ್ಯುಸಿ ಆಗಿದ್ದಾರೆ.

View this post on Instagram

A post shared by Meghana Raj Sarja (@megsraj)

ಪನ್ನಗ ಭರಣ ನಿರ್ಮಾಣ ಮಾಡುತ್ತಿರುವ, ವಿಶಾಲ್​ ನಿರ್ದೇಶನದ ಹೊಸ ಸಿನಿಮಾದಲ್ಲಿ ಮೇಘನಾ ರಾಜ್​ ನಟಿಸುತ್ತಿದ್ದಾರೆ. ಆ ಚಿತ್ರದಲ್ಲಿ ಪ್ರಜ್ವಲ್​ ದೇವರಾಜ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅಭಿಮಾನಿಗಳು ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಟನೆಯ ಜೊತೆಗೆ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲೂ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈಗ ಯೂಟ್ಯೂಬ್​ ಚಾನೆಲ್​ನ ಹೊಸ ಪ್ರಯತ್ನಕ್ಕೂ ಅವರು ಕೈ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:03 pm, Sun, 25 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್