AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಬೇಡಿಕೆಯನ್ನು ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.  

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ
ರಾಜೇಶ್ ದುಗ್ಗುಮನೆ
|

Updated on:Mar 08, 2024 | 11:41 AM

Share

ನಟಿ ಮಿಲನಾ ನಾಗರಾಜ್ (Milana Nagaraj) ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ತೆರೆಮೇಲೆ ಹಾಗೂ ತೆರೆ ಹಿಂದೆ ಫೇವರಿಟ್ ಜೋಡಿ ಎನಿಸಿಕೊಂಡಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಇವರು 2021ರ ಫೆಬ್ರವರಿ 14ರಂದು ಮದುವೆ ಆದರು. ಈಗ ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ. 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ದಂಪತಿಗೆ ವಿಶ್ ತಿಳಿಸುತ್ತಿದ್ದಾರೆ.

ಮಿಲನಾ ನಾಗರಾಜ್ ಹಾಗೂ ಕೃಷ್ಣ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಪ್ರಪೋಸಲ್​ನ ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.

ಮಿಲನಾ ಮಾಡಿರೋ ಪೋಸ್ಟ್..

ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ ಅವರು. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಸೆಪ್ಟೆಂಬರ್ 2024 ಎಂದು ಬರೆದಿದ್ದಾರೆ. ಈ ಮೂಲಕ ಮಗುವಿನ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಕೂಡ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ಪಡುಕೋಣೆ ಹೇಳಿದ್ದರು. ಈಗ ಮಿಲನಾ ನಾಗರಾಜ್ ಕಡೆಯಿಂದಲೂ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 March 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ