AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mellage Song: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಬಂತು ‘ಮೆಲ್ಲಗೆ..’ ಮೆಲೋಡಿ ಸಾಂಗ್​

Raj B Shetty: ಒಂದಷ್ಟು ಕಾರಣಗಳಿಂದಾಗಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ‘ಮೆಲ್ಲಗೆ..’ ಹಾಡಿನಿಂದಾಗಿ ಆ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ. ಈ ಗೀತೆಗೆ ಮಿಧುನ್‍ ಮುಕುಂದನ್‍ ಸಂಗೀತ ಸಂಯೋಜಿಸಿದ್ದಾರೆ. ಮಾಧುರಿ ಶೇಷಾದ್ರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಪೃಥ್ವಿ ಅವರು ಸಾಹಿತ್ಯ ರಚಿಸಿದ್ದಾರೆ.

Mellage Song: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಬಂತು ‘ಮೆಲ್ಲಗೆ..’ ಮೆಲೋಡಿ ಸಾಂಗ್​
ಸಿರಿ ರವಿಕುಮಾರ್​, ರಾಜ್​ ಬಿ. ಶೆಟ್ಟಿ
ಮದನ್​ ಕುಮಾರ್​
|

Updated on: Nov 06, 2023 | 9:01 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಜ್​ ಬಿ. ಶೆಟ್ಟಿ (Raj B Shetty) ನಟನೆ, ನಿರ್ದೇಶನದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಅಭಿನಯಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಆ ಪ್ರಾಜೆಕ್ಟ್​ನಿಂದ ಹಿಂದೆ ಸರಿದು, ಕೇವಲ ನಿರ್ಮಾಪಕಿಯಾಗಿ ಮುಂದುವರಿದರು. ನಾಯಕಿಯ ಸ್ಥಾನಕ್ಕೆ ನಟಿ ಸಿರಿ ರವಿಕುಮಾರ್​ ಎಂಟ್ರಿ ಆಯಿತು. ಈ ಸಿನಿಮಾದ ಬಿಡುಗಡೆಗೆ ಈಗ ದಿನಗಣನೆ ಶುರುವಾಗಿದೆ. ನವೆಂಬರ್​ 24ರಂದು ‘ಸ್ವಾತಿ ಮುತ್ತಿನ ಮಳೆ ಹನಿಯೇ(Swathi Mutthina Male Haniye) ಸಿನಿಮಾ ರಿಲೀಸ್​ ಆಗಲಿದೆ. ಈಗ ಈ ಚಿತ್ರದಿಂದ ಮೊದಲ ಸಾಂಗ್​ ಬಿಡುಗಡೆ ಆಗಿದೆ. ‘ಮೆಲ್ಲಗೆ..’ ಎಂಬ ಈ ಸಾಂಗ್​ ಸಖತ್​ ಮಧುರವಾಗಿದೆ. ಸಂಗೀತಪ್ರೇಮಿಗಳು ಈ ಹಾಡನ್ನು ಕೇಳಿ ತಲೆದೂಗುತ್ತಿದ್ದಾರೆ. ಒಂದಷ್ಟು ಕಾರಣಗಳಿಂದಾಗಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ. ‘ಮೆಲ್ಲಗೆ..’ ಹಾಡಿನಿಂದಾಗಿ ಆ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ನಿರ್ದೇಶನದಿಂದ ಗುರುತಿಸಿಕೊಂಡಿರುವ ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಈ ಸಿನಿಮಾದ ಕಥೆಯ ಬಗ್ಗೆ ವಿಶೇಷವಾದ ನಿರೀಕ್ಷೆ ಮನೆ ಮಾಡಿದೆ. ‘ಮೆಲ್ಲಗೆ..’ ಗೀತೆಗೆ ಮಿಧುನ್‍ ಮುಕುಂದನ್‍ ಅವರು ಸಂಗೀತ ಸಂಯೋಜಿಸಿದ್ದಾರೆ. ಮಾಧುರಿ ಶೇಷಾದ್ರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಪೃಥ್ವಿ ಅವರು ಈ ಹಾಡನ್ನು ಬರೆದಿದ್ದಾರೆ. ಹಾಡಿನ ಬಗ್ಗೆ ಮಾತಾಡಿದ ರಾಜ್‍ ಬಿ. ಶೆಟ್ಟಿ ಅವರು, ‘ಪ್ರೀತಿಯ ಕುರಿತ ಮಹಿಳೆಯ ದೃಷ್ಟಿಕೋನದ ಹಾಡು ಇದು. ಈ ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎಂಬುದು ಬೇಕಾಗಿತ್ತು. ಆದ್ದರಿಂದ ಪೃಥ್ವಿ ಅವರಿಂದ ಇದನ್ನು ಬರೆಸಿದ್ದೇನೆ’ ಎಂದಿದ್ದಾರೆ.

‘ಮೆಲ್ಲಗೆ..’ ಗೀತೆಯಲ್ಲಿ ಶಾಸ್ತ್ರೀಯ ಸಂಗೀತದ ಸ್ಪರ್ಶ ಇದೆ. ಸಂಗೀತ ನಿರ್ದೇಶಕ ಮಿಧುನ್‍ ಮುಕುಂದನ್‍ ಅವರು ತಮ್ಮ ಸಂಗೀತದಿಂದ ಮೋಡಿ ಮಾಡುತ್ತಾರೆ ಎಂಬುದು ರಾಜ್​ ಬಿ. ಶೆಟ್ಟಿ ಅವರ ಅಭಿಪ್ರಾಯ. ಸ್ವತಃ ಹಿನ್ನೆಲೆ ಗಾಯಕಿಯೂ ಆಗಿರುವ ಈ ಸಿನಿಮಾದ ನಟಿ ಸಿರಿ ರವಿಕುಮಾರ್ ಈ ಸಾಂಗ್​ಗೆ ಫಿದಾ ಆಗಿದ್ದಾರೆ. ತಾವು ಈ ಹಾಡನ್ನು ಮತ್ತೆ ಮತ್ತೆ ಕೇಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ ಮತ್ತು ಸಿರಿ ರವಿಕುಮಾರ್​ ಜೊತೆಗೆ ಬಾಲಾಜಿ ಮನೋಹರ್‍, ರೇಖಾ ಕೂಡ್ಲಿಗಿ, ಸೂರ್ಯ ವಸಿಷ್ಠ, ಜೆ.ಪಿ. ತುಮ್ಮಿನಾಡು, ಸ್ನೇಹ ಶರ್ಮಾ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ: ಹೃದಯಾಘಾತ ವಿಚಾರಕ್ಕೆ ಸ್ಪಷ್ಟನೆ ನೀಡಿದ ನಟಿ ರಮ್ಯಾ

‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ದಿವ್ಯ ಸ್ಪಂದನಾ ಅವರ ಒಡೆತನದ ‘ಆ್ಯಪಲ್‍ ಬಾಕ್ಸ್ ಸ್ಟುಡಿಯೋಸ್‍’ ಸಂಸ್ಥೆಯ ಮೂಲಕ ನಿರ್ಮಾಣ ಆದ ಮೊದಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಈ ಸಿನಿಮಾದ ನಿರ್ಮಾಣದಲ್ಲಿ ‘ಲೈಟರ್‍ ಬುದ್ಧ ಫಿಲ್ಮ್ಸ್​’ ಸಂಸ್ಥೆ ಕೂಡ ಕೈ ಜೋಡಿಸಿದೆ. ‘ಕೆ.ಆರ್.ಜಿ. ಸ್ಟುಡಿಯೋಸ್‍’ ಮೂಲಕ ರಾಜ್ಯಾದ್ಯಂತ ನವೆಂಬರ್​ 24ರಂದು ರಿಲೀಸ್​ ಆಗಲಿದೆ. ಪ್ರವೀಣ್‍ ಶ್ರೀಯಾನ್‍ ಅವರು ಈ ಸಿನಿಮಾದ ಛಾಯಾಗ್ರಹಣ ಮಾಡುವುದರ ಜೊತೆಗೆ, ರಾಜ್‍ ಜೊತೆಗೂಡಿ ಸಂಕಲನದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!