AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಚಿತ್ರದ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು.

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್
ಮೇಘನಾ ರಾಜ್​
TV9 Web
| Edited By: |

Updated on:Oct 17, 2021 | 1:50 PM

Share

ಚಿರಂಜೀವಿ ಸರ್ಜಾ ಮೃತಪಟ್ಟು ವರ್ಷದ ಮೇಲಾಗಿದೆ. ಅವರ ಜತೆ ಕಳೆದ ನೆನಪು ಕುಟುಂಬದವರಿಗೆ ಹಾಗೂ ಅವರ ಗೆಳೆಯರಿಗೆ ಇನ್ನೂ ಮಾಸಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ನಿತ್ಯವೂ ಅವರನ್ನು ನೆನಪು ಮಾಡಿಕೊಳ್ಳುವ ಕಾರ್ಯ ಕುಟುಂಬದವರು ಮಾಡುತ್ತಿದ್ದಾರೆ. ಪತ್ನಿ ಮೇಘನಾ ರಾಜ್​ ಅವರಂತೂ ಚಿರು ಅವರನ್ನು ತುಂಬಾನೇ ನೆನಪು ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮೇಘನಾ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು. ಆ ನಂತರ ರಾಯನ್​ ಜನಿಸಿದ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆದರು. ಈಗ ಒಂದು ಸಣ್ಣ ಗ್ಯಾಪ್​ನ ನಂತರ ಮೇಘನಾ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಚಿರು ಬಗ್ಗೆ ತೆಗೆದುಕೊಂಡು  ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಿರು ಮೃತಪಟ್ಟ ನಂತರದಲ್ಲಿ ಮೇಘನಾ ಸಾಕಷ್ಟು ನೋವು ಅನುಭವಿಸಿದರು. ಈಗ ರಾಯನ್​ ಜನಿಸಿದ್ದು, ಈ ನೋವು ನಿಧಾನವಾಗಿ ಮಾಸುತ್ತಿದೆ. ಹಾಗಿರುವಾಗಲೇ ಅವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ‘ಚಿರು ನಮ್ಮ ಜತೆ ಇಲ್ಲ. ಆದರೆ, ಅಕ್ಟೋಬರ್​ 17ಅನ್ನು ನಾನು ಮತ್ತು ನಮ್ಮ ಫ್ರೆಂಡ್ಸ್​​ ಯಾವಾಗಲೂ ಸೆಲಬ್ರೇಟ್​ ಮಾಡುತ್ತೇವೆ. ಯಾರು ಏನೇ ಹೇಳಲಿ, ಯಾರು ಏನೆ ಮಾತಾಡಲಿ. ನಾವು ಚಿರು ಹುಟ್ಟುಹಬ್ಬ ಆಚರಿಸಿಯೇ ಆಚರಿಸುತ್ತೇವೆ’ ಎಂದು ಹೇಳಿಕೊಳ್ಳುವ ಮೂಲಕ ಆಡಿಕೊಳ್ಳುವವರ ಬಾಯಿ ಮುಚ್ಚಿಸಿದರು.

ಇನ್ನು ಮೇಘನಾ ಮತ್ತು ಚಿರು ಗೆಳೆಯ ಪನ್ನಗ ಭರಣ ಕೂಡ ಈ ಬಗ್ಗೆ ಮಾತನಾಡಿದರು. ‘ನಾವೆಲ್ಲರೂ ಸೇರಿ ಒಂದು ನಿರ್ಧಾರ ತೆಗೆದುಕೊಂಡಿದ್ದೇವೆ. ಚಿರು ನೆನಪಾದಾಗ ನಾವು ಎಂದಿಗೂ ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಅವನ ನೆನಪನ್ನು ಸೆಲೆಬ್ರೇಟ್​ ಮಾಡಬೇಕು ಎಂದುಕೊಂಡಿದ್ದೇವೆ. ಹಾಗೆಯೇ ಮಾಡುತ್ತೇವೆ’ ಎಂದರು ಅವರು. ಈ ಮೂಲಕ ಮೇಘನಾಗೆ ಬೆಂಬಲ ನೀಡಿದರು.

ಇದನ್ನೂ ಓದಿ:Chiranjeevi Sarja Birthday: ಚಿರಂಜೀವಿ ಸರ್ಜಾ ಜನ್ಮದಿನಕ್ಕೆ ರಾಯನ್​ ರಾಜ್​ ಸರ್ಜಾ, ಮೇಘನಾ ರಾಜ್​ ಕಡೆಯಿಂದ ವಿಶೇಷ ಗಿಫ್ಟ್​ 

Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ

Published On - 1:36 pm, Sun, 17 October 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ