AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಬೇಡಿಕೆಯನ್ನು ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.  

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ; ಸಿಹಿ ಸುದ್ದಿಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ
Follow us
ರಾಜೇಶ್ ದುಗ್ಗುಮನೆ
|

Updated on:Mar 08, 2024 | 11:41 AM

ನಟಿ ಮಿಲನಾ ನಾಗರಾಜ್ (Milana Nagaraj) ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ತೆರೆಮೇಲೆ ಹಾಗೂ ತೆರೆ ಹಿಂದೆ ಫೇವರಿಟ್ ಜೋಡಿ ಎನಿಸಿಕೊಂಡಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಇವರು 2021ರ ಫೆಬ್ರವರಿ 14ರಂದು ಮದುವೆ ಆದರು. ಈಗ ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ. 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ದಂಪತಿಗೆ ವಿಶ್ ತಿಳಿಸುತ್ತಿದ್ದಾರೆ.

ಮಿಲನಾ ನಾಗರಾಜ್ ಹಾಗೂ ಕೃಷ್ಣ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 2015ರಲ್ಲಿ ತೆರೆಗೆ ಬಂದ ‘ಚಾರ್ಲಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಆಗ ಇವರ ಮಧ್ಯೆ ಪ್ರೀತಿ ಮೂಡಿತ್ತು. ಡಾರ್ಲಿಂಗ್ ಕೃಷ್ಣ ಇಟ್ಟ ಪ್ರಪೋಸಲ್​ನ ಮಿಲನಾ ಒಪ್ಪಿದ್ದರು. 2021ರಲ್ಲಿ ಇವರು ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗುತ್ತಿದೆ.

ಮಿಲನಾ ಮಾಡಿರೋ ಪೋಸ್ಟ್..

ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ ಅವರು. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಸೆಪ್ಟೆಂಬರ್ 2024 ಎಂದು ಬರೆದಿದ್ದಾರೆ. ಈ ಮೂಲಕ ಮಗುವಿನ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಕೂಡ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ಪಡುಕೋಣೆ ಹೇಳಿದ್ದರು. ಈಗ ಮಿಲನಾ ನಾಗರಾಜ್ ಕಡೆಯಿಂದಲೂ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 March 24

ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ