AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಪ್ರೇಮಿಗಳ ದಿನ.. ಸಪ್ತಪದಿ ತುಳಿಯುತ್ತಿದ್ದಾರೆ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್

Milana Nagaraj and Darling Krishna Wedding | ಇಂದು ಕೃಷ್ಣ ಹಾಗೂ ಮಿಲನಾ ಮದುವೆ ಆಗುತ್ತಿದ್ದಾರೆ. ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳು ವೈರಲ್​ ಆಗಿವೆ.

ಇಂದು ಪ್ರೇಮಿಗಳ ದಿನ.. ಸಪ್ತಪದಿ ತುಳಿಯುತ್ತಿದ್ದಾರೆ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Feb 14, 2021 | 7:14 AM

ಲವ್​ ಮಾಕ್ಟೇಲ್​ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ಮದುವೆಯೇನೋ ಆಗುತ್ತಾರೆ. ಆದರೆ, ಕೊನೆಯಲ್ಲಿ ಮಿಲನಾ ಸತ್ತು ಹೋಗುತ್ತಾರೆ. ಈ ದೃಶ್ಯ ಅನೇಕರ ಕಣ್ಣಲ್ಲಿ ನೀರು ತರಿಸಿತ್ತು. ಹೀಗಿರುವಾಗಲೇ ಅಚ್ಚರಿಯ ವಿಚಾರವನ್ನು ಬಹಿರಂಗ ಮಾಡಿತ್ತು ಈ ಜೋಡಿ. ಅದೇನೆಂದರೆ, ಇಬ್ಬರೂ ಪರಸ್ಪರ ಪ್ರೀತಿಯಲ್ಲಿದ್ದೇವೆ. ಶೀಘ್ರವೇ ಮದುವೆ ಕೂಡ ಆಗುತ್ತೇವೆ ಎಂದಿದ್ದರು. ಅಂತೆಯೇ, ಇಂದು ಪ್ರೇಮಿಗಳ ದಿನದ ಅಂಗವಾಗಿ (ಫೆ.14) ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ಮದುವೆ ಆಗುತ್ತಿದ್ದಾರೆ.

ನಾಯಕ ನಟನಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡಾರ್ಲಿಂಗ್‌ ಕೃಷ್ಣ ಮೊದಲ ಬಾರಿಗೆ ಲವ್‌ ಮಾಕ್‌ಟೇಲ್‌ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡಿದ್ದರು. ಈ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್ ನಡುವೆ ಪ್ರೀತಿ ಇರುವ ವಿಚಾರ ಬಹಿರಂಗವಾಗಿತ್ತು. 2015ರಲ್ಲಿ ತೆರೆಕಂಡ ಚಾರ್ಲಿ ಚಿತ್ರದಲ್ಲಿ ಇವರಿಬ್ಬರೂ ಒಟ್ಟಿಗೆ ನಟಿಸಿದ್ದು, ಈ ಸಂದರ್ಭದಲ್ಲಿ ಕೃಷ್ಣ ಲವ್‌ ಪ್ರಪೋಸ್‌ ಮಾಡಿದ್ದರಂತೆ. ಚಾರ್ಲಿ ಚಿತ್ರದ ಶೂಟಿಂಗ್‌ ಮುಗಿಯುತ್ತಾ ಬಂದಿತ್ತು. ಈ ವೇಳೆ ಒಂದು ದಿನ ಮಿಲನಾ ಅವರನ್ನು ಕಾರಿನಲ್ಲಿ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗಿದ್ದ ಕೃಷ್ಣ ಮದುವೆಗೆ ನೇರವಾಗಿ ಪ್ರಪೋಸ್‌ ಮಾಡಿದ್ದರಂತೆ. ಮಿಲನಾ ಕೂಡ ಇವರ ಪ್ರಪೋಸ್​ ಒಪ್ಪಿಕೊಂಡಿದ್ದರು.

darling krishna weds milana nagaraj

ಮಿಲನಾ ನಾಗರಾಜ್​ ಮದುವೆ

ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳು ವೈರಲ್​ ಆಗಿವೆ. ಪ್ರೇಮಿಗಳ ದಿನಾಚರಣೆಯಂದೇ ಮದುವೆಯಾಗುವುದಾಗಿ ಇವರಿಬ್ಬರೂ ಕಳೆದ ವರ್ಷವೇ ಸುಳಿವು ನೀಡಿದ್ದರು. ನಂತರ ಅದು ಅಧಿಕೃತವಾಗಿ ಇದೀಗ ಅವರಿಬ್ಬರೂ ಒಂದಾಗುವ ಕಾಲ ಸನ್ನಿಹಿತವಾಗಿದೆ.

ಇದನ್ನೂ ಓದಿ: ಕೃಷ್ಣ Weds ಮಿಲನಾ ವೈರಲ್​ ಪಿಕ್ಸ್

ಬೆಂಗಳೂರಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9.30 ರಿಂದ 10.30ರ ಕಾಲದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ವಿವಾಹ ಕಾರ್ಯಕ್ರಮಕ್ಕೆ ಇವರಿಬ್ಬರೂ ಚಂದನವನದ ಅನೇಕ ನಟ, ನಟಿಯರನ್ನು ಆಹ್ವಾನಿಸಿದ್ದು, ಬಹುತೇಕರು ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂತೆಯೇ, ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!