AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
TV9 Web
| Edited By: |

Updated on: Jul 21, 2021 | 6:10 PM

Share

2019ರಲ್ಲಿ ತೆರೆಗೆ ಬಂದ ‘ಎಫ್​ 2: ಫನ್​ ಆ್ಯಂಡ್ ಫ್ರಸ್ಟ್ರೇಷನ್’​ ಸಿನಿಮಾ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಮೆಹ್ರೀನ್​ ಪೀರ್ಜಾದಾ ಮಿಂಚಿದ್ದರು. ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಮೆಹ್ರೀನ್ ಹೆಸರು ಮಾಡಿದ್ದಾರೆ. ಈಗ ಅವರು​ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಮೆಹ್ರೀನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ. ಈ ಚಿತ್ರದ ಶೂಟಿಂಗ್​ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೆಹ್ರೀನ್​ ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ರವಿಕುಮಾರ್ ಸನಾ‌ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ. ಆಗಸ್ಟ್​ ಮೊದಲ ವಾರದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭಿಸಲಾಗುತ್ತಿದೆ. 70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿದೆ. ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ.

ಮೆಹ್ರೀನ್​ ಇತ್ತೀಚೆಗೆ ಮದುವೆ ವಿಚಾರದಲ್ಲಿ ಸುದ್ದಿಯಾಗಿದ್ದರು. ​ ಕೆಲ ತಿಂಗಳ ಹಿಂದೆ ರಾಜಕಾರಣಿ ಭವ್ಯ ಭಿಷ್ಣೋಯ್ ಜತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದಿದ್ದರೆ ಮದುವೆಯನ್ನು ಈ ಜೋಡಿ ಮುಂದೂಡಿತ್ತು. ನಂತರ ಮದುವೆಯೇ ಆಗಬಾರದು ಎನ್ನುವ ನಿರ್ಧಾರಕ್ಕೆ ಇಬ್ಬರೂ ಬಂದಿದ್ದರು. ಅಂತೆಯೇ ಇಬ್ಬರೂ ಮದುವೆ ಆಗುತ್ತಿಲ್ಲ ಎಂದು ಘೋಷಿಸಿದ್ದರು.

ಇದನ್ನೂ ಓದಿ: 550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

Shiva Rajkumar Birthday: ಶಿವರಾಜ್​ಕುಮಾರ್​ ಜನ್ಮದಿನ; ಅವರ ಬಗ್ಗೆ ಎಷ್ಟು ಗೊತ್ತಿದೆ ನಿಮಗೆ?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ