AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
TV9 Web
| Edited By: |

Updated on: Jul 21, 2021 | 6:10 PM

Share

2019ರಲ್ಲಿ ತೆರೆಗೆ ಬಂದ ‘ಎಫ್​ 2: ಫನ್​ ಆ್ಯಂಡ್ ಫ್ರಸ್ಟ್ರೇಷನ್’​ ಸಿನಿಮಾ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಮೆಹ್ರೀನ್​ ಪೀರ್ಜಾದಾ ಮಿಂಚಿದ್ದರು. ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಮೆಹ್ರೀನ್ ಹೆಸರು ಮಾಡಿದ್ದಾರೆ. ಈಗ ಅವರು​ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಮೆಹ್ರೀನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ. ಈ ಚಿತ್ರದ ಶೂಟಿಂಗ್​ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೆಹ್ರೀನ್​ ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ರವಿಕುಮಾರ್ ಸನಾ‌ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ. ಆಗಸ್ಟ್​ ಮೊದಲ ವಾರದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭಿಸಲಾಗುತ್ತಿದೆ. 70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿದೆ. ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ.

ಮೆಹ್ರೀನ್​ ಇತ್ತೀಚೆಗೆ ಮದುವೆ ವಿಚಾರದಲ್ಲಿ ಸುದ್ದಿಯಾಗಿದ್ದರು. ​ ಕೆಲ ತಿಂಗಳ ಹಿಂದೆ ರಾಜಕಾರಣಿ ಭವ್ಯ ಭಿಷ್ಣೋಯ್ ಜತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದಿದ್ದರೆ ಮದುವೆಯನ್ನು ಈ ಜೋಡಿ ಮುಂದೂಡಿತ್ತು. ನಂತರ ಮದುವೆಯೇ ಆಗಬಾರದು ಎನ್ನುವ ನಿರ್ಧಾರಕ್ಕೆ ಇಬ್ಬರೂ ಬಂದಿದ್ದರು. ಅಂತೆಯೇ ಇಬ್ಬರೂ ಮದುವೆ ಆಗುತ್ತಿಲ್ಲ ಎಂದು ಘೋಷಿಸಿದ್ದರು.

ಇದನ್ನೂ ಓದಿ: 550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

Shiva Rajkumar Birthday: ಶಿವರಾಜ್​ಕುಮಾರ್​ ಜನ್ಮದಿನ; ಅವರ ಬಗ್ಗೆ ಎಷ್ಟು ಗೊತ್ತಿದೆ ನಿಮಗೆ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?