AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ
ಮೇಘನಾ ರಾಜ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 17, 2021 | 3:47 PM

Share

ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಮಾತನಾಡುವಾಗ ಅವರು ತಮಗೆ ಆಗುತ್ತಿರುವ ಭಯದ ಬಗ್ಗೆ ಹೇಳಿಕೊಂಡಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್​ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ. ಮೇಘನಾ ಮತ್ತೆ ಕ್ಯಾಮೆರಾ ಎದುರಿಸುತ್ತಿದ್ದು, ಒಂದು ಸಣ್ಣ ಭಯ ಕಾಡುತ್ತಿದೆ.

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು. ಆ ನಂತರ ರಾಯನ್​ ಜನಿಸಿದ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆದರು. ಈಗ ಒಂದು ಸಣ್ಣ ಗ್ಯಾಪ್​ನ ನಂತರ ಮೇಘನಾ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಸಾಮಾನ್ಯವಾಗಿ ಹೊಸದಾಗಿ ಕ್ಯಾಮೆರಾ ಎದುರಿಸಬೇಕಾದರೆ ಭಯ ಉಂಟಾಗುತ್ತದೆ. ಅದೇ ರೀತಿಯ ತಳಮಳ ಅವರಿಗೆ ಆಗುತ್ತಿದೆ.

‘ಈ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡುತ್ತಿದ್ದೇನೆ. ಆ ಖುಷಿ ನನಗಿದೆ. ಆದರೆ, ಮೊದಲ ಬಾರಿಗೆ ಕ್ಯಾಮೆರಾ ಎದುರಿಸುವಾಗ ಆಗುತ್ತಿದ್ದ ಭಯವೇ ಈಗಲೂ ಆಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾದಲ್ಲಿ ನಟಿಸುತ್ತಿರುವುದೇ ಒಂದು ಜವಾಬ್ದಾರಿ’ ಎಂದರು ಮೇಘನಾ.

ಇದನ್ನೂ ಓದಿ:Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ 

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ