AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಪಡೆಯಲು ದರ್ಶನ್​ಗೆ ಮುಳುವಾಗುತ್ತಾ ಆ ಒಂದು ಸನ್ನೆ?

ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್​ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್​ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ.

ಜಾಮೀನು ಪಡೆಯಲು ದರ್ಶನ್​ಗೆ ಮುಳುವಾಗುತ್ತಾ ಆ ಒಂದು ಸನ್ನೆ?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Sep 14, 2024 | 9:18 AM

Share

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ ಎಂಬ ಅಭಿಪ್ರಾಯ ಇದೆ. ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್​ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ.

ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್​ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್​ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ. ಜೈಲಿನಿಂದ ರೌಡಿಶೀಟರ್ ಮಗನೊಬ್ಬನಿಗೆ ದರ್ಶನ್ ವಿಡಿಯೋ ಕಾಲ್ ಮಾಡಿದ್ದರು. ಇದನ್ನೂ ಪೊಲೀಸರು ಪ್ರಮುಖ ಅಂಶವಾಗಿ ಉಲ್ಲೇಖ ಮಾಡಲಿದ್ದಾರೆ. ‘ದರ್ಶನ್ ಜೈಲಿನಲ್ಲಿದ್ದು ಮೊಬೈಲ್ ಬಳಕೆ ಮಾಡಿದ್ದಾರೆ’ ಎಂದು ಪೊಲೀಸರು ಹೇಳಲಿದ್ದಾರೆ.

ಇಷ್ಟೆಲ್ಲ ಮಾಡಿದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೂ ಅವರು ಬುದ್ಧಿ ಕಲಿತಿಲ್ಲ. ಬಳ್ಳಾರಿ ಜೈಲಿನಲ್ಲಿಯ ದರ್ಶನ್ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಕ್ಯಾಮೆರಾಗಳ ಮುಂದೆ ಮಧ್ಯದ ಬೆರಳು ತೋರಿಸಿದ್ದಾರೆ. ಆದರೆ, ಫ್ಯಾನ್ಸ್ ಇದನ್ನೂ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅದು ವಿಘ್ನ ಹರ ಮುದ್ರ ಎಂದು ದರ್ಶನ್ ಪರ ಫ್ಯಾನ್ಸ್ ಹೇಳುತ್ತಿದ್ದಾರೆ. ಆದರೆ, ಇದನ್ನು ಎಲ್ಲರೂ ಒಪ್ಪುತ್ತಿಲ್ಲ. ಈ ವಿಚಾರವನ್ನೂ ಪೊಲೀಸರು ಪ್ರಸ್ತಾಪ ಮಾಡಲಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನ ಆಗಿರುವ ದರ್ಶನ್​ಗೆ ಯಾವುದೇ ಪಶ್ಚಾತ್ತಾಪದ ಭಾವನೆ ಇಲ್ಲ. ಈಗಾಗಲೇ ಸಾಕ್ಷ್ಯ ನಾಶಕ್ಕೆ ದರ್ಶನ್ ಹಲವು ಪ್ರಯತ್ನ ಮಾಡಿದ್ದಾರೆ. ‘ಹೊರಗೆ ಬಂದರೆ ಮತ್ತೆ ಪ್ರಭಾವ ಬಳಸಿ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಹುದು. ರೌಡಿಶೀಟರ್​ಗಳು, ಪ್ರಭಾವಿಗಳ ಸಹಾಯದಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿಸುವ ಸಾಧ್ಯತೆ. ಹೀಗಾಗಿ ದರ್ಶನ್​ಗೆ ಜಾಮೀನು ನೀಡಬಾರದು’ ಎಂದು ಪೊಲೀಸರು ಆಕ್ಷೇಪಣೆ ಸಲ್ಲಿಸೋ ಸಾಧ್ಯತೆ ಇದೆ.

(ವರದಿ: ಪ್ರದೀಪ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Sat, 14 September 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ