AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಬೇಡಿಕೆಯನ್ನು ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.  

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ
ರಾಜೇಶ್ ದುಗ್ಗುಮನೆ
|

Updated on:Mar 08, 2024 | 11:41 AM

Share

ನಟಿ ಮಿಲನಾ ನಾಗರಾಜ್ (Milana Nagaraj) ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ತೆರೆಮೇಲೆ ಹಾಗೂ ತೆರೆ ಹಿಂದೆ ಫೇವರಿಟ್ ಜೋಡಿ ಎನಿಸಿಕೊಂಡಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಇವರು 2021ರ ಫೆಬ್ರವರಿ 14ರಂದು ಮದುವೆ ಆದರು. ಈಗ ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ. 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ದಂಪತಿಗೆ ವಿಶ್ ತಿಳಿಸುತ್ತಿದ್ದಾರೆ.

ಮಿಲನಾ ನಾಗರಾಜ್ ಹಾಗೂ ಕೃಷ್ಣ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಪ್ರಪೋಸಲ್​ನ ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.

ಮಿಲನಾ ಮಾಡಿರೋ ಪೋಸ್ಟ್..

ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ ಅವರು. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಸೆಪ್ಟೆಂಬರ್ 2024 ಎಂದು ಬರೆದಿದ್ದಾರೆ. ಈ ಮೂಲಕ ಮಗುವಿನ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಕೂಡ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ಪಡುಕೋಣೆ ಹೇಳಿದ್ದರು. ಈಗ ಮಿಲನಾ ನಾಗರಾಜ್ ಕಡೆಯಿಂದಲೂ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 March 24

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್