AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ

Meghana Raj YouTube Channel: ಈ ಡಿಜಿಟಲ್​ ಯುಗದಲ್ಲಿ ಬಹುತೇಕ ಸೆಲೆಬ್ರಿಟಿಗಳು ತಮ್ಮ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಅಂಥವರ ಸಾಲಿಗೆ ಈಗ ಮೇಘನಾ ರಾಜ್​ ಕೂಡ ಸೇರ್ಪಡೆ ಆಗಿದ್ದಾರೆ.

Meghana Raj: ಕ್ರಿಸ್​ಮಸ್​ ಪ್ರಯುಕ್ತ ಮೇಘನಾ ರಾಜ್​ ಸರ್ಪ್ರೈಸ್​; ಯೂಟ್ಯೂಬ್​ ಚಾನೆಲ್​ ಆರಂಭಿಸಿದ ನಟಿ
ಮೇಘನಾ ರಾಜ್ ಸರ್ಜಾ, ರಾಯನ್​
TV9 Web
| Edited By: |

Updated on:Dec 25, 2022 | 7:03 PM

Share

ನಟಿ ಮೇಘನಾ ರಾಜ್​ ಸರ್ಜಾ (Meghana Raj) ಅವರು ಹೊಸ ಯೂಟ್ಯೂಬ್​ ಚಾನೆಲ್​ ಶುರು ಮಾಡಿದ್ದಾರೆ. ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡುವುದಾಗಿ ಅವರು ಡಿ.24ರಂದು ಹೇಳಿದ್ದರು. ಅದೇನು ಎಂದು ಕಾದಿದ್ದ ಅಭಿಮಾನಿಗಳಿಗೆಲ್ಲ ಇಂದು (ಡಿ.25) ಉತ್ತರ ಸಿಕ್ಕಿದೆ. ಇದೇ ಮೊದಲ ಬಾರಿಗೆ ಮೇಘನಾ ರಾಜ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ (Meghana Raj YouTube Channel) ಆರಂಭಿಸಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ. ಮೊದಲ ವಿಡಿಯೋದಲ್ಲಿ ಅವರು ಈ ಬಗ್ಗೆ ಅನೌನ್ಸ್​ ಮಾಡಿದ್ದಾರೆ. ಹೊಸ ಕಾರ್ಯಕ್ಕೆ ಕೈ ಹಾಕಿರುವ ಅವರಿಗೆ ಫ್ಯಾನ್ಸ್​ ಅಭಿನಂದನೆ ತಿಳಿಸುತ್ತಿದ್ದಾರೆ. ಎಲ್ಲರಿಗೂ ಕ್ರಿಸ್​ಮಸ್​ (Christmas) ಹಬ್ಬದ ಶುಭ ಕೋರಿದ್ದಾರೆ ಮೇಘನಾ ರಾಜ್​.

ಸೋಶಿಯಲ್​ ಮೀಡಿಯಾದಲ್ಲಿ ಮೇಘನಾ ರಾಜ್​ ಸಕ್ರಿಯರಾಗಿದ್ದಾರೆ. ‘ನೀವು ಯಾವಾಗ ನಿಮ್ಮ ಯೂಟ್ಯೂಬ್​ ಚಾನೆಲ್​ ಆರಂಭಿಸುತ್ತೀರಿ’ ಎಂದು ಅಭಿಮಾನಿಗಳು ಆಗಾಗ ಪ್ರಶ್ನೆ ಕೇಳುತ್ತಿದ್ದರು. ಹಾಗಾಗಿ ಕ್ರಿಮ್​ಮಸ್​ ಹಬ್ಬದ ಶುಭ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಯೂಟ್ಯೂಬ್​ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಪುತ್ರ ರಾಯನ್​ ರಾಜ್​ ಸರ್ಜಾ, ತಂದೆ-ತಾಯಿಗಳಾದ ಪ್ರಮೀಳಾ ಜೋಶಾಯ್​ ಹಾಗೂ ಸುಂದರ್​ ರಾಜ್​ ಜೊತೆ ಇರುವ ವಿಡಿಯೋ ತುಣುಕನ್ನು ಮೇಘನಾ ರಾಜ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

ಇದನ್ನೂ ಓದಿ: ಮೇಘನಾ ರಾಜ್ ಗೆಳತಿ, ನಟಿ ನಜ್ರಿಯಾ ನಜಿಮ್​​ಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ಕ್ಯೂಟ್ ಫೋಟೋ

ಈ ಡಿಜಿಟಲ್​ ಯುಗದಲ್ಲಿ ಬಹುತೇಕ ಸೆಲೆಬ್ರಿಟಿಗಳು ತಮ್ಮ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ತಮ್ಮದೇ ಸಿನಿಮಾಗಳ ಬಗ್ಗೆ ಪ್ರಚಾರ ಮಾಡಲು, ಹೊಸ ವಿಚಾರಗಳನ್ನು ತಿಳಿಸಲು, ದಿನಚರಿ ಬಗ್ಗೆ ಅಪ್​ಡೇಟ್​ ನೀಡಲು ಈ ಚಾನೆಲ್​ ಬಳಕೆ ಆಗುತ್ತದೆ. ಮೇಘನಾ ರಾಜ್​ ಕೂಡ ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Meghana Raj: ಫಿಲ್ಮ್​ಫೇರ್​ ಸಮಾರಂಭಕ್ಕೆ ರಾಯನ್​ ರಾಜ್​ ಸರ್ಜಾ ಯಾಕೆ ಬಂದಿಲ್ಲ? ಕಾರಣ ತಿಳಿಸಿದ ಮೇಘನಾ ರಾಜ್​

ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಮೇಘನಾ ರಾಜ್​ ಅವರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು. ರಾಯನ್​ ಜನಿಸಿದ ನಂತರ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ನೋವನ್ನೆಲ್ಲ ಬದಿಗಿಟ್ಟು ಮತ್ತೆ ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದರು. ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದಾರೆ. ಮೊದಲಿನಂತೆಯೇ ನಟನೆಯಲ್ಲಿ ಮೇಘನಾ ರಾಜ್​ ಬ್ಯುಸಿ ಆಗಿದ್ದಾರೆ.

View this post on Instagram

A post shared by Meghana Raj Sarja (@megsraj)

ಪನ್ನಗ ಭರಣ ನಿರ್ಮಾಣ ಮಾಡುತ್ತಿರುವ, ವಿಶಾಲ್​ ನಿರ್ದೇಶನದ ಹೊಸ ಸಿನಿಮಾದಲ್ಲಿ ಮೇಘನಾ ರಾಜ್​ ನಟಿಸುತ್ತಿದ್ದಾರೆ. ಆ ಚಿತ್ರದಲ್ಲಿ ಪ್ರಜ್ವಲ್​ ದೇವರಾಜ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅಭಿಮಾನಿಗಳು ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಟನೆಯ ಜೊತೆಗೆ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲೂ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈಗ ಯೂಟ್ಯೂಬ್​ ಚಾನೆಲ್​ನ ಹೊಸ ಪ್ರಯತ್ನಕ್ಕೂ ಅವರು ಕೈ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:03 pm, Sun, 25 December 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್