AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಎಂಟ್ರಿ ಕೊಡೋ ಸಮಯದಲ್ಲಿ ನಟಿಯ ಮುಖಕ್ಕೆಲ್ಲ ಚುಚ್ಚಿದೆ ಸೂಜಿ; ನೋವು ನೆನೆದು ಬೇಸರಗೊಂಡ ಫ್ಯಾನ್ಸ್

ಅಕ್ಯು ಸ್ಕಿನ್ ಲಿಫ್ಟ್​ ಹೆಸರಿನ ಟ್ರೀಟ್​ಮೆಂಟ್ ಮಾಡಿಸಿಕೊಂಡಿದ್ದಾರೆ ಮೆಹ್ರೀನ್. ಇದಕ್ಕಾಗಿ ಅವರು ವಿದೇಶದಲ್ಲಿ ಖ್ಯಾತ ವೈದ್ಯರೊಬ್ಬರನ್ನು ಭೇಟಿ ಮಾಡಿದ್ದಾರೆ.

ಕನ್ನಡಕ್ಕೆ ಎಂಟ್ರಿ ಕೊಡೋ ಸಮಯದಲ್ಲಿ ನಟಿಯ ಮುಖಕ್ಕೆಲ್ಲ ಚುಚ್ಚಿದೆ ಸೂಜಿ; ನೋವು ನೆನೆದು ಬೇಸರಗೊಂಡ ಫ್ಯಾನ್ಸ್
TV9 Web
| Edited By: |

Updated on: Dec 02, 2022 | 7:23 AM

Share

ನಟ-ನಟಿಯರು ಸೌಂದರ್ಯವೃದ್ಧಿಗೆ ಹೊಸಹೊಸ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಕೆಲವೊಂದು ಯಶಸ್ಸು ಕೊಟ್ಟರೆ ಇನ್ನೂ ಕೆಲವರು ಅಡ್ಡಪರಿಣಾಮ ಬೀರುತ್ತದೆ. ಇದರಿಂದ ಇರುವ ಸೌಂದರ್ಯವೂ ಹಾಳಾಗುತ್ತದೆ. ಈಗ ಮೆಹ್ರೀನ್​ ಫಿರ್ಜಾದ (Mehreen Pirzada) ಅವರು ಒಂದು ರಿಸ್ಕಿ ಥೆರಪಿ ಮಾಡಿಸಿದ್ದಾರೆ. ಮುಖದ ತುಂಬೆಲ್ಲ ಅವರು ಗುಂಡುಸೂಜಿ ಚುಚ್ಚಿಸಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ! ಅವರಿಗೆ ಎಷ್ಟು ನೋವಾಗಿರಬಹುದು ಎಂಬುದನ್ನು ನೆನೆದು ಅಭಿಮಾನಿಗಳು (Fans) ಬೇಸರ ಮಾಡಿಕೊಂಡಿದ್ದಾರೆ.

ಅಕ್ಯು ಸ್ಕಿನ್ ಲಿಫ್ಟ್​ ಹೆಸರಿನ ಟ್ರೀಟ್​ಮೆಂಟ್ ಮಾಡಿಸಿಕೊಂಡಿದ್ದಾರೆ ಮೆಹ್ರೀನ್. ಇದಕ್ಕಾಗಿ ಅವರು ವಿದೇಶದಲ್ಲಿ ಖ್ಯಾತ ವೈದ್ಯರೊಬ್ಬರನ್ನು ಭೇಟಿ ಮಾಡಿದ್ದಾರೆ. ಅಕ್ಯು ಸ್ಕಿನ್ ಲಿಫ್ಟ್​ ಥೆರಪಿ ಮಾಡಿಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೆಹ್ರೀನ್ ಹಂಚಿಕೊಂಡಿದ್ದಾರೆ​. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟಿಯ ಕೆನ್ನೆ, ಹಣೆ ಭಾಗಕ್ಕೆಲ್ಲ ಸೂಜಿಗಳನ್ನು ಚುಚ್ಚಲಾಗಿದೆ. ಇದನ್ನು ನೋಡಿ ಫ್ಯಾನ್ಸ್​ಗೆ ನೋವಾಗಿದೆ.

‘ಅಷ್ಟೊಂದು ಸೂಜಿ ಚುಚ್ಚಿಸಿಕೊಂಡಿದ್ದೀರಿ. ನಿಮಗೆ ನೋವಾಗುವುದಿಲ್ಲವೇ? ಇಂತಹ ರಿಸ್ಕ್​ ಏಕೆ?’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ಒಂದನ್ನು ಮಾಡಲು ಹೋಗಿ ಮತ್ತೊಂದು ಆದೀತು’ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಸದ್ಯ ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಬಗೆಬಗೆಯಲ್ಲಿ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ‘ನೀ ಸಿಗೋವರೆಗೂ’ ಚಿತ್ರದ ಲವರ್ ಬಾಯ್ ಶಿವಣ್ಣ ಲುಕ್ ರಿಲೀಸ್; ಹ್ಯಾಟ್ರಿಕ್ ಹೀರೋಗೆ ವಯಸ್ಸೇ ಆಗೋಲ್ಲ ಎಂದ ಅಭಿಮಾನಿಗಳು

2016ರಲ್ಲಿ ತೆರೆಗೆ ಬಂದ ‘ಕೃಷ್ಣ ಗಾಡಿ ವೀರ ಪ್ರೇಮ ಗಾಥ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ್ದರು ನಟಿ ಮೆಹ್ರೀನ್. ತೆಲುಗಿನ ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಬಳಿಕ ಹಿಂದಿ, ತಮಿಳು ಸಿನಿಮಾಗಳಲ್ಲಿಯೂ ನಟಿಸಿದರು. ಶಿವರಾಜ್​ಕುಮಾರ್ ನಟನೆಯ ‘ನೀ ಸಿಗೋವರೆಗೂ’ ಚಿತ್ರದಲ್ಲೂ ಮೆಹ್ರೀನ್ ಅವರು ಬಣ್ಣ ಹಚ್ಚುತ್ತಿದ್ದಾರೆ. ಇದು ಕನ್ನಡದಲ್ಲಿ ಅವರ ಮೊದಲ ಸಿನಿಮಾ. ಶಿವರಾಜ್​ಕುಮಾರ್ ಅವರ 124ನೇ ಸಿನಿಮಾ ಇದಾಗಿದೆ. ‘ಭಜರಂಗಿ 2′ ಚಿತ್ರದಲ್ಲಿ ‘ನೀ ಸಿಗೋವರೆಗೂ..’ ಹೆಸರಿನ ಹಾಡಿದೆ. ಈಗ ಅದನ್ನೇ ಈ ಸಿನಿಮಾಗೆ ಶೀರ್ಷಿಕೆ ಮಾಡಿರುವುದು ವಿಶೇಷ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ಗೆ ಜತೆಯಾಗಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತಕ್ಕೆ ಸುದೀಪ್ ಆಗಮಿಸಿ ಕ್ಲ್ಯಾಪ್ ಮಾಡಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ