Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 21, 2021 | 6:10 PM

2019ರಲ್ಲಿ ತೆರೆಗೆ ಬಂದ ‘ಎಫ್​ 2: ಫನ್​ ಆ್ಯಂಡ್ ಫ್ರಸ್ಟ್ರೇಷನ್’​ ಸಿನಿಮಾ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಮೆಹ್ರೀನ್​ ಪೀರ್ಜಾದಾ ಮಿಂಚಿದ್ದರು. ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಮೆಹ್ರೀನ್ ಹೆಸರು ಮಾಡಿದ್ದಾರೆ. ಈಗ ಅವರು​ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಮೆಹ್ರೀನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ರಾಮ್ ದುಲಿಪುಡಿ ನಿರ್ದೇಶನ ಇದೆ. ಈ ಚಿತ್ರದ ಶೂಟಿಂಗ್​ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೆಹ್ರೀನ್​ ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ರವಿಕುಮಾರ್ ಸನಾ‌ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ. ಆಗಸ್ಟ್​ ಮೊದಲ ವಾರದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭಿಸಲಾಗುತ್ತಿದೆ. 70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿದೆ. ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ.

ಮೆಹ್ರೀನ್​ ಇತ್ತೀಚೆಗೆ ಮದುವೆ ವಿಚಾರದಲ್ಲಿ ಸುದ್ದಿಯಾಗಿದ್ದರು. ​ ಕೆಲ ತಿಂಗಳ ಹಿಂದೆ ರಾಜಕಾರಣಿ ಭವ್ಯ ಭಿಷ್ಣೋಯ್ ಜತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದಿದ್ದರೆ ಮದುವೆಯನ್ನು ಈ ಜೋಡಿ ಮುಂದೂಡಿತ್ತು. ನಂತರ ಮದುವೆಯೇ ಆಗಬಾರದು ಎನ್ನುವ ನಿರ್ಧಾರಕ್ಕೆ ಇಬ್ಬರೂ ಬಂದಿದ್ದರು. ಅಂತೆಯೇ ಇಬ್ಬರೂ ಮದುವೆ ಆಗುತ್ತಿಲ್ಲ ಎಂದು ಘೋಷಿಸಿದ್ದರು.

ಇದನ್ನೂ ಓದಿ: 550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

Shiva Rajkumar Birthday: ಶಿವರಾಜ್​ಕುಮಾರ್​ ಜನ್ಮದಿನ; ಅವರ ಬಗ್ಗೆ ಎಷ್ಟು ಗೊತ್ತಿದೆ ನಿಮಗೆ?

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ