AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ
ಮೇಘನಾ ರಾಜ್​
TV9 Web
| Edited By: |

Updated on: Oct 17, 2021 | 3:47 PM

Share

ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಮಾತನಾಡುವಾಗ ಅವರು ತಮಗೆ ಆಗುತ್ತಿರುವ ಭಯದ ಬಗ್ಗೆ ಹೇಳಿಕೊಂಡಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್​ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ. ಮೇಘನಾ ಮತ್ತೆ ಕ್ಯಾಮೆರಾ ಎದುರಿಸುತ್ತಿದ್ದು, ಒಂದು ಸಣ್ಣ ಭಯ ಕಾಡುತ್ತಿದೆ.

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು. ಆ ನಂತರ ರಾಯನ್​ ಜನಿಸಿದ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆದರು. ಈಗ ಒಂದು ಸಣ್ಣ ಗ್ಯಾಪ್​ನ ನಂತರ ಮೇಘನಾ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಸಾಮಾನ್ಯವಾಗಿ ಹೊಸದಾಗಿ ಕ್ಯಾಮೆರಾ ಎದುರಿಸಬೇಕಾದರೆ ಭಯ ಉಂಟಾಗುತ್ತದೆ. ಅದೇ ರೀತಿಯ ತಳಮಳ ಅವರಿಗೆ ಆಗುತ್ತಿದೆ.

‘ಈ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡುತ್ತಿದ್ದೇನೆ. ಆ ಖುಷಿ ನನಗಿದೆ. ಆದರೆ, ಮೊದಲ ಬಾರಿಗೆ ಕ್ಯಾಮೆರಾ ಎದುರಿಸುವಾಗ ಆಗುತ್ತಿದ್ದ ಭಯವೇ ಈಗಲೂ ಆಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾದಲ್ಲಿ ನಟಿಸುತ್ತಿರುವುದೇ ಒಂದು ಜವಾಬ್ದಾರಿ’ ಎಂದರು ಮೇಘನಾ.

ಇದನ್ನೂ ಓದಿ:Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ 

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು