AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ
ಮೇಘನಾ ರಾಜ್​
TV9 Web
| Edited By: |

Updated on: Oct 17, 2021 | 3:47 PM

Share

ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಮಾತನಾಡುವಾಗ ಅವರು ತಮಗೆ ಆಗುತ್ತಿರುವ ಭಯದ ಬಗ್ಗೆ ಹೇಳಿಕೊಂಡಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್​ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ. ಮೇಘನಾ ಮತ್ತೆ ಕ್ಯಾಮೆರಾ ಎದುರಿಸುತ್ತಿದ್ದು, ಒಂದು ಸಣ್ಣ ಭಯ ಕಾಡುತ್ತಿದೆ.

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು. ಆ ನಂತರ ರಾಯನ್​ ಜನಿಸಿದ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆದರು. ಈಗ ಒಂದು ಸಣ್ಣ ಗ್ಯಾಪ್​ನ ನಂತರ ಮೇಘನಾ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಸಾಮಾನ್ಯವಾಗಿ ಹೊಸದಾಗಿ ಕ್ಯಾಮೆರಾ ಎದುರಿಸಬೇಕಾದರೆ ಭಯ ಉಂಟಾಗುತ್ತದೆ. ಅದೇ ರೀತಿಯ ತಳಮಳ ಅವರಿಗೆ ಆಗುತ್ತಿದೆ.

‘ಈ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡುತ್ತಿದ್ದೇನೆ. ಆ ಖುಷಿ ನನಗಿದೆ. ಆದರೆ, ಮೊದಲ ಬಾರಿಗೆ ಕ್ಯಾಮೆರಾ ಎದುರಿಸುವಾಗ ಆಗುತ್ತಿದ್ದ ಭಯವೇ ಈಗಲೂ ಆಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾದಲ್ಲಿ ನಟಿಸುತ್ತಿರುವುದೇ ಒಂದು ಜವಾಬ್ದಾರಿ’ ಎಂದರು ಮೇಘನಾ.

ಇದನ್ನೂ ಓದಿ:Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ 

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?