AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಎಂಟ್ರಿ ಕೊಡೋ ಸಮಯದಲ್ಲಿ ನಟಿಯ ಮುಖಕ್ಕೆಲ್ಲ ಚುಚ್ಚಿದೆ ಸೂಜಿ; ನೋವು ನೆನೆದು ಬೇಸರಗೊಂಡ ಫ್ಯಾನ್ಸ್

ಅಕ್ಯು ಸ್ಕಿನ್ ಲಿಫ್ಟ್​ ಹೆಸರಿನ ಟ್ರೀಟ್​ಮೆಂಟ್ ಮಾಡಿಸಿಕೊಂಡಿದ್ದಾರೆ ಮೆಹ್ರೀನ್. ಇದಕ್ಕಾಗಿ ಅವರು ವಿದೇಶದಲ್ಲಿ ಖ್ಯಾತ ವೈದ್ಯರೊಬ್ಬರನ್ನು ಭೇಟಿ ಮಾಡಿದ್ದಾರೆ.

ಕನ್ನಡಕ್ಕೆ ಎಂಟ್ರಿ ಕೊಡೋ ಸಮಯದಲ್ಲಿ ನಟಿಯ ಮುಖಕ್ಕೆಲ್ಲ ಚುಚ್ಚಿದೆ ಸೂಜಿ; ನೋವು ನೆನೆದು ಬೇಸರಗೊಂಡ ಫ್ಯಾನ್ಸ್
TV9 Web
| Edited By: |

Updated on: Dec 02, 2022 | 7:23 AM

Share

ನಟ-ನಟಿಯರು ಸೌಂದರ್ಯವೃದ್ಧಿಗೆ ಹೊಸಹೊಸ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಕೆಲವೊಂದು ಯಶಸ್ಸು ಕೊಟ್ಟರೆ ಇನ್ನೂ ಕೆಲವರು ಅಡ್ಡಪರಿಣಾಮ ಬೀರುತ್ತದೆ. ಇದರಿಂದ ಇರುವ ಸೌಂದರ್ಯವೂ ಹಾಳಾಗುತ್ತದೆ. ಈಗ ಮೆಹ್ರೀನ್​ ಫಿರ್ಜಾದ (Mehreen Pirzada) ಅವರು ಒಂದು ರಿಸ್ಕಿ ಥೆರಪಿ ಮಾಡಿಸಿದ್ದಾರೆ. ಮುಖದ ತುಂಬೆಲ್ಲ ಅವರು ಗುಂಡುಸೂಜಿ ಚುಚ್ಚಿಸಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ! ಅವರಿಗೆ ಎಷ್ಟು ನೋವಾಗಿರಬಹುದು ಎಂಬುದನ್ನು ನೆನೆದು ಅಭಿಮಾನಿಗಳು (Fans) ಬೇಸರ ಮಾಡಿಕೊಂಡಿದ್ದಾರೆ.

ಅಕ್ಯು ಸ್ಕಿನ್ ಲಿಫ್ಟ್​ ಹೆಸರಿನ ಟ್ರೀಟ್​ಮೆಂಟ್ ಮಾಡಿಸಿಕೊಂಡಿದ್ದಾರೆ ಮೆಹ್ರೀನ್. ಇದಕ್ಕಾಗಿ ಅವರು ವಿದೇಶದಲ್ಲಿ ಖ್ಯಾತ ವೈದ್ಯರೊಬ್ಬರನ್ನು ಭೇಟಿ ಮಾಡಿದ್ದಾರೆ. ಅಕ್ಯು ಸ್ಕಿನ್ ಲಿಫ್ಟ್​ ಥೆರಪಿ ಮಾಡಿಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೆಹ್ರೀನ್ ಹಂಚಿಕೊಂಡಿದ್ದಾರೆ​. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟಿಯ ಕೆನ್ನೆ, ಹಣೆ ಭಾಗಕ್ಕೆಲ್ಲ ಸೂಜಿಗಳನ್ನು ಚುಚ್ಚಲಾಗಿದೆ. ಇದನ್ನು ನೋಡಿ ಫ್ಯಾನ್ಸ್​ಗೆ ನೋವಾಗಿದೆ.

‘ಅಷ್ಟೊಂದು ಸೂಜಿ ಚುಚ್ಚಿಸಿಕೊಂಡಿದ್ದೀರಿ. ನಿಮಗೆ ನೋವಾಗುವುದಿಲ್ಲವೇ? ಇಂತಹ ರಿಸ್ಕ್​ ಏಕೆ?’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ಒಂದನ್ನು ಮಾಡಲು ಹೋಗಿ ಮತ್ತೊಂದು ಆದೀತು’ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಸದ್ಯ ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯಲ್ಲಿ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ‘ನೀ ಸಿಗೋವರೆಗೂ’ ಚಿತ್ರದ ಲವರ್ ಬಾಯ್ ಶಿವಣ್ಣ ಲುಕ್ ರಿಲೀಸ್; ಹ್ಯಾಟ್ರಿಕ್ ಹೀರೋಗೆ ವಯಸ್ಸೇ ಆಗೋಲ್ಲ ಎಂದ ಅಭಿಮಾನಿಗಳು

2016ರಲ್ಲಿ ತೆರೆಗೆ ಬಂದ ‘ಕೃಷ್ಣ ಗಾಡಿ ವೀರ ಪ್ರೇಮ ಗಾಥ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು ನಟಿ ಮೆಹ್ರೀನ್. ತೆಲುಗಿನ ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಬಳಿಕ ಹಿಂದಿ, ತಮಿಳು ಸಿನಿಮಾಗಳಲ್ಲಿಯೂ ನಟಿಸಿದರು. ಶಿವರಾಜ್​ಕುಮಾರ್ ನಟನೆಯ ‘ನೀ ಸಿಗೋವರೆಗೂ’ ಚಿತ್ರದಲ್ಲೂ ಮೆಹ್ರೀನ್ ಅವರು ಬಣ್ಣ ಹಚ್ಚುತ್ತಿದ್ದಾರೆ. ಇದು ಕನ್ನಡದಲ್ಲಿ ಅವರ ಮೊದಲ ಸಿನಿಮಾ. ಶಿವರಾಜ್​ಕುಮಾರ್ ಅವರ 124ನೇ ಸಿನಿಮಾ ಇದಾಗಿದೆ. ‘ಭಜರಂಗಿ 2′ ಚಿತ್ರದಲ್ಲಿ ‘ನೀ ಸಿಗೋವರೆಗೂ..’ ಹೆಸರಿನ ಹಾಡಿದೆ. ಈಗ ಅದನ್ನೇ ಈ ಸಿನಿಮಾಗೆ ಶೀರ್ಷಿಕೆ ಮಾಡಿರುವುದು ವಿಶೇಷ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ಗೆ ಜತೆಯಾಗಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತಕ್ಕೆ ಸುದೀಪ್ ಆಗಮಿಸಿ ಕ್ಲ್ಯಾಪ್ ಮಾಡಿದ್ದರು.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು